Homeಮುಖಪುಟಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು - ವರದಿ

ಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು – ವರದಿ

ಬುಡಕಟ್ಟು ಜನರ ಮೇಲಿನ ಅತಿ ಹೆಚ್ಚಿನ ದೌರ್ಜನ್ಯಗಳು ಮಧ್ಯಪ್ರದೇಶದಲ್ಲಿ ವರದಿಯಾಗಿವೆ. ಇಂತಹ ಸಮಯದಲ್ಲಿ ಆ ಜನರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಒಂದು ವಾರಗಳ ಕಾರ್ಯಕ್ರಮ ಆಯೋಜಿಸಿದೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ನವೆಂಬರ್ 15ರಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥವಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ರೂ. ಭರಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭೊಪಾಲ್‌ನಲ್ಲಿ ಜಂಜಾತಿಯ ಗೌರವ್ ದಿವಸ್‌ ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಭೋಪಾಲ್‌ಗೆ ಆಗಮಿಸಲಿದ್ದಾರೆ. ಅವರು ಭೋಪಾಲ್‌ನಲ್ಲಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ವೇದಿಕೆಯಲ್ಲಿ 1 ಗಂಟೆ 15 ನಿಮಿಷಗಳ ಕಾಲ ಇರುತ್ತಾರೆ. ಮೋದಿ ಭಾಗವಹಿಸುವ ಈ ಕಾರ್ಯಕ್ರಮಕ್ಕಾಗಿ ಮಧ್ಯಪ್ರದೇಶ ಸರ್ಕಾರವು 23 ಕೋಟಿ ರೂ. ಖರ್ಚು ಮಾಡುತ್ತಿದೆ.

ಜಾಂಬೂರಿ ಮೈದಾನದಲ್ಲಿ ನಡೆಯುವ ಬಿರ್ಸಾ ಮುಂಡಾ ಅವರ ಸ್ಮರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಮತ್ತು ದೇಶದ ಮೊದಲ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಜಂಜಾತಿಯ ಗೌರವ್ ದಿವಸ್‌ನ ಅಂಗವಾಗಿ, ಬಿರ್ಸಾ ಮುಂಡಾ ಮತ್ತು ಇತರ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಸ್ಮರಿಸಲು ನವೆಂಬರ್ 15 ರಿಂದ 22 ರವರೆಗೆ ರಾ‍ಷ್ಟ್ರಮಟ್ಟದಲ್ಲಿ ಒಂದು ವಾರದ ಕಾರ್ಯಕ್ರಮಗಳನ್ನು ಆಯೋಜಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಜಾಂಬೂರಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಎರಡು ಲಕ್ಷ ಬುಡಕಟ್ಟು ಜನರನ್ನು ಭಾಗಿಯಾಗುವ ನೀರಿಕ್ಷೆ ಇದೆ. ಮತ್ತು ಇಡೀ ಮೈದಾನವನ್ನು ಬುಡಕಟ್ಟು ಕಲೆ ಮತ್ತು ಬುಡಕಟ್ಟು ದಂತಕಥೆಗಳ ಚಿತ್ರಗಳಿಂದ ಅಲಂಕರಿಸಲಾಗಿದೆ. ಒಂದು ವಾರದಿಂದ 300ಕ್ಕೂ ಹೆಚ್ಚು ಕಾರ್ಮಿಕರು ಈ ಕೆಲಸದಲ್ಲಿ ತೊಡಗಿದ್ದಾರೆ. ಗಿರಿಜನರಿಗಾಗಿ ದೊಡ್ಡ ದೊಡ್ಡ ಪಂಗಡಗಳನ್ನೂ ನಿರ್ಮಿಸಲಾಗಿದೆ.

52 ಜಿಲ್ಲೆಗಳಿಂದ ಬರುವ ಜನರಿಗೆ ಸಾರಿಗೆ, ಆಹಾರ ಮತ್ತು ವಸತಿಗಾಗಿ 12 ಕೋಟಿ ರೂ. ಭರಿಸಲಾಗುತ್ತಿದೆ. ಐದು ಗುಮ್ಮಟಗಳು, ಟೆಂಟ್‌ಗಳು, ಅಲಂಕಾರ ಮತ್ತು ಪ್ರಚಾರಕ್ಕಾಗಿ 9 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದ್ದು, ಇತರೆ ಖರ್ಚುಗಳು 2 ಕೋಟಿಯೆಂದು ಅಂದಾಜಿಸಲಾಗಿದೆ.

ಚುನಾವಣಾ ಲೆಕ್ಕಾಚಾರ?

ಮಧ್ಯಪ್ರದೇಶವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿರುವ ರಾಜ್ಯವಾಗಿದೆ. ರಾಜ್ಯದ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಕ್ಕೆ 47 ಸ್ಥಾನಗಳನ್ನು ಮೀಸಲಿಡಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಬುಡಕಟ್ಟು ಜನರು ಹೆಚ್ಚಾಗಿ ಬಿಜೆಪಿಗೆ ಮತ ಹಾಕುತ್ತಾ ಬಂದಿರುವುದನ್ನು ನಾವು ಕಾಣಬಹುದು. 2008ರಲ್ಲಿ ಬಿಜೆಪಿ 29 ಸ್ಥಾನಗಳನ್ನು ಗೆದ್ದರೆ, 2013 ರಲ್ಲಿ ಈ ಸಂಖ್ಯೆ 31ಕ್ಕೆ ಏರಿತು.

ಆದರೆ 2018 ರಲ್ಲಿ ಬುಡಕಟ್ಟು ಜನರು ಬಿಜೆಪಿಯಿಂದ ಹಿಂದೆ ಸರಿದಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ ಕೇವಲ 16 ಸ್ಥಾನಗಳನ್ನು ಮಾತ್ರ ಗೆದ್ದಿತು. ಅಲ್ಲದೆ ರಾಜ್ಯದಲ್ಲಿ ಅಧಿಕಾರ ಸಹ ಕಳೆದುಕೊಂಡಿತ್ತು. ಸರಳ ಬಹುಮತ ಪಡೆದ ಕಾಂಗ್ರೆಸ್ ಅಧಿಕ್ಕಾರಕ್ಕೇರಿತ್ತು. ನಂತರ ನಡೆದ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನ 20 ಕ್ಕೂ ಹೆಚ್ಚು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜೀನಾಮೆ ನೀಡಿದವರೆಲ್ಲರೂ ಬಿಜೆಪಿಯಿಂದ ಗೆದ್ದು ಶಾಸಕರಾಗಿ ಆಯ್ಕೆಯಾಗಿ ಸರ್ಕಾರದ ಮಂತ್ರಿಮಂಡಲ ಸೇರಿದ್ದಾರೆ.

2023ರಲ್ಲಿ ಮತ್ತೆ ಅಸೆಂಬ್ಲಿ ಚುನಾವಣೆ ಬರುತ್ತಿದೆ. ಹಾಗಾಗಿ ಬುಡಕಟ್ಟು ಜನರನ್ನು ಒಲಿಸಿಕೊಳ್ಳುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಹಾಗಾಗಿ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಹೆಸರಿನಲ್ಲಿ ಭರ್ಜರಿ ಕಾರ್ಯಕ್ರಮಕ್ಕೆ ಮುಂದಾಗಿದೆ. ಒಂದು ವಾರಗಳ ಕಾಲ ಆಚರಿಸಲು ನಿರ್ಧರಿಸಿದೆ. ಇದು ಬಿಜೆಪಿಗೆ ಮತಗಳನ್ನಾಗಿ ಪರಿವರ್ತನೆ ಮಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಬುಡಕಟ್ಟು ಜನರ ಮೇಲಿನ ದೌರ್ಜನ್ಯಗಳಲ್ಲಿ ಹೆಚ್ಚಳ

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್‌ಸಿಆರ್‌ಬಿ) ಮಾಹಿತಿಯ ಪ್ರಕಾರ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯಪ್ರದೇಶವು ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. 2020ರಲ್ಲಿ ರಾಜ್ಯದಲ್ಲಿ 2,401 ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ ಈ ಸಂಖ್ಯೆ 1,922 ಇತ್ತು. 2018 ರಲ್ಲಿ ಇದು 1,868 ಆಗಿತ್ತು. ಎರಡು ವರ್ಷಗಳ ಅವಧಿಯಲ್ಲಿ, ಬುಡಕಟ್ಟು ಜನರ ಮೇಲಿನ ದೌರ್ಜನ್ಯಗಳಲ್ಲಿ ರಾಜ್ಯವು ಶೇ.28 ರಷ್ಟು ಏರಿಕೆಯನ್ನು ಕಂಡಿದೆ.

ರೈಲು ನಿಲ್ದಾಣ ಹೆಸರು ಬದಲಾವಣೆ?

ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಅಡಿಯಲ್ಲಿ ನಿರ್ಮಿಸಲಾಗಿದೆ. ಈ ನಿಲ್ದಾಣವು ಜರ್ಮನಿಯ ಹೈಡೆಲ್ಬರ್ಗ್ ರೈಲು ನಿಲ್ದಾಣದಂತೆಯೇ ಇದೆ ಎಂದು ಹೇಳಲಾಗಿದೆ. ಈ ರೈಲು ನಿಲ್ದಾಣವು ವಿಶ್ವ ಪರಂಪರೆಯ ತಾಣಗಳಾದ ಸಾಂಚಿ ಸ್ತೂಪ, ಭೋಜ್‌ಪುರ ದೇವಸ್ಥಾನ, ಭೀಮೇಟ್ಕಾ, ಬಿರ್ಲಾ ಮಂಡಿ, ತವಾ ಅಣೆಕಟ್ಟು ಮತ್ತು ಬುಡಕಟ್ಟು ವಸ್ತುಸಂಗ್ರಹಾಲಯಗಳ ನೋಟವನ್ನು ಸಹ ಒದಗಿಸುತ್ತದೆ.

ಈ ರೈಲು ನಿಲ್ದಾಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮರುನಾಮಕರಣ ಮಾಡಬೇಕು ಎಂದು ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಬಿಜೆಪಿಯ ಹಲವು ನಾಯಕರು ಒತ್ತಾಯಿಸಿದ್ದಾರೆ. ಆದರೂ, ರಾಜ್ಯ ಸರ್ಕಾರವು ಗೋಂಡಾದ ರಾಣಿ ಕಮಲಾಪತಿ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...