Homeಮುಖಪುಟಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ.

- Advertisement -
- Advertisement -

ಶಸ್ತ್ರಸಜ್ಜಿತವಾದ ಸಂಘ ಪರಿವಾರದ ಬೆಂಬಲಿಗರು ಮಂಗಳವಾರ ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯ ದೊರಾನಾ ಗ್ರಾಮದಲ್ಲಿ ಹಿಂಸಾಚಾರ ಮಾಡಿ, ಮಸೀದಿ, ಮನೆಗಳು ಮತ್ತು ಇತರ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ವೈರಲ್ ಆಗದೆ.

ಸಂಘ ಪರಿವಾರದ ಗುಂಪುಗಳು ನಡೆಸಿದ ಈ ಹಿಂಸಾಚಾರದಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು ತಮ್ಮ ಮನೆ ಮತ್ತು ವ್ಯವಹಾರಗಳನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ಕ್ಲಾರಿಅನ್.ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ 

“ನಮ್ಮ ಗ್ರಾಮಕ್ಕೆ ಮಧ್ಯಾಹ್ನ 2 ರ ಸುಮಾರಿಗೆ 5,000 ಮಂದಿ ಗುಂಪು ಬಂದಿತ್ತು. ಅವರು ಮೂರರಿಂದ ನಾಲ್ಕು ಗಂಟೆಗಳ ಕಾಲ ಹಿಂಸಾಚಾರ ನಡೆಸಿದ್ದಾರೆ. ಹಿಂಸಾಚಾರಕ್ಕೆ ಹೆದರಿ ಎಲ್ಲಾ ಮುಸ್ಲಿಮರು ಗ್ರಾಮವನ್ನು ತೊರೆದಿದ್ದರು. ಮುಸ್ಲಿಮರನ್ನು ಪ್ರಚೋದಿಸಲು ಅವರು ಮಸೀದಿಯ ಮುಂದೆ ಡಿಜೆ ಹಾಕಿ ಕುಣಿದಿದ್ದಾರೆ. ಆದರೆ ಅಲ್ಲಿ ಯಾರೂ ಇಲ್ಲದ ಕಾರಣ ಯಾರೂ ಈ ಬಗ್ಗೆ ಏನನ್ನೂ ಹೇಳಲಿಲ್ಲ. ನಂತರ, ಅವರು ಅಲ್ಲಿನ ಇಸ್ಲಾಮಿಕ್ ಧ್ವಜಗಳನ್ನು ತೆಗೆದು ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ” ಎಂದು ಡೋರಾನಾ ನಿವಾಸಿ ಮುಹಮ್ಮದ್ ಹಕೀಮ್ ತಿಳಿಸಿದ್ದಾರೆಂದು ಕ್ಲಾರಿಅನ್ ಇಂಡಿಯಾ ಬರೆದಿದೆ.

ಕೇವಲ 80 ಮುಸ್ಲಿಮರ ಮನೆಗಳನ್ನು ಹೊಂದಿರುವ ನಾವು ಈ ಗ್ರಾಮದಿಂದ ಓಡಿಹೋಗುವುದನ್ನು ಬಿಟ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಬೇರೆ ಯಾವುದೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು ಗ್ರಾಮಸ್ಥರಲ್ಲಿ ಭೀತಿ ತುಂಬಿ, ದೊಣ್ಣೆಗಳಿಂದ ಓಡಿಸಿದರು, ಹಾಗೂ ಅವರ ಮೇಲೆ ಗುಂಡು ಹಾರಿಸಿದರು. ಈ ಗಲಭೆಕೋರರು ಮುಖ್ಯವಾಗಿ ಏಳೆಂಟು ದೊಡ್ಡ ಮನೆಗಳನ್ನು ಗುರಿಯಾಗಿಸಿಕೊಂಡಿದ್ದರಲ್ಲದೆ, ಎರಡು ಅಂಗಡಿಗಳನ್ನೂ ಲೂಟಿ ಮಾಡಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಈ ವಿಧ್ವಂಸಕ ಹಿಂಸಾಚಾರವನ್ನು ನಡೆಸಲಾಯಿತು” ಎಂದು ಹಕೀಮ್ ಹೇಳಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿಡಿಯೋಗಳಲ್ಲಿ ಗಲಭೆಕೋರರು ಜೈಶ್ರೀರಾಮ್ ಎಂದು ಘೋಷಣೆ ಹಾಕುತ್ತಾ, ಮಸೀದಿ ಮೇಲಿನ ಇಸ್ಲಾಮಿಕ್ ಧ್ವಜವನ್ನು ಕಿತ್ತು ಹಾಕಿ, ಕೇಸರಿ ಧ್ವಜವನ್ನು ನೆಡುತ್ತಿರುವುದು ಕಾಣಬಹುದಾಗಿದೆ.

ಘಟನೆಯು ಭಾರಿ ಆಕ್ರೋಶವನ್ನು ಉಂಟು ಮಾಡಿದ್ದು, ಸಂಸದ ಅಸಾದುದ್ದೀನ್ ಓವೈಸಿ ಘಟನೆಗೆ ರಾಜ್ಯದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹೊಣೆಗಾರರನ್ನಾಗಿಸಿದ್ದಾರೆ.

ಇದನ್ನೂ ಓದಿ: ಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಗೆ ದೊರಾನ ಗ್ರಾಮದಲ್ಲಿ ನಡೆದ ಬೈಕ್ ರ್‍ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೊರಾನಗೆ ಆಗಮಿಸುವಂತೆ ಕೋರಿ ಮಂಡ್ಸೂರಿನ ವಿಶ್ವ ಹಿಂದೂ ಪರಿಷತ್‌, ಭಜರಂಗದಳ, ಶ್ರೀ ರಾಷ್ಟ್ರೀಯ ಶಿವಶಕ್ತಿ ಸಂಗಟನ್, ಶ್ರೀ ರಾಷ್ಟ್ರೀಯ ರಜಪೂತ್ ಕೆರ್ಣೀ ಸೇನಾ ಮುಂತಾದ ಸಂಘಟನೆಗಳ ಹೆಸರಿನಲ್ಲಿ ಕೋಮು ಸಂದೇಶವನ್ನು ಪ್ರಸಾರ ಮಾಡಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಸ್ಥಳವನ್ನು ಅಪವಿತ್ರಗೊಳಿಸಿರುವುದು ಮತ್ತು ವಿಧ್ವಂಸಕ ಕೃತ್ಯ ನಡೆಸಿದ್ದಕ್ಕಾಗಿ ಪೊಲೀಸರು ನಾಲ್ಕು ಎಫ್‌ಐಆರ್ ದಾಖಲಿಸಿದ್ದಾರೆ. ಮುಸ್ಲಿಮರ ವಿರುದ್ಧ ಸಂಘ ಪರಿವಾರದ ಗುಂಪುಗಳು ಕೂಡಾ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಅವರನ್ನು ನಿಂದಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...