Homeಮುಖಪುಟಮಧ್ಯಪ್ರದೇಶ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಒಡಹುಟ್ಟಿದವರನ್ನೇ ಥಳಿಸಿದ ಗುಂಪು

ಮಧ್ಯಪ್ರದೇಶ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಒಡಹುಟ್ಟಿದವರನ್ನೇ ಥಳಿಸಿದ ಗುಂಪು

- Advertisement -
- Advertisement -

ಬಹಳ ದಿನಗಳ ನಂತರ ಸಹೋದರ ಮತ್ತು ಸಹೋದರಿ ಭೇಟಿಯಾಗಲು ಸೇರಿದ್ದರು. ಆದರೆ ಅವರು ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿದ ಗುಂಪೊಂದು ಅವರನ್ನು ಮನೆಯಿಂದ ಹೊರಗೆಳೆದು, ಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಆ ಮಹಿಳೆಯ ಪತಿಯು ಅಲ್ಲಿಯ ಗ್ರಾಮಸ್ಥರಿಗೆ ಫೋನ್ ಮೂಲಕ ಅವರಿಬ್ಬರು ಒಡಹುಟ್ಟಿದವರೆಂದು ಹೇಳುತ್ತಿದ್ದರೂ ಕೇಳಿಸಿಕೊಳ್ಳದ ಗುಂಪು ಒಂದು ಗಂಟೆಗಳ ಕಾಲ ಅವರನ್ನು ಥಳಿಸಿದೆ.

ಇಂದೋರ್‌ನಿಂದ ಸುಮಾರು 170 ಕಿಮೀ ದೂರದಲ್ಲಿರುವ ಮತ್ತು ಮಹಾರಾಷ್ಟ್ರದ ಗಡಿಗೆ ಸಮೀಪವಿರುವ ಪಿಪ್ಲೋಡ್ ಪ್ರದೇಶದ ಬಮಂಡಾ ಗ್ರಾಮದಲ್ಲಿ ಈ ಅಮಾನುಷ ಘಟನೆ ನಡೆದಿದೆ.

ಈ ಬಗ್ಗೆ ಖಾಂಡ್ವಾ ಎಸ್‌ಪಿ ಸತ್ಯೇಂದ್ರ ಶುಕ್ಲಾ ಮಾತನಾಡಿ, ”ಝರಿಖೇಡಾ ಗ್ರಾಮದ ನಿವಾಸಿ ಜ್ಞಾನಲಾಲ್ ಶುಕ್ರವಾರ ಸಂಜೆ ತನ್ನ ಸಹೋದರಿ ಕಲಾವತಿಯನ್ನು ಭೇಟಿಯಾಗಲು ಬಾಮಂಡಾಗೆ ಹೋಗಿದ್ದರು. ಅವನು ಬಂದಾಗ ಅವಳು ಒಬ್ಬಳೇ ಇದ್ದಳು. ಇವರಿಬ್ಬರು ಮನೆಯೊಳಗೆ ಕುಳಿತು ಮಾತನಾಡುತ್ತಿದ್ದಾಗ ಗುಂಪೊಂದು ಏಕಾಏಕಿ ಒಳಗೆ ನುಗ್ಗಿ ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹೆಚ್ಚಾದ ನಿರುದ್ಯೋಗ: 3 ವರ್ಷಗಳಲ್ಲಿ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ಕೆಲಸ

ಪೊಲೀಸರಿಗೆ ಜ್ಞಾನಲಾಲ್ ದೂರು ನೀಡಿದ್ದು, ”ಅವರು ನಮ್ಮನ್ನು ಮನೆಯಿಂದ ಮುಖ್ಯ ರಸ್ತೆಗೆ ಎಳೆದೊಯ್ದರು, ಮರಕ್ಕೆ ಕಟ್ಟಿಹಾಕಿದರು ಮತ್ತು ನಮಗೆ ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ಅಂಗಿಯನ್ನು ಹರಿದು ಹಾಕಿದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಲಾವತಿ ಅವರ ಪತಿ ರಮೇಶ್, ಜ್ಞಾನಲಾಲ್ ಅವರ ದೂರದ ಸಂಬಂಧಿಯಾಗಿದ್ದು, ಅವರು ರತ್ಲಂನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಕೆಲ ಕುಟುಂಬಸ್ಥರು ರಮೇಶ್‌ಗೆ ಕರೆ ಮಾಡಿ ನಿಮ್ಮ ಪತ್ನಿ ಹಾಗೂ ಸೋದರ ಮಾವನನ್ನು ಥಳಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ವೇಳೆ ಕೆಲವರು ಹಲ್ಲೆ ಮಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದರು, ಆದರೆ ಯಾರೂ ಗಮನ ಹರಿಸಲಿಲ್ಲ.

ಗ್ರಾಮಸ್ಥರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿತು. ಅಲ್ಲಿ ಆ ಸಹೋದರ ಮತ್ತು ಸಹೋದರಿಯನ್ನು ರಕ್ಷಿಸಿ, ಅವರು ಗಾಯಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಮತ್ತೊಂದು ಪೊಲೀಸ್ ತಂಡ ಆರೋಪಿಗಳನ್ನು ಹುಡುಕಲು ಗ್ರಾಮಕ್ಕೆ ಹೋದರು, ಆದರೆ ಅವರು ಪರಾರಿಯಾಗಿದ್ದರು. ಪೊಲೀಸರು ಅವರನ್ನು ಪತ್ತೆಹಚ್ಚಿ ರಾತ್ರಿಯ ವೇಳೆಗೆ ಬಂಧಿಸಿದ್ದಾರೆ.

ಪಿಪ್ಲೋಡ್ ಪೊಲೀಸ್ ಠಾಣೆಯ ಅಧಿಕಾರಿ ಹರೇ ಸಿಂಗ್ ರಾವತ್ ಅವರು ಬಂಧಿತರಬಗ್ಗೆ ಮಾಹಿತಿ ನೀಡಿದ್ದು, ರಾಮದಾಸ್ ಮಂಗ್ಟು, ದಯಾರಾಮ್ ಟಿಕಾರಾಂ ಮತ್ತು ಈಶ್ವರ್ ಅಲಿಯಾಸ್ ಹನು ಬಂಧಿತರಾಗಿದ್ದು, ಅವರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...