Homeಮುಖಪುಟಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ ಎಂದ ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ!

- Advertisement -
- Advertisement -

ಛತ್ತೀಸ್‌ಘಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ತನ್ನ 7 ವರ್ಷದ ಮಗಳ ಮೃತದೇಹವನ್ನು ವ್ಯಕ್ತಿಯೊಬ್ಬ 10 ಕಿ.ಮೀ ನಷ್ಟು ಹೊತ್ತೊಯ್ದ ಅಮಾನವೀಯ ಘಟನೆ ಮಾಸುವ ಮುನ್ನವೇ ಅಂತದ್ದೆ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಮೃತಪಟ್ಟ ಸಂಬಂಧಿಯ ಶವ ಸಾಗಿಸಲು ಆಂಬುಲೆನ್ಸ್ ಸಿಗದ ಕಾರಣ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತು ನಡೆದ ಘಟನೆ ಜರುಗಿದೆ.

ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಯ್ಪುರ್‌ನಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ಮಹಿಳೆಯ ಶವ ಸಾಗಿಸಲು ಯಾವುದೇ ಆಂಬುಲೆನ್ಸ್ ಸಿಕ್ಕಿಲ್ಲ. ಹಾಗಾಗಿ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತೊಯ್ಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟಿಸಿದೆ.

“ಜ್ವರದಿಂದ ಬಳಲುತ್ತಿದ್ದ ನಮ್ಮ ಸಂಬಂಧಿ ರಾಯ್ಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟರು. ಆಸ್ಪತ್ರೆಯವರು ಶವ ಸಾಗಿಸಲು ಯಾವುದೇ ವ್ಯವಸ್ಥೆ ಮಾಡಲಿಲ್ಲ. ಹಾಗಾಗಿ ನಾವು ಮಂಚದಲ್ಲಿಯೇ ಹೊತ್ತುಕೊಂಡು ಮನೆಗೆ ಹೋಗುತ್ತಿದ್ದೇವೆ” ಎಂದು ಮಹಿಳೆಯೊಬ್ಬರು ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಮಗೆ ಆಸ್ಪತ್ರೆಯಾಗಲಿ, ಆಡಳಿತವಾಗಲಿ ಯಾವುದೇ ಸಹಾಯ ಮಾಡಲಿಲ್ಲ. ಹಾಗಾಗಿ ನಾವು ಬಂದ ದಾರಿಯಲ್ಲಿಯೇ ಮಂಚದಲ್ಲಿಯೇ ಶವ ಹೊತ್ತು ಹೋಗುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶವ ಸಾಗಿಸಲು ವಾಹನ ಅಥವಾ ಆಟೋ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಕಾಯಲು ಸಿದ್ದವಿಲ್ಲದ ಮೃತರ ಸಂಬಂಧಿಗಳು ತರಾತುರಿಯಲ್ಲಿ ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದಾರೆ. ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ” ಎಂದಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳನ್ನು ಕರೆದೊಯ್ಯಲು ವಾಹನಗಳ ಕೊರತೆಯಿಂದ ಈ ಹಿಂದೆಯೂ ಈ ರೀತಿಯ ತೊಂದರೆ ಉಂಟಾಗಿದೆ ಎಂದು ಕೆಲ ಸಿಬ್ಬಂದಿಗಳು ಹೇಳಿದ್ದಾರೆ. ಇದು ಆರೋಗ್ಯ ವ್ಯವಸ್ಥೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ದೂರು ಕೇಳಿಬಂದಿದೆ.

ಇದು ಮೊದಲ ಘಟನೆಯಲ್ಲ. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...