Homeಮುಖಪುಟಮಧ್ಯಪ್ರದೇಶ: ಹಿಜಾಬ್ ವಿವಾದ; ಪ್ರಾಂಶುಪಾಲರು ಸೇರಿ ಮೂವರಿಗೆ ಜಾಮೀನು

ಮಧ್ಯಪ್ರದೇಶ: ಹಿಜಾಬ್ ವಿವಾದ; ಪ್ರಾಂಶುಪಾಲರು ಸೇರಿ ಮೂವರಿಗೆ ಜಾಮೀನು

- Advertisement -
- Advertisement -

ಮಧ್ಯಪ್ರದೇಶದಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಬಂಧಿತ ಪ್ರಾಂಶುಪಾಲರು, ಶಿಕ್ಷಕ ಮತ್ತು ಸಿಬ್ಬಂದಿಗೆ  ಹೈಕೋರ್ಟ್ ಜಾಮೀನು ನೀಡಿದೆ.

ದಾಮೋಹ್‌ನ ಗಂಗಾ ಜಮ್ನಾ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರು ಸೇರಿದಂತೆ ಮೂವರಿಗೆ ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ವಿವಾದ ಭುಗಿಲೆದ್ದ ನಂತರ  ಪ್ರಾಂಶುಪಾಲರಾದ ಅಫ್ಶಾ ಶೇಖ್, ಗಣಿತ ಶಿಕ್ಷಕ ಅನಾಸ್ ಅಥರ್ ಮತ್ತು ಸಿಬ್ಬಂದಿ ರುಸ್ತಮ್ ಅಲಿ ಅವರನ್ನು ಬಂಧಿಸಲಾಗಿತ್ತು. ಎರಡು ತಿಂಗಳಿನಿಂದ ಇವರು ಜೈಲಿನಲ್ಲಿದ್ದರು.

ಪ್ರಮುಖ ಆರೋಪ ಶಾಲೆಯ ಆಡಳಿತ ಮಂಡಳಿ ವಿರುದ್ಧ ಇರುವ ಕಾರಣ ಪ್ರಕರಣದ ವಿಚಾರಣೆಯು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಗಮನಿಸಿ ನ್ಯಾಯಾಲಯವು ಜಾಮೀನು ನೀಡಿದೆ. ಆರೋಪಿಗಳಿಗೆ ತಲಾ 50,000ರೂ.ಗಳ ವೈಯಕ್ತಿಕ ಬಾಂಡ್‌ನ್ನು ನೀಡಲು ಸೂಚಿಸಲಾಗಿದೆ.

ಶಾಲೆಯಲ್ಲಿ ಮಧ್ಯಪ್ರದೇಶ ಶಿಕ್ಷಣ ಮಂಡಳಿ ಸೂಚಿಸದ ಅಥವಾ ಅನುಮೋದಿಸದ ಯಾವುದೇ ವಿಚಾರ ಅಥವಾ ಭಾಷೆಯನ್ನು ಓದಲು / ಅಧ್ಯಯನ ಮಾಡಲು ಇತರ ಧರ್ಮದ ವಿದ್ಯಾರ್ಥಿಗಳನ್ನು ಒತ್ತಾಯಿಸಬಾರದು ಎಂದು ಜಾಮೀನು ವೇಳೆ ನ್ಯಾಯಾಲಯ ಷರತ್ತು ವಿಧಿಸಿದೆ.

ಇದಲ್ಲದೆ ಇತರ ಧರ್ಮಗಳ ವಿದ್ಯಾರ್ಥಿಗಳಿಗೆ ಯಾವುದೇ ಧಾರ್ಮಿಕ ಶಿಕ್ಷಣ ಅಥವಾ ಇಸ್ಲಾಂ ಧರ್ಮಕ್ಕೆ ಸೇರಿದ ಯಾವುದೇ ಪುಸ್ತಕಗಳನ್ನು ನೀಡಬಾರದು, ವಿದ್ಯಾರ್ಥಿನಿಯರನ್ನು ಹಿಜಾಬ್ ಧರಿಸುವಂತೆ ಒತ್ತಾಯಿಸಬಾರದು ಎಂದು ಕೋರ್ಟ್ ಇದೇ  ವೇಳೆ ಹೇಳಿದೆ.

ರಾಜ್ಯದ ಪರ ವಕೀಲ ಪ್ರದೀಪ್ ಗುಪ್ತಾ ಆರೋಪಿಗಳ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ್ದರು. ಮತ್ತೊಂದೆಡೆ, ಆರೋಪಿಗಳ ಪರ ವಕೀಲ ಖಾಸಿಂ ಅಲಿ, ನನ್ನ ಕಕ್ಷಿದಾರರನ್ನು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ತಲೆಯ ಸ್ಕಾರ್ಪ್‌ನ್ನು ಶಾಲಾ ಆಡಳಿತ ಮಂಡಳಿ ಕಡ್ಡಾಯಗೊಳಿಸಿರುವುದು ಎಂದು ಹೇಳಿದ್ದಾರೆ.

ಮೇ.10ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಪೋಸ್ಟರನ್ನು ಶಾಲಾ ಆವರಣದ ಹೊರಗೆ ಹಾಕಲಾಗಿತ್ತು. ಅದರಲ್ಲಿ ಮುಸ್ಲಿಮೇತರ ವಿದ್ಯಾರ್ಥಿಗಳು ಶಿರವಸ್ತ್ರವನ್ನು ಧರಿಸಿದ್ದರು. ಇದು ಬಲಪಂಥೀಯ ಗುಂಪುಗಳಿಂದ ಪ್ರತಿಭಟನೆಗೆ ಕಾರಣವಾಗಿದೆ. ಶಾಲೆಯಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಗೃಹ ಸಚಿವರು ಮತ್ತು ಶಿವರಾಜ್ ಸಿಂಗ್ ಚೌಹಾಣ್ ಕೂಡ ಶಾಲೆಯನ್ನು ಟೀಕಿಸಿದ್ದರು.

ಇದನ್ನು ಓದಿ: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...