Homeಮುಖಪುಟಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ.

- Advertisement -
- Advertisement -

ಶಸ್ತ್ರಸಜ್ಜಿತವಾದ ಸಂಘ ಪರಿವಾರದ ಬೆಂಬಲಿಗರು ಮಂಗಳವಾರ ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯ ದೊರಾನಾ ಗ್ರಾಮದಲ್ಲಿ ಹಿಂಸಾಚಾರ ಮಾಡಿ, ಮಸೀದಿ, ಮನೆಗಳು ಮತ್ತು ಇತರ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ವೈರಲ್ ಆಗದೆ.

ಸಂಘ ಪರಿವಾರದ ಗುಂಪುಗಳು ನಡೆಸಿದ ಈ ಹಿಂಸಾಚಾರದಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು ತಮ್ಮ ಮನೆ ಮತ್ತು ವ್ಯವಹಾರಗಳನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ಕ್ಲಾರಿಅನ್.ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ 

“ನಮ್ಮ ಗ್ರಾಮಕ್ಕೆ ಮಧ್ಯಾಹ್ನ 2 ರ ಸುಮಾರಿಗೆ 5,000 ಮಂದಿ ಗುಂಪು ಬಂದಿತ್ತು. ಅವರು ಮೂರರಿಂದ ನಾಲ್ಕು ಗಂಟೆಗಳ ಕಾಲ ಹಿಂಸಾಚಾರ ನಡೆಸಿದ್ದಾರೆ. ಹಿಂಸಾಚಾರಕ್ಕೆ ಹೆದರಿ ಎಲ್ಲಾ ಮುಸ್ಲಿಮರು ಗ್ರಾಮವನ್ನು ತೊರೆದಿದ್ದರು. ಮುಸ್ಲಿಮರನ್ನು ಪ್ರಚೋದಿಸಲು ಅವರು ಮಸೀದಿಯ ಮುಂದೆ ಡಿಜೆ ಹಾಕಿ ಕುಣಿದಿದ್ದಾರೆ. ಆದರೆ ಅಲ್ಲಿ ಯಾರೂ ಇಲ್ಲದ ಕಾರಣ ಯಾರೂ ಈ ಬಗ್ಗೆ ಏನನ್ನೂ ಹೇಳಲಿಲ್ಲ. ನಂತರ, ಅವರು ಅಲ್ಲಿನ ಇಸ್ಲಾಮಿಕ್ ಧ್ವಜಗಳನ್ನು ತೆಗೆದು ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ” ಎಂದು ಡೋರಾನಾ ನಿವಾಸಿ ಮುಹಮ್ಮದ್ ಹಕೀಮ್ ತಿಳಿಸಿದ್ದಾರೆಂದು ಕ್ಲಾರಿಅನ್ ಇಂಡಿಯಾ ಬರೆದಿದೆ.

ಕೇವಲ 80 ಮುಸ್ಲಿಮರ ಮನೆಗಳನ್ನು ಹೊಂದಿರುವ ನಾವು ಈ ಗ್ರಾಮದಿಂದ ಓಡಿಹೋಗುವುದನ್ನು ಬಿಟ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಬೇರೆ ಯಾವುದೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು ಗ್ರಾಮಸ್ಥರಲ್ಲಿ ಭೀತಿ ತುಂಬಿ, ದೊಣ್ಣೆಗಳಿಂದ ಓಡಿಸಿದರು, ಹಾಗೂ ಅವರ ಮೇಲೆ ಗುಂಡು ಹಾರಿಸಿದರು. ಈ ಗಲಭೆಕೋರರು ಮುಖ್ಯವಾಗಿ ಏಳೆಂಟು ದೊಡ್ಡ ಮನೆಗಳನ್ನು ಗುರಿಯಾಗಿಸಿಕೊಂಡಿದ್ದರಲ್ಲದೆ, ಎರಡು ಅಂಗಡಿಗಳನ್ನೂ ಲೂಟಿ ಮಾಡಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಈ ವಿಧ್ವಂಸಕ ಹಿಂಸಾಚಾರವನ್ನು ನಡೆಸಲಾಯಿತು” ಎಂದು ಹಕೀಮ್ ಹೇಳಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿಡಿಯೋಗಳಲ್ಲಿ ಗಲಭೆಕೋರರು ಜೈಶ್ರೀರಾಮ್ ಎಂದು ಘೋಷಣೆ ಹಾಕುತ್ತಾ, ಮಸೀದಿ ಮೇಲಿನ ಇಸ್ಲಾಮಿಕ್ ಧ್ವಜವನ್ನು ಕಿತ್ತು ಹಾಕಿ, ಕೇಸರಿ ಧ್ವಜವನ್ನು ನೆಡುತ್ತಿರುವುದು ಕಾಣಬಹುದಾಗಿದೆ.

ಘಟನೆಯು ಭಾರಿ ಆಕ್ರೋಶವನ್ನು ಉಂಟು ಮಾಡಿದ್ದು, ಸಂಸದ ಅಸಾದುದ್ದೀನ್ ಓವೈಸಿ ಘಟನೆಗೆ ರಾಜ್ಯದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹೊಣೆಗಾರರನ್ನಾಗಿಸಿದ್ದಾರೆ.

ಇದನ್ನೂ ಓದಿ: ಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಗೆ ದೊರಾನ ಗ್ರಾಮದಲ್ಲಿ ನಡೆದ ಬೈಕ್ ರ್‍ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೊರಾನಗೆ ಆಗಮಿಸುವಂತೆ ಕೋರಿ ಮಂಡ್ಸೂರಿನ ವಿಶ್ವ ಹಿಂದೂ ಪರಿಷತ್‌, ಭಜರಂಗದಳ, ಶ್ರೀ ರಾಷ್ಟ್ರೀಯ ಶಿವಶಕ್ತಿ ಸಂಗಟನ್, ಶ್ರೀ ರಾಷ್ಟ್ರೀಯ ರಜಪೂತ್ ಕೆರ್ಣೀ ಸೇನಾ ಮುಂತಾದ ಸಂಘಟನೆಗಳ ಹೆಸರಿನಲ್ಲಿ ಕೋಮು ಸಂದೇಶವನ್ನು ಪ್ರಸಾರ ಮಾಡಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಸ್ಥಳವನ್ನು ಅಪವಿತ್ರಗೊಳಿಸಿರುವುದು ಮತ್ತು ವಿಧ್ವಂಸಕ ಕೃತ್ಯ ನಡೆಸಿದ್ದಕ್ಕಾಗಿ ಪೊಲೀಸರು ನಾಲ್ಕು ಎಫ್‌ಐಆರ್ ದಾಖಲಿಸಿದ್ದಾರೆ. ಮುಸ್ಲಿಮರ ವಿರುದ್ಧ ಸಂಘ ಪರಿವಾರದ ಗುಂಪುಗಳು ಕೂಡಾ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಅವರನ್ನು ನಿಂದಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....