Homeದಲಿತ್ ಫೈಲ್ಸ್ಮಧ್ಯಪ್ರದೇಶ| ಟ್ರ್ಯಾಕ್ಟರ್‌ನಿಂದ ದಲಿತ ಕುಟುಂಬದ ಗುಡಿಸಲು-ಬೆಳೆ ನಾಶಪಡಿಸಿದ ಸವರ್ಣೀಯರು; ಮುಖದ ಮೇಲೆ ಮೂತ್ರ ವಿಸರ್ಜಿಸಿ ದೌರ್ಜನ್ಯ

ಮಧ್ಯಪ್ರದೇಶ| ಟ್ರ್ಯಾಕ್ಟರ್‌ನಿಂದ ದಲಿತ ಕುಟುಂಬದ ಗುಡಿಸಲು-ಬೆಳೆ ನಾಶಪಡಿಸಿದ ಸವರ್ಣೀಯರು; ಮುಖದ ಮೇಲೆ ಮೂತ್ರ ವಿಸರ್ಜಿಸಿ ದೌರ್ಜನ್ಯ

- Advertisement -
- Advertisement -

ಮಧ್ಯಪ್ರದೇಶದಲ್ಲಿ ದಲಿತ ಕುಟುಂಬವನ್ನು ಬೆದರಿಸಿ, ಅವರಿಗೆ ದೈಹಿಕವಾಗಿ ಕಿರುಕುಳ ನೀಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. “ಮಾಜಿ ಸರಪಂಚನ ಮಕ್ಕಳು ತಮ್ಮ ಗುಡಿಸಲಿನ ಮೇಲೆ ಟ್ರ್ಯಾಕ್ಟರ್ ಓಡಿಸಿ, ಗೋಧಿ ಬೆಳೆಯನ್ನು ನಾಶಪಡಿಸಿದ್ದಾರೆ. ನಮ್ಮ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ, ವಿದ್ಯುತ್ ಶಾಕ್ ಕೊಟ್ಟು ಕೊಲೆ ಮಾಡಲು ಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಮಧ್ಯಪ್ರದೇಶದ ಗುನಾ ಜಿಲ್ಲೆಯ ಸಿರ್ಸಿ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಹಾರಿಯಾ ಕುಟುಂಬ (ಬುಡಕಟ್ಟು ದಲಿತ) ಮೇಲೆ ಪುಂಡರು ವಿಧ್ವಂಸಕರು ದಾಳಿ ನಡೆಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳಲ್ಲಿ ಬಂದ 15-20 ಜನರು ದಲಿತರ ಗುಡಿಸಲಿಗೆ ತಮ್ಮ ಟ್ರ್ಯಾಕ್ಟರ್‌ಗಳನ್ನು ಡಿಕ್ಕಿ ಹೊಡೆದಿದ್ದಾರೆ. ಹಠಾತ್ ದಾಳಿಯಿಂದ ಮನೆಯವರು ಬೆಚ್ಚಿಬಿದ್ದರು. ಆ ನಂತರ ಪುಂಡರು ಅವರನ್ನು ಒತ್ತೆಯಾಳಾಗಿಟ್ಟು ಥಳಿಸಿದ್ದಾರೆ.

ಸಂತ್ರಸ್ತ ಮಹಿಳೆ ತನ್ನನ್ನು ಹೊರತುಪಡಿಸಿ, ತನ್ನ ಪತಿ ಹರಿ ಸಿಂಗ್, ಮಗ ಸೋನು, ಸೋದರ ಮಾವ ಗಿಯಾನಿ ಸಿಂಗ್, ಸೋದರಳಿಯ ರಾಜು, ಸೊಸೆ ವಿದ್ದಿ ಬಾಯಿ ಬರ್ಖೇಡಾ ಕಾಲುವೆ ಬಳಿಯ ತನ್ನ ಜಮೀನಿನಲ್ಲಿ ನಿರ್ಮಿಸಲಾದ ಗುಡಿಸಲಿನಲ್ಲಿ ಮಲಗಿದ್ದರು. ಅಷ್ಟರಲ್ಲಿ ಎರಡು ಟ್ರ್ಯಾಕ್ಟರ್‌ಗಳಲ್ಲಿ ಮಾಜಿ ಸರಪಂಚ್‌, ಅವರ ಇಬ್ಬರು ಪುತ್ರರು ಹಾಗೂ 15-20 ಮಂದಿ ಸಂಬಂಧಿಕರು ಬಂದಿದ್ದರು. ಅವರ 10 ಬಿಘಾ ಬೆಳೆದ ಗೋಧಿ ಬೆಳೆಯನ್ನು ಟ್ರ್ಯಾಕ್ಟರ್‌ಗಳಿಂದ ನಾಶಪಡಿಸಿದರು. ಗುಡಿಸಲಿನ ಮೇಲೆ ಟ್ರ್ಯಾಕ್ಟರ್ ಓಡಿಸಲಾಗಿದೆ.

ವಿದ್ಯುತ್ ಶಾಕ್ ನೀಡುವ ಮೂಲಕ ದಾಳಿಕೋರರು ಎಲ್ಲರನ್ನೂ ಕೊಲ್ಲಲು ಬಯಸಿದ. ಆದರೆ, ವಿದ್ಯುತ್ ವೈಫಲ್ಯದಿಂದ ಅವನ ಯೋಜನೆಗಳು ಈಡೇರಲಿಲ್ಲ. ಇದಾದ ನಂತರ ಒಬ್ಬ ಪುಂಡ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಪೊಲೀಸರಿಗೆ ದೂರು ನೀಡದಂತೆ ಪ್ರಾಣ ಬೆದರಿಕೆ ಹಾಕಿದ್ದಾರೆ. ಬೆಳಿಗ್ಗೆ ಪೊಲೀಸರು ಬಂದಾಗ ಘಟನೆಯ ಬಗ್ಗೆ ಮಾಹಿತಿ ಪಡೆಯಲು ಹರಿ ಸಿಂಗ್, ಗಿಯಾನಿ ಸಿಂಗ್ ಮತ್ತು ರಾಜು ಅವರನ್ನು ಠಾಣೆಗೆ ಕರೆದೊಯ್ದರು ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಎಸ್‌ಪಿ ಮಾನಸಿಂಗ್ ಠಾಕೂರ್ ತಿಳಿಸಿದ್ದಾರೆ. ಮೂತ್ರ ವಿಸರ್ಜನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಇವರು ಸಹಾರನ್ ಸಮುದಾಯದ ಬುಡಕಟ್ಟು ಜನರು ಎಂದು ಎಎಸ್‌ಪಿ ಹೇಳಿದ್ದಾರೆ. ಅವರ ಹಳೆಯ ಜಮೀನು ವಿವಾದ ನಡೆಯುತ್ತಿದೆ. ಈ ವಿಚಾರವಾಗಿ ಅವರ ನಡುವೆ ಜಗಳ ನಡೆದಿದೆ. ಅದರ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಅವರು ಮಾಡಿರುವ ಆರೋಪಗಳನ್ನು ವಿಶ್ಲೇಷಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ತುಮಕೂರು | ‘ಜೈ ಭೀಮ್’ ಹಾಡು ಹಾಕಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...