Homeಮುಖಪುಟಮಧ್ಯಪ್ರದೇಶ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಒಡಹುಟ್ಟಿದವರನ್ನೇ ಥಳಿಸಿದ ಗುಂಪು

ಮಧ್ಯಪ್ರದೇಶ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಒಡಹುಟ್ಟಿದವರನ್ನೇ ಥಳಿಸಿದ ಗುಂಪು

- Advertisement -
- Advertisement -

ಬಹಳ ದಿನಗಳ ನಂತರ ಸಹೋದರ ಮತ್ತು ಸಹೋದರಿ ಭೇಟಿಯಾಗಲು ಸೇರಿದ್ದರು. ಆದರೆ ಅವರು ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿದ ಗುಂಪೊಂದು ಅವರನ್ನು ಮನೆಯಿಂದ ಹೊರಗೆಳೆದು, ಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಆ ಮಹಿಳೆಯ ಪತಿಯು ಅಲ್ಲಿಯ ಗ್ರಾಮಸ್ಥರಿಗೆ ಫೋನ್ ಮೂಲಕ ಅವರಿಬ್ಬರು ಒಡಹುಟ್ಟಿದವರೆಂದು ಹೇಳುತ್ತಿದ್ದರೂ ಕೇಳಿಸಿಕೊಳ್ಳದ ಗುಂಪು ಒಂದು ಗಂಟೆಗಳ ಕಾಲ ಅವರನ್ನು ಥಳಿಸಿದೆ.

ಇಂದೋರ್‌ನಿಂದ ಸುಮಾರು 170 ಕಿಮೀ ದೂರದಲ್ಲಿರುವ ಮತ್ತು ಮಹಾರಾಷ್ಟ್ರದ ಗಡಿಗೆ ಸಮೀಪವಿರುವ ಪಿಪ್ಲೋಡ್ ಪ್ರದೇಶದ ಬಮಂಡಾ ಗ್ರಾಮದಲ್ಲಿ ಈ ಅಮಾನುಷ ಘಟನೆ ನಡೆದಿದೆ.

ಈ ಬಗ್ಗೆ ಖಾಂಡ್ವಾ ಎಸ್‌ಪಿ ಸತ್ಯೇಂದ್ರ ಶುಕ್ಲಾ ಮಾತನಾಡಿ, ”ಝರಿಖೇಡಾ ಗ್ರಾಮದ ನಿವಾಸಿ ಜ್ಞಾನಲಾಲ್ ಶುಕ್ರವಾರ ಸಂಜೆ ತನ್ನ ಸಹೋದರಿ ಕಲಾವತಿಯನ್ನು ಭೇಟಿಯಾಗಲು ಬಾಮಂಡಾಗೆ ಹೋಗಿದ್ದರು. ಅವನು ಬಂದಾಗ ಅವಳು ಒಬ್ಬಳೇ ಇದ್ದಳು. ಇವರಿಬ್ಬರು ಮನೆಯೊಳಗೆ ಕುಳಿತು ಮಾತನಾಡುತ್ತಿದ್ದಾಗ ಗುಂಪೊಂದು ಏಕಾಏಕಿ ಒಳಗೆ ನುಗ್ಗಿ ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹೆಚ್ಚಾದ ನಿರುದ್ಯೋಗ: 3 ವರ್ಷಗಳಲ್ಲಿ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ಕೆಲಸ

ಪೊಲೀಸರಿಗೆ ಜ್ಞಾನಲಾಲ್ ದೂರು ನೀಡಿದ್ದು, ”ಅವರು ನಮ್ಮನ್ನು ಮನೆಯಿಂದ ಮುಖ್ಯ ರಸ್ತೆಗೆ ಎಳೆದೊಯ್ದರು, ಮರಕ್ಕೆ ಕಟ್ಟಿಹಾಕಿದರು ಮತ್ತು ನಮಗೆ ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ಅಂಗಿಯನ್ನು ಹರಿದು ಹಾಕಿದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಲಾವತಿ ಅವರ ಪತಿ ರಮೇಶ್, ಜ್ಞಾನಲಾಲ್ ಅವರ ದೂರದ ಸಂಬಂಧಿಯಾಗಿದ್ದು, ಅವರು ರತ್ಲಂನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಕೆಲ ಕುಟುಂಬಸ್ಥರು ರಮೇಶ್‌ಗೆ ಕರೆ ಮಾಡಿ ನಿಮ್ಮ ಪತ್ನಿ ಹಾಗೂ ಸೋದರ ಮಾವನನ್ನು ಥಳಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ವೇಳೆ ಕೆಲವರು ಹಲ್ಲೆ ಮಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದರು, ಆದರೆ ಯಾರೂ ಗಮನ ಹರಿಸಲಿಲ್ಲ.

ಗ್ರಾಮಸ್ಥರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿತು. ಅಲ್ಲಿ ಆ ಸಹೋದರ ಮತ್ತು ಸಹೋದರಿಯನ್ನು ರಕ್ಷಿಸಿ, ಅವರು ಗಾಯಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಮತ್ತೊಂದು ಪೊಲೀಸ್ ತಂಡ ಆರೋಪಿಗಳನ್ನು ಹುಡುಕಲು ಗ್ರಾಮಕ್ಕೆ ಹೋದರು, ಆದರೆ ಅವರು ಪರಾರಿಯಾಗಿದ್ದರು. ಪೊಲೀಸರು ಅವರನ್ನು ಪತ್ತೆಹಚ್ಚಿ ರಾತ್ರಿಯ ವೇಳೆಗೆ ಬಂಧಿಸಿದ್ದಾರೆ.

ಪಿಪ್ಲೋಡ್ ಪೊಲೀಸ್ ಠಾಣೆಯ ಅಧಿಕಾರಿ ಹರೇ ಸಿಂಗ್ ರಾವತ್ ಅವರು ಬಂಧಿತರಬಗ್ಗೆ ಮಾಹಿತಿ ನೀಡಿದ್ದು, ರಾಮದಾಸ್ ಮಂಗ್ಟು, ದಯಾರಾಮ್ ಟಿಕಾರಾಂ ಮತ್ತು ಈಶ್ವರ್ ಅಲಿಯಾಸ್ ಹನು ಬಂಧಿತರಾಗಿದ್ದು, ಅವರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...