Homeಮುಖಪುಟಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು - ವರದಿ

ಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು – ವರದಿ

ಬುಡಕಟ್ಟು ಜನರ ಮೇಲಿನ ಅತಿ ಹೆಚ್ಚಿನ ದೌರ್ಜನ್ಯಗಳು ಮಧ್ಯಪ್ರದೇಶದಲ್ಲಿ ವರದಿಯಾಗಿವೆ. ಇಂತಹ ಸಮಯದಲ್ಲಿ ಆ ಜನರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಒಂದು ವಾರಗಳ ಕಾರ್ಯಕ್ರಮ ಆಯೋಜಿಸಿದೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ನವೆಂಬರ್ 15ರಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥವಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ರೂ. ಭರಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭೊಪಾಲ್‌ನಲ್ಲಿ ಜಂಜಾತಿಯ ಗೌರವ್ ದಿವಸ್‌ ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಭೋಪಾಲ್‌ಗೆ ಆಗಮಿಸಲಿದ್ದಾರೆ. ಅವರು ಭೋಪಾಲ್‌ನಲ್ಲಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ವೇದಿಕೆಯಲ್ಲಿ 1 ಗಂಟೆ 15 ನಿಮಿಷಗಳ ಕಾಲ ಇರುತ್ತಾರೆ. ಮೋದಿ ಭಾಗವಹಿಸುವ ಈ ಕಾರ್ಯಕ್ರಮಕ್ಕಾಗಿ ಮಧ್ಯಪ್ರದೇಶ ಸರ್ಕಾರವು 23 ಕೋಟಿ ರೂ. ಖರ್ಚು ಮಾಡುತ್ತಿದೆ.

ಜಾಂಬೂರಿ ಮೈದಾನದಲ್ಲಿ ನಡೆಯುವ ಬಿರ್ಸಾ ಮುಂಡಾ ಅವರ ಸ್ಮರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಮತ್ತು ದೇಶದ ಮೊದಲ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಜಂಜಾತಿಯ ಗೌರವ್ ದಿವಸ್‌ನ ಅಂಗವಾಗಿ, ಬಿರ್ಸಾ ಮುಂಡಾ ಮತ್ತು ಇತರ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಸ್ಮರಿಸಲು ನವೆಂಬರ್ 15 ರಿಂದ 22 ರವರೆಗೆ ರಾ‍ಷ್ಟ್ರಮಟ್ಟದಲ್ಲಿ ಒಂದು ವಾರದ ಕಾರ್ಯಕ್ರಮಗಳನ್ನು ಆಯೋಜಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಜಾಂಬೂರಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಎರಡು ಲಕ್ಷ ಬುಡಕಟ್ಟು ಜನರನ್ನು ಭಾಗಿಯಾಗುವ ನೀರಿಕ್ಷೆ ಇದೆ. ಮತ್ತು ಇಡೀ ಮೈದಾನವನ್ನು ಬುಡಕಟ್ಟು ಕಲೆ ಮತ್ತು ಬುಡಕಟ್ಟು ದಂತಕಥೆಗಳ ಚಿತ್ರಗಳಿಂದ ಅಲಂಕರಿಸಲಾಗಿದೆ. ಒಂದು ವಾರದಿಂದ 300ಕ್ಕೂ ಹೆಚ್ಚು ಕಾರ್ಮಿಕರು ಈ ಕೆಲಸದಲ್ಲಿ ತೊಡಗಿದ್ದಾರೆ. ಗಿರಿಜನರಿಗಾಗಿ ದೊಡ್ಡ ದೊಡ್ಡ ಪಂಗಡಗಳನ್ನೂ ನಿರ್ಮಿಸಲಾಗಿದೆ.

52 ಜಿಲ್ಲೆಗಳಿಂದ ಬರುವ ಜನರಿಗೆ ಸಾರಿಗೆ, ಆಹಾರ ಮತ್ತು ವಸತಿಗಾಗಿ 12 ಕೋಟಿ ರೂ. ಭರಿಸಲಾಗುತ್ತಿದೆ. ಐದು ಗುಮ್ಮಟಗಳು, ಟೆಂಟ್‌ಗಳು, ಅಲಂಕಾರ ಮತ್ತು ಪ್ರಚಾರಕ್ಕಾಗಿ 9 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದ್ದು, ಇತರೆ ಖರ್ಚುಗಳು 2 ಕೋಟಿಯೆಂದು ಅಂದಾಜಿಸಲಾಗಿದೆ.

ಚುನಾವಣಾ ಲೆಕ್ಕಾಚಾರ?

ಮಧ್ಯಪ್ರದೇಶವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿರುವ ರಾಜ್ಯವಾಗಿದೆ. ರಾಜ್ಯದ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಕ್ಕೆ 47 ಸ್ಥಾನಗಳನ್ನು ಮೀಸಲಿಡಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಬುಡಕಟ್ಟು ಜನರು ಹೆಚ್ಚಾಗಿ ಬಿಜೆಪಿಗೆ ಮತ ಹಾಕುತ್ತಾ ಬಂದಿರುವುದನ್ನು ನಾವು ಕಾಣಬಹುದು. 2008ರಲ್ಲಿ ಬಿಜೆಪಿ 29 ಸ್ಥಾನಗಳನ್ನು ಗೆದ್ದರೆ, 2013 ರಲ್ಲಿ ಈ ಸಂಖ್ಯೆ 31ಕ್ಕೆ ಏರಿತು.

ಆದರೆ 2018 ರಲ್ಲಿ ಬುಡಕಟ್ಟು ಜನರು ಬಿಜೆಪಿಯಿಂದ ಹಿಂದೆ ಸರಿದಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ ಕೇವಲ 16 ಸ್ಥಾನಗಳನ್ನು ಮಾತ್ರ ಗೆದ್ದಿತು. ಅಲ್ಲದೆ ರಾಜ್ಯದಲ್ಲಿ ಅಧಿಕಾರ ಸಹ ಕಳೆದುಕೊಂಡಿತ್ತು. ಸರಳ ಬಹುಮತ ಪಡೆದ ಕಾಂಗ್ರೆಸ್ ಅಧಿಕ್ಕಾರಕ್ಕೇರಿತ್ತು. ನಂತರ ನಡೆದ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನ 20 ಕ್ಕೂ ಹೆಚ್ಚು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜೀನಾಮೆ ನೀಡಿದವರೆಲ್ಲರೂ ಬಿಜೆಪಿಯಿಂದ ಗೆದ್ದು ಶಾಸಕರಾಗಿ ಆಯ್ಕೆಯಾಗಿ ಸರ್ಕಾರದ ಮಂತ್ರಿಮಂಡಲ ಸೇರಿದ್ದಾರೆ.

2023ರಲ್ಲಿ ಮತ್ತೆ ಅಸೆಂಬ್ಲಿ ಚುನಾವಣೆ ಬರುತ್ತಿದೆ. ಹಾಗಾಗಿ ಬುಡಕಟ್ಟು ಜನರನ್ನು ಒಲಿಸಿಕೊಳ್ಳುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಹಾಗಾಗಿ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಹೆಸರಿನಲ್ಲಿ ಭರ್ಜರಿ ಕಾರ್ಯಕ್ರಮಕ್ಕೆ ಮುಂದಾಗಿದೆ. ಒಂದು ವಾರಗಳ ಕಾಲ ಆಚರಿಸಲು ನಿರ್ಧರಿಸಿದೆ. ಇದು ಬಿಜೆಪಿಗೆ ಮತಗಳನ್ನಾಗಿ ಪರಿವರ್ತನೆ ಮಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಬುಡಕಟ್ಟು ಜನರ ಮೇಲಿನ ದೌರ್ಜನ್ಯಗಳಲ್ಲಿ ಹೆಚ್ಚಳ

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್‌ಸಿಆರ್‌ಬಿ) ಮಾಹಿತಿಯ ಪ್ರಕಾರ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯಪ್ರದೇಶವು ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. 2020ರಲ್ಲಿ ರಾಜ್ಯದಲ್ಲಿ 2,401 ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ ಈ ಸಂಖ್ಯೆ 1,922 ಇತ್ತು. 2018 ರಲ್ಲಿ ಇದು 1,868 ಆಗಿತ್ತು. ಎರಡು ವರ್ಷಗಳ ಅವಧಿಯಲ್ಲಿ, ಬುಡಕಟ್ಟು ಜನರ ಮೇಲಿನ ದೌರ್ಜನ್ಯಗಳಲ್ಲಿ ರಾಜ್ಯವು ಶೇ.28 ರಷ್ಟು ಏರಿಕೆಯನ್ನು ಕಂಡಿದೆ.

ರೈಲು ನಿಲ್ದಾಣ ಹೆಸರು ಬದಲಾವಣೆ?

ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಅಡಿಯಲ್ಲಿ ನಿರ್ಮಿಸಲಾಗಿದೆ. ಈ ನಿಲ್ದಾಣವು ಜರ್ಮನಿಯ ಹೈಡೆಲ್ಬರ್ಗ್ ರೈಲು ನಿಲ್ದಾಣದಂತೆಯೇ ಇದೆ ಎಂದು ಹೇಳಲಾಗಿದೆ. ಈ ರೈಲು ನಿಲ್ದಾಣವು ವಿಶ್ವ ಪರಂಪರೆಯ ತಾಣಗಳಾದ ಸಾಂಚಿ ಸ್ತೂಪ, ಭೋಜ್‌ಪುರ ದೇವಸ್ಥಾನ, ಭೀಮೇಟ್ಕಾ, ಬಿರ್ಲಾ ಮಂಡಿ, ತವಾ ಅಣೆಕಟ್ಟು ಮತ್ತು ಬುಡಕಟ್ಟು ವಸ್ತುಸಂಗ್ರಹಾಲಯಗಳ ನೋಟವನ್ನು ಸಹ ಒದಗಿಸುತ್ತದೆ.

ಈ ರೈಲು ನಿಲ್ದಾಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮರುನಾಮಕರಣ ಮಾಡಬೇಕು ಎಂದು ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಬಿಜೆಪಿಯ ಹಲವು ನಾಯಕರು ಒತ್ತಾಯಿಸಿದ್ದಾರೆ. ಆದರೂ, ರಾಜ್ಯ ಸರ್ಕಾರವು ಗೋಂಡಾದ ರಾಣಿ ಕಮಲಾಪತಿ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...