Homeಮುಖಪುಟಮಧ್ಯಪ್ರದೇಶ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಒಡಹುಟ್ಟಿದವರನ್ನೇ ಥಳಿಸಿದ ಗುಂಪು

ಮಧ್ಯಪ್ರದೇಶ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಒಡಹುಟ್ಟಿದವರನ್ನೇ ಥಳಿಸಿದ ಗುಂಪು

- Advertisement -
- Advertisement -

ಬಹಳ ದಿನಗಳ ನಂತರ ಸಹೋದರ ಮತ್ತು ಸಹೋದರಿ ಭೇಟಿಯಾಗಲು ಸೇರಿದ್ದರು. ಆದರೆ ಅವರು ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿದ ಗುಂಪೊಂದು ಅವರನ್ನು ಮನೆಯಿಂದ ಹೊರಗೆಳೆದು, ಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಆ ಮಹಿಳೆಯ ಪತಿಯು ಅಲ್ಲಿಯ ಗ್ರಾಮಸ್ಥರಿಗೆ ಫೋನ್ ಮೂಲಕ ಅವರಿಬ್ಬರು ಒಡಹುಟ್ಟಿದವರೆಂದು ಹೇಳುತ್ತಿದ್ದರೂ ಕೇಳಿಸಿಕೊಳ್ಳದ ಗುಂಪು ಒಂದು ಗಂಟೆಗಳ ಕಾಲ ಅವರನ್ನು ಥಳಿಸಿದೆ.

ಇಂದೋರ್‌ನಿಂದ ಸುಮಾರು 170 ಕಿಮೀ ದೂರದಲ್ಲಿರುವ ಮತ್ತು ಮಹಾರಾಷ್ಟ್ರದ ಗಡಿಗೆ ಸಮೀಪವಿರುವ ಪಿಪ್ಲೋಡ್ ಪ್ರದೇಶದ ಬಮಂಡಾ ಗ್ರಾಮದಲ್ಲಿ ಈ ಅಮಾನುಷ ಘಟನೆ ನಡೆದಿದೆ.

ಈ ಬಗ್ಗೆ ಖಾಂಡ್ವಾ ಎಸ್‌ಪಿ ಸತ್ಯೇಂದ್ರ ಶುಕ್ಲಾ ಮಾತನಾಡಿ, ”ಝರಿಖೇಡಾ ಗ್ರಾಮದ ನಿವಾಸಿ ಜ್ಞಾನಲಾಲ್ ಶುಕ್ರವಾರ ಸಂಜೆ ತನ್ನ ಸಹೋದರಿ ಕಲಾವತಿಯನ್ನು ಭೇಟಿಯಾಗಲು ಬಾಮಂಡಾಗೆ ಹೋಗಿದ್ದರು. ಅವನು ಬಂದಾಗ ಅವಳು ಒಬ್ಬಳೇ ಇದ್ದಳು. ಇವರಿಬ್ಬರು ಮನೆಯೊಳಗೆ ಕುಳಿತು ಮಾತನಾಡುತ್ತಿದ್ದಾಗ ಗುಂಪೊಂದು ಏಕಾಏಕಿ ಒಳಗೆ ನುಗ್ಗಿ ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹೆಚ್ಚಾದ ನಿರುದ್ಯೋಗ: 3 ವರ್ಷಗಳಲ್ಲಿ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ಕೆಲಸ

ಪೊಲೀಸರಿಗೆ ಜ್ಞಾನಲಾಲ್ ದೂರು ನೀಡಿದ್ದು, ”ಅವರು ನಮ್ಮನ್ನು ಮನೆಯಿಂದ ಮುಖ್ಯ ರಸ್ತೆಗೆ ಎಳೆದೊಯ್ದರು, ಮರಕ್ಕೆ ಕಟ್ಟಿಹಾಕಿದರು ಮತ್ತು ನಮಗೆ ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ಅಂಗಿಯನ್ನು ಹರಿದು ಹಾಕಿದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಲಾವತಿ ಅವರ ಪತಿ ರಮೇಶ್, ಜ್ಞಾನಲಾಲ್ ಅವರ ದೂರದ ಸಂಬಂಧಿಯಾಗಿದ್ದು, ಅವರು ರತ್ಲಂನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಕೆಲ ಕುಟುಂಬಸ್ಥರು ರಮೇಶ್‌ಗೆ ಕರೆ ಮಾಡಿ ನಿಮ್ಮ ಪತ್ನಿ ಹಾಗೂ ಸೋದರ ಮಾವನನ್ನು ಥಳಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ವೇಳೆ ಕೆಲವರು ಹಲ್ಲೆ ಮಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದರು, ಆದರೆ ಯಾರೂ ಗಮನ ಹರಿಸಲಿಲ್ಲ.

ಗ್ರಾಮಸ್ಥರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿತು. ಅಲ್ಲಿ ಆ ಸಹೋದರ ಮತ್ತು ಸಹೋದರಿಯನ್ನು ರಕ್ಷಿಸಿ, ಅವರು ಗಾಯಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಮತ್ತೊಂದು ಪೊಲೀಸ್ ತಂಡ ಆರೋಪಿಗಳನ್ನು ಹುಡುಕಲು ಗ್ರಾಮಕ್ಕೆ ಹೋದರು, ಆದರೆ ಅವರು ಪರಾರಿಯಾಗಿದ್ದರು. ಪೊಲೀಸರು ಅವರನ್ನು ಪತ್ತೆಹಚ್ಚಿ ರಾತ್ರಿಯ ವೇಳೆಗೆ ಬಂಧಿಸಿದ್ದಾರೆ.

ಪಿಪ್ಲೋಡ್ ಪೊಲೀಸ್ ಠಾಣೆಯ ಅಧಿಕಾರಿ ಹರೇ ಸಿಂಗ್ ರಾವತ್ ಅವರು ಬಂಧಿತರಬಗ್ಗೆ ಮಾಹಿತಿ ನೀಡಿದ್ದು, ರಾಮದಾಸ್ ಮಂಗ್ಟು, ದಯಾರಾಮ್ ಟಿಕಾರಾಂ ಮತ್ತು ಈಶ್ವರ್ ಅಲಿಯಾಸ್ ಹನು ಬಂಧಿತರಾಗಿದ್ದು, ಅವರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...