Homeಮುಖಪುಟಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ.

- Advertisement -
- Advertisement -

ಶಸ್ತ್ರಸಜ್ಜಿತವಾದ ಸಂಘ ಪರಿವಾರದ ಬೆಂಬಲಿಗರು ಮಂಗಳವಾರ ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯ ದೊರಾನಾ ಗ್ರಾಮದಲ್ಲಿ ಹಿಂಸಾಚಾರ ಮಾಡಿ, ಮಸೀದಿ, ಮನೆಗಳು ಮತ್ತು ಇತರ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ವೈರಲ್ ಆಗದೆ.

ಸಂಘ ಪರಿವಾರದ ಗುಂಪುಗಳು ನಡೆಸಿದ ಈ ಹಿಂಸಾಚಾರದಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು ತಮ್ಮ ಮನೆ ಮತ್ತು ವ್ಯವಹಾರಗಳನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ಕ್ಲಾರಿಅನ್.ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ 

“ನಮ್ಮ ಗ್ರಾಮಕ್ಕೆ ಮಧ್ಯಾಹ್ನ 2 ರ ಸುಮಾರಿಗೆ 5,000 ಮಂದಿ ಗುಂಪು ಬಂದಿತ್ತು. ಅವರು ಮೂರರಿಂದ ನಾಲ್ಕು ಗಂಟೆಗಳ ಕಾಲ ಹಿಂಸಾಚಾರ ನಡೆಸಿದ್ದಾರೆ. ಹಿಂಸಾಚಾರಕ್ಕೆ ಹೆದರಿ ಎಲ್ಲಾ ಮುಸ್ಲಿಮರು ಗ್ರಾಮವನ್ನು ತೊರೆದಿದ್ದರು. ಮುಸ್ಲಿಮರನ್ನು ಪ್ರಚೋದಿಸಲು ಅವರು ಮಸೀದಿಯ ಮುಂದೆ ಡಿಜೆ ಹಾಕಿ ಕುಣಿದಿದ್ದಾರೆ. ಆದರೆ ಅಲ್ಲಿ ಯಾರೂ ಇಲ್ಲದ ಕಾರಣ ಯಾರೂ ಈ ಬಗ್ಗೆ ಏನನ್ನೂ ಹೇಳಲಿಲ್ಲ. ನಂತರ, ಅವರು ಅಲ್ಲಿನ ಇಸ್ಲಾಮಿಕ್ ಧ್ವಜಗಳನ್ನು ತೆಗೆದು ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ” ಎಂದು ಡೋರಾನಾ ನಿವಾಸಿ ಮುಹಮ್ಮದ್ ಹಕೀಮ್ ತಿಳಿಸಿದ್ದಾರೆಂದು ಕ್ಲಾರಿಅನ್ ಇಂಡಿಯಾ ಬರೆದಿದೆ.

ಕೇವಲ 80 ಮುಸ್ಲಿಮರ ಮನೆಗಳನ್ನು ಹೊಂದಿರುವ ನಾವು ಈ ಗ್ರಾಮದಿಂದ ಓಡಿಹೋಗುವುದನ್ನು ಬಿಟ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಬೇರೆ ಯಾವುದೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು ಗ್ರಾಮಸ್ಥರಲ್ಲಿ ಭೀತಿ ತುಂಬಿ, ದೊಣ್ಣೆಗಳಿಂದ ಓಡಿಸಿದರು, ಹಾಗೂ ಅವರ ಮೇಲೆ ಗುಂಡು ಹಾರಿಸಿದರು. ಈ ಗಲಭೆಕೋರರು ಮುಖ್ಯವಾಗಿ ಏಳೆಂಟು ದೊಡ್ಡ ಮನೆಗಳನ್ನು ಗುರಿಯಾಗಿಸಿಕೊಂಡಿದ್ದರಲ್ಲದೆ, ಎರಡು ಅಂಗಡಿಗಳನ್ನೂ ಲೂಟಿ ಮಾಡಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಈ ವಿಧ್ವಂಸಕ ಹಿಂಸಾಚಾರವನ್ನು ನಡೆಸಲಾಯಿತು” ಎಂದು ಹಕೀಮ್ ಹೇಳಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿಡಿಯೋಗಳಲ್ಲಿ ಗಲಭೆಕೋರರು ಜೈಶ್ರೀರಾಮ್ ಎಂದು ಘೋಷಣೆ ಹಾಕುತ್ತಾ, ಮಸೀದಿ ಮೇಲಿನ ಇಸ್ಲಾಮಿಕ್ ಧ್ವಜವನ್ನು ಕಿತ್ತು ಹಾಕಿ, ಕೇಸರಿ ಧ್ವಜವನ್ನು ನೆಡುತ್ತಿರುವುದು ಕಾಣಬಹುದಾಗಿದೆ.

ಘಟನೆಯು ಭಾರಿ ಆಕ್ರೋಶವನ್ನು ಉಂಟು ಮಾಡಿದ್ದು, ಸಂಸದ ಅಸಾದುದ್ದೀನ್ ಓವೈಸಿ ಘಟನೆಗೆ ರಾಜ್ಯದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹೊಣೆಗಾರರನ್ನಾಗಿಸಿದ್ದಾರೆ.

ಇದನ್ನೂ ಓದಿ: ಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಗೆ ದೊರಾನ ಗ್ರಾಮದಲ್ಲಿ ನಡೆದ ಬೈಕ್ ರ್‍ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೊರಾನಗೆ ಆಗಮಿಸುವಂತೆ ಕೋರಿ ಮಂಡ್ಸೂರಿನ ವಿಶ್ವ ಹಿಂದೂ ಪರಿಷತ್‌, ಭಜರಂಗದಳ, ಶ್ರೀ ರಾಷ್ಟ್ರೀಯ ಶಿವಶಕ್ತಿ ಸಂಗಟನ್, ಶ್ರೀ ರಾಷ್ಟ್ರೀಯ ರಜಪೂತ್ ಕೆರ್ಣೀ ಸೇನಾ ಮುಂತಾದ ಸಂಘಟನೆಗಳ ಹೆಸರಿನಲ್ಲಿ ಕೋಮು ಸಂದೇಶವನ್ನು ಪ್ರಸಾರ ಮಾಡಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಸ್ಥಳವನ್ನು ಅಪವಿತ್ರಗೊಳಿಸಿರುವುದು ಮತ್ತು ವಿಧ್ವಂಸಕ ಕೃತ್ಯ ನಡೆಸಿದ್ದಕ್ಕಾಗಿ ಪೊಲೀಸರು ನಾಲ್ಕು ಎಫ್‌ಐಆರ್ ದಾಖಲಿಸಿದ್ದಾರೆ. ಮುಸ್ಲಿಮರ ವಿರುದ್ಧ ಸಂಘ ಪರಿವಾರದ ಗುಂಪುಗಳು ಕೂಡಾ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಅವರನ್ನು ನಿಂದಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...