Homeಮುಖಪುಟಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ ಎಂದ ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ!

- Advertisement -
- Advertisement -

ಛತ್ತೀಸ್‌ಘಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ತನ್ನ 7 ವರ್ಷದ ಮಗಳ ಮೃತದೇಹವನ್ನು ವ್ಯಕ್ತಿಯೊಬ್ಬ 10 ಕಿ.ಮೀ ನಷ್ಟು ಹೊತ್ತೊಯ್ದ ಅಮಾನವೀಯ ಘಟನೆ ಮಾಸುವ ಮುನ್ನವೇ ಅಂತದ್ದೆ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಮೃತಪಟ್ಟ ಸಂಬಂಧಿಯ ಶವ ಸಾಗಿಸಲು ಆಂಬುಲೆನ್ಸ್ ಸಿಗದ ಕಾರಣ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತು ನಡೆದ ಘಟನೆ ಜರುಗಿದೆ.

ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಯ್ಪುರ್‌ನಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ಮಹಿಳೆಯ ಶವ ಸಾಗಿಸಲು ಯಾವುದೇ ಆಂಬುಲೆನ್ಸ್ ಸಿಕ್ಕಿಲ್ಲ. ಹಾಗಾಗಿ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತೊಯ್ಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟಿಸಿದೆ.

“ಜ್ವರದಿಂದ ಬಳಲುತ್ತಿದ್ದ ನಮ್ಮ ಸಂಬಂಧಿ ರಾಯ್ಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟರು. ಆಸ್ಪತ್ರೆಯವರು ಶವ ಸಾಗಿಸಲು ಯಾವುದೇ ವ್ಯವಸ್ಥೆ ಮಾಡಲಿಲ್ಲ. ಹಾಗಾಗಿ ನಾವು ಮಂಚದಲ್ಲಿಯೇ ಹೊತ್ತುಕೊಂಡು ಮನೆಗೆ ಹೋಗುತ್ತಿದ್ದೇವೆ” ಎಂದು ಮಹಿಳೆಯೊಬ್ಬರು ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಮಗೆ ಆಸ್ಪತ್ರೆಯಾಗಲಿ, ಆಡಳಿತವಾಗಲಿ ಯಾವುದೇ ಸಹಾಯ ಮಾಡಲಿಲ್ಲ. ಹಾಗಾಗಿ ನಾವು ಬಂದ ದಾರಿಯಲ್ಲಿಯೇ ಮಂಚದಲ್ಲಿಯೇ ಶವ ಹೊತ್ತು ಹೋಗುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶವ ಸಾಗಿಸಲು ವಾಹನ ಅಥವಾ ಆಟೋ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಕಾಯಲು ಸಿದ್ದವಿಲ್ಲದ ಮೃತರ ಸಂಬಂಧಿಗಳು ತರಾತುರಿಯಲ್ಲಿ ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದಾರೆ. ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ” ಎಂದಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳನ್ನು ಕರೆದೊಯ್ಯಲು ವಾಹನಗಳ ಕೊರತೆಯಿಂದ ಈ ಹಿಂದೆಯೂ ಈ ರೀತಿಯ ತೊಂದರೆ ಉಂಟಾಗಿದೆ ಎಂದು ಕೆಲ ಸಿಬ್ಬಂದಿಗಳು ಹೇಳಿದ್ದಾರೆ. ಇದು ಆರೋಗ್ಯ ವ್ಯವಸ್ಥೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ದೂರು ಕೇಳಿಬಂದಿದೆ.

ಇದು ಮೊದಲ ಘಟನೆಯಲ್ಲ. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...