Homeಚಳವಳಿಮಧ್ಯಪ್ರದೇಶ: ಹೊಸ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀ‌ಸರಿಂದ ಲಾಠಿಚಾರ್ಜ್

ಮಧ್ಯಪ್ರದೇಶ: ಹೊಸ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀ‌ಸರಿಂದ ಲಾಠಿಚಾರ್ಜ್

- Advertisement -
- Advertisement -

ಹೊಸ ಶಿಕ್ಷಣ ನೀತಿಯನ್ನು ವಿರೋಧಿಸಿ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐನ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ನಡೆದಿರುವ ಘಟನೆಗಳು ವರದಿಯಾಗಿವೆ.

ಪ್ರತಿಭಟನಾಕಾರರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನಿವಾಸದ ಕಡೆಗೆ ಮೆರವಣಿಗೆ ಹೋಗುವುದನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಎನ್‌ಎಸ್‌ಯುಐ ರಾಷ್ಟ್ರೀಯ ಅಧ್ಯಕ್ಷ ನೀರಜ್ ಕುಂದನ್ ಸೇರಿದಂತೆ ರಾಜ್ಯದ ಎಲ್ಲಾ 52 ಜಿಲ್ಲೆಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ವಿದ್ಯಾರ್ಥಿವೇತನ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಜಾರಿಯಾಗುತ್ತಿರುವ ಹೊಸ ಶಿಕ್ಷಣ ನೀತಿಯಲ್ಲಿನ ಲೋಪದೋಷಗಳ ಕುರಿತು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ವಿರುದ್ಧ ಹಲವರು ಆಕ್ರೋಶ ಹೊರಹಾಕಿದ್ದಾರೆ.

“ಹೊಸ ಶಿಕ್ಷಣ ನೀತಿ, ಶಿಕ್ಷಣದ ಖಾಸಗೀಕರಣ ಮತ್ತು ನಿರುದ್ಯೋಗದ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಸದಸ್ಯರ ಮೇಲೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕ್ರೂರ ಲಾಠಿಚಾರ್ಜ್ ನಡೆದಿದೆ. ವಿದ್ಯಾರ್ಥಿಗಳ ಮಾತನ್ನು ಕೇಳುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ” ಎಂದು ಕಾಂಗ್ರೆಸ್ ಸೋಶಿಯಲ್ ಮೀಡಿಯಾದ ರಾಷ್ಟ್ರೀಯ ಸಂಚಾಲಕಿ ರುಚಿರಾ ಚರ್ತುವೇದಿ ಟ್ವೀಟ್ ಮಾಡಿದ್ದಾರೆ.

ಎನ್‌ಎಸ್‌ಯುಐ ಘಟಕ ಸದಸ್ಯರ ಮೇಲೆ ನಡೆದಿರುವ ಹಲ್ಲೆಯ ಚಿತ್ರಗಳನ್ನು ಹಂಚಿಕೊಂಡು, ಘಟನೆಯನ್ನು ಖಂಡಿಸಿದೆ.

‘ಶಿಕ್ಷಣ ಉಳಿಸಿ, ಭಾರತ ಉಳಿಸಿ’ ಎಂಬ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಿದ್ದೇವೆ ಎಂದು ಯುವ ಕಾಂಗ್ರೆಸ್ ಮಾಧ್ಯಮ ಘಟಕದ ಅಧ್ಯಕ್ಷ ವಿವೇಕ್ ತ್ರಿಪಾಠಿ ಹೇಳಿದ್ದಾರೆ.

“ಮಧ್ಯಪ್ರದೇಶದಲ್ಲಿ ಎಸ್‌ಸಿ-ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವು ಸರಿಯಾಗಿ ಸಿಗುತ್ತಿಲ್ಲ. ಇದರಿಂದಾಗಿ ಕಾಲೇಜು ಆಡಳಿತವು ಶುಲ್ಕಕ್ಕಾಗಿ ಅವರ ಮೇಲೆ ಒತ್ತಡ ಹೇರುತ್ತದೆ. ಶಿಕ್ಷಣ ಮಾಫಿಯಾ ಎಲ್ಲವನ್ನೂ ನಡೆಸುತ್ತಿದೆ. ಅವರು ನಕಲಿ ಪದವಿಗಳನ್ನು ವಿತರಿಸುತ್ತಿದ್ದಾರೆ. ನಾವು ಮುಖ್ಯಮಂತ್ರಿ ಅವರನ್ನು ಭೇಟಿಯಾಗಲು ಹೊರಟಿದ್ದೇವು, ಆದರೆ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಿವೇಕ್ ತ್ರಿಪಾಠಿ ಹೇಳಿದ್ದಾರೆ.


ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ 2020: ಪ್ರಭುತ್ವ ಹಿತಾಸಕ್ತಿ v/s ಸಾರ್ವಜನಿಕ ಹಿತಾಸಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...