Homeಚಳವಳಿಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ - ಈ ಸಮಾಜ...

ಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ – ಈ ಸಮಾಜ ಬದಲಾಗುವುದೆಂದು?

- Advertisement -
- Advertisement -

ಮಹಿಳೆಯರ ವಿಚಾರದಲ್ಲಿ ನಮ್ಮ ಸಮಾಜ ಇನ್ನು ಎಷ್ಟು ಹಿಂದುಳಿದಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿರುತ್ತದೆ. ಈ ಇಪ್ಪತ್ತೊಂದನೇ ಶತಮಾನದಲ್ಲಿಯೂ ಭಾರತದ ಹಲವು ಪುರುಷರ ತಲೆಗಳು ಕ್ರಿ.ಪೂ ಕಾಲದಂತೆಯೇ ಯೋಚಿಸುತ್ತವೆ ಎಂಬುದನ್ನು ಮಧ್ಯಪ್ರದೇಶದ ರಾಜಕಾರಣಿಗಳು ಸಾಬೀತುಪಡಿಸುತ್ತಿದ್ದಾರೆ. “ಯಾವುದೇ ಮಹಿಳೆಯು ಕೆಲಸಕ್ಕಾಗಿ ಮನೆಯಿಂದ ಹೊರಹೋದರೆ ಅವರು ತಾವಾಗಿಯೇ ಸರ್ಕಾರದ ಬಳಿ ನೋಂದಣಿ ಮಾಡಿಸಬೇಕು ಮತ್ತು ಸರ್ಕಾರ ಅವರನ್ನು ಟ್ಯ್ರಾಕ್ ಮಾಡಲಾಗುತ್ತದೆ” ಎಂದು ಅಲ್ಲಿನ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಪುರುಷಾಧಿಪತ್ಯ ವಿಚಾರದಲ್ಲಿ ನಾವೇನು ಕಡಿಮೆಯಿಲ್ಲವೆಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಖಂಡ “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ, ಹಾಗಿದ್ದಮೇಲೆ ಮದುವೆ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವುದೇಕೆ” ಎಂದು ಪ್ರಶ್ನಿಸುವ ಮೂಲಕ ತಮ್ಮ ಸನಾತನ ಕಸವನ್ನು ಹೊರಹಾಕಿದ್ದಾರೆ.

ಮಧ್ಯಪ್ರದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಮಹಿಳೆಯರನ್ನು ಮತ್ತಷ್ಟು ಬಂಧಿಯಾಗಿಸುವ ಹುನ್ನಾರದಲ್ಲಿ ನಿರತರಾಗಿವೆ. ಮಹಿಳೆಯರನ್ನು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಾಗಿಯೇ ನೋಡುತ್ತಿದ್ದಾರೆಯೇ ಹೊರತು ಮಹಿಳೆಯರು ಸಹ ಮನುಷ್ಯರು, ಅವರಿಗೆ ಭಾವನೆಗಳಿವೆ, ಅವರಿಗೂ ಸಮಾನ ಹಕ್ಕುಗಳಿವೆ ಎಂಬ ಕನಿಷ್ಠ ಜ್ಞಾನವನ್ನು ಈ ರಾಜಕಾರಣಿಗಳು ಮರೆತ್ತಿದ್ದಾರೆ.


ಇದನ್ನೂ ಓದಿ: ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ


ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹಿಳೆಯರ ಸುರಕ್ಷತೆಗಾಗಿ ಸಮ್ಮಾನ್ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಆ ವೇಳೆ ಮಹಿಳೆಯರು ಮನೆಯಿಂದ ಹೊರಗೆ ದುಡಿಯಲು ಹೋದರೆ ಅವರು ಸರ್ಕಾರದ ಬಳಿ ದಾಖಲು ಮಾಡಿಕೊಳ್ಳಬೇಕು. ಸರ್ಕಾರ ಅವರನ್ನು ನಿರಂತರವಾಗಿ ಟ್ಯ್ರಾಕ್ ಮಾಡುತ್ತದೆ ಎಂದಿದ್ದಾರೆ. ಅಂದರೆ ಮಹಿಳೆಯರ ರಕ್ಷಣೆಗಾಗಿ ಮೂಲಭೂತವಾಗಿ ಏನು ಮಾಡಬೇಕು ಎಂಬುದೇ ಸರ್ಕಾರಕ್ಕೆ ಗೊತ್ತಿಲ್ಲ. ಸರ್ಕಾರ, ಸಮಾಜ ಮತ್ತು ಸಂಪತ್ತಿನಲ್ಲಿ ಮಹಿಳೆಯರಿಗೆ ಸಮಪಾಲು ನೀಡಿದಾಗ ಮಾತ್ರ ಅವರ ರಕ್ಷಣೆ ಸಾಧ್ಯ ಎಂದು ಮಹಿಳಾ ಸಂಘಟನೆಗಳು ಆಗ್ರಹಿಸುತ್ತಿವೆ. ಆದರೆ ಸರ್ಕಾರ ಮಾತ್ರ ಅವರನ್ನು ಟ್ಯ್ರಾಕ್ ಮಾಡುತ್ತೇವೆ ಎನ್ನುತ್ತದೆ.

ಇನ್ನು ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಪಿಡಬ್ಲೂಡಿ ಸಚಿವರಾಗಿದ್ದ, ಮಾಜಿ ಸಿಎಂ ಕಮಲ್ ನಾಥ್‌ರವರ ಆಪ್ತ ಎನ್ನಲಾದ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮಾ ಹುಡುಗಿಯರಿಗೆ 15 ವರ್ಷಕ್ಕೆ ಮದುವೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ. ಇದನ್ನು ನಾನು ಕಂಡುಹಿಡಿದುದ್ದಲ್ಲ. ಹಲವು ವೈದ್ಯರುಗಳೇ ಹೇಳಿದ್ದಾರೆ. ಹಾಗಾಗಿ 18 ವರ್ಷಕ್ಕೆ ಅವರಿಗೆ ಮದುವೆ ಮಾಡುವುದು ಸರಿಯಿದೆ. ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬೇಡ” ಎಂದು ಅವರು ವಾದಿಸಿದ್ದಾರೆ.

ಮುಂದುವರಿದು “ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಲು ಹೊರಟಿದ್ದಾರೆ. ಇದನ್ನು ಮಾಡಲು ಅವರೇನು ವಿಜ್ಞಾನಿಗಳೆ ಅಥವಾ ವೈದ್ಯರೇ” ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಸಜ್ಜನ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಸೋನಿಯಾಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇದ್ದು ಇಂತಹ ಹೇಳಿಕೆ ಕೊಡುವವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.

ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಸಜ್ಜನ್ ವರ್ಮಾ ಅವರಿಗೆ ನೋಟಿಸ್ ನೀಡಿದ್ದು, ಎರಡು ದಿನಗಳಲ್ಲಿ ವಿವರಣೆಯನ್ನು ನೀಡುವಂತೆ ಆದೇಶಿಸಿದೆ. ಆದರೆ ಕಾಂಗ್ರೆಸ್ ಮುಖಂಡರು ಸಜ್ಜನ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳದೆ, ಅವರು ಮುಖ್ಯಮಂತ್ರಿಗಳು ಕೇವಲ ಪ್ರಚಾರಕ್ಕಾಗಿ ಹೇಳಿಕೆ ಕೊಡುವುದನ್ನು ವಿರೋಧಿಸಿದ್ದಾರೆ ಅಷ್ಟೇ ಎಂದು ತೇಪೆ ಹಚ್ಚಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳಿಗೂ ಮಹಿಳೆಯರ ವಿಚಾರದಲ್ಲಿ ಸಂವೇದನಾಶೀಲತೆ ಹೊಂದಿಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...