Homeಮುಖಪುಟಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ ಎಂದ ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ!

- Advertisement -
- Advertisement -

ಛತ್ತೀಸ್‌ಘಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ತನ್ನ 7 ವರ್ಷದ ಮಗಳ ಮೃತದೇಹವನ್ನು ವ್ಯಕ್ತಿಯೊಬ್ಬ 10 ಕಿ.ಮೀ ನಷ್ಟು ಹೊತ್ತೊಯ್ದ ಅಮಾನವೀಯ ಘಟನೆ ಮಾಸುವ ಮುನ್ನವೇ ಅಂತದ್ದೆ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಮೃತಪಟ್ಟ ಸಂಬಂಧಿಯ ಶವ ಸಾಗಿಸಲು ಆಂಬುಲೆನ್ಸ್ ಸಿಗದ ಕಾರಣ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತು ನಡೆದ ಘಟನೆ ಜರುಗಿದೆ.

ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಯ್ಪುರ್‌ನಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ಮಹಿಳೆಯ ಶವ ಸಾಗಿಸಲು ಯಾವುದೇ ಆಂಬುಲೆನ್ಸ್ ಸಿಕ್ಕಿಲ್ಲ. ಹಾಗಾಗಿ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತೊಯ್ಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟಿಸಿದೆ.

“ಜ್ವರದಿಂದ ಬಳಲುತ್ತಿದ್ದ ನಮ್ಮ ಸಂಬಂಧಿ ರಾಯ್ಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟರು. ಆಸ್ಪತ್ರೆಯವರು ಶವ ಸಾಗಿಸಲು ಯಾವುದೇ ವ್ಯವಸ್ಥೆ ಮಾಡಲಿಲ್ಲ. ಹಾಗಾಗಿ ನಾವು ಮಂಚದಲ್ಲಿಯೇ ಹೊತ್ತುಕೊಂಡು ಮನೆಗೆ ಹೋಗುತ್ತಿದ್ದೇವೆ” ಎಂದು ಮಹಿಳೆಯೊಬ್ಬರು ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಮಗೆ ಆಸ್ಪತ್ರೆಯಾಗಲಿ, ಆಡಳಿತವಾಗಲಿ ಯಾವುದೇ ಸಹಾಯ ಮಾಡಲಿಲ್ಲ. ಹಾಗಾಗಿ ನಾವು ಬಂದ ದಾರಿಯಲ್ಲಿಯೇ ಮಂಚದಲ್ಲಿಯೇ ಶವ ಹೊತ್ತು ಹೋಗುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶವ ಸಾಗಿಸಲು ವಾಹನ ಅಥವಾ ಆಟೋ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಕಾಯಲು ಸಿದ್ದವಿಲ್ಲದ ಮೃತರ ಸಂಬಂಧಿಗಳು ತರಾತುರಿಯಲ್ಲಿ ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದಾರೆ. ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ” ಎಂದಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳನ್ನು ಕರೆದೊಯ್ಯಲು ವಾಹನಗಳ ಕೊರತೆಯಿಂದ ಈ ಹಿಂದೆಯೂ ಈ ರೀತಿಯ ತೊಂದರೆ ಉಂಟಾಗಿದೆ ಎಂದು ಕೆಲ ಸಿಬ್ಬಂದಿಗಳು ಹೇಳಿದ್ದಾರೆ. ಇದು ಆರೋಗ್ಯ ವ್ಯವಸ್ಥೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ದೂರು ಕೇಳಿಬಂದಿದೆ.

ಇದು ಮೊದಲ ಘಟನೆಯಲ್ಲ. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...