Homeಮುಖಪುಟಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ.

- Advertisement -
- Advertisement -

ಶಸ್ತ್ರಸಜ್ಜಿತವಾದ ಸಂಘ ಪರಿವಾರದ ಬೆಂಬಲಿಗರು ಮಂಗಳವಾರ ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯ ದೊರಾನಾ ಗ್ರಾಮದಲ್ಲಿ ಹಿಂಸಾಚಾರ ಮಾಡಿ, ಮಸೀದಿ, ಮನೆಗಳು ಮತ್ತು ಇತರ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ವೈರಲ್ ಆಗದೆ.

ಸಂಘ ಪರಿವಾರದ ಗುಂಪುಗಳು ನಡೆಸಿದ ಈ ಹಿಂಸಾಚಾರದಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು ತಮ್ಮ ಮನೆ ಮತ್ತು ವ್ಯವಹಾರಗಳನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ಕ್ಲಾರಿಅನ್.ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ 

“ನಮ್ಮ ಗ್ರಾಮಕ್ಕೆ ಮಧ್ಯಾಹ್ನ 2 ರ ಸುಮಾರಿಗೆ 5,000 ಮಂದಿ ಗುಂಪು ಬಂದಿತ್ತು. ಅವರು ಮೂರರಿಂದ ನಾಲ್ಕು ಗಂಟೆಗಳ ಕಾಲ ಹಿಂಸಾಚಾರ ನಡೆಸಿದ್ದಾರೆ. ಹಿಂಸಾಚಾರಕ್ಕೆ ಹೆದರಿ ಎಲ್ಲಾ ಮುಸ್ಲಿಮರು ಗ್ರಾಮವನ್ನು ತೊರೆದಿದ್ದರು. ಮುಸ್ಲಿಮರನ್ನು ಪ್ರಚೋದಿಸಲು ಅವರು ಮಸೀದಿಯ ಮುಂದೆ ಡಿಜೆ ಹಾಕಿ ಕುಣಿದಿದ್ದಾರೆ. ಆದರೆ ಅಲ್ಲಿ ಯಾರೂ ಇಲ್ಲದ ಕಾರಣ ಯಾರೂ ಈ ಬಗ್ಗೆ ಏನನ್ನೂ ಹೇಳಲಿಲ್ಲ. ನಂತರ, ಅವರು ಅಲ್ಲಿನ ಇಸ್ಲಾಮಿಕ್ ಧ್ವಜಗಳನ್ನು ತೆಗೆದು ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ” ಎಂದು ಡೋರಾನಾ ನಿವಾಸಿ ಮುಹಮ್ಮದ್ ಹಕೀಮ್ ತಿಳಿಸಿದ್ದಾರೆಂದು ಕ್ಲಾರಿಅನ್ ಇಂಡಿಯಾ ಬರೆದಿದೆ.

ಕೇವಲ 80 ಮುಸ್ಲಿಮರ ಮನೆಗಳನ್ನು ಹೊಂದಿರುವ ನಾವು ಈ ಗ್ರಾಮದಿಂದ ಓಡಿಹೋಗುವುದನ್ನು ಬಿಟ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಬೇರೆ ಯಾವುದೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು ಗ್ರಾಮಸ್ಥರಲ್ಲಿ ಭೀತಿ ತುಂಬಿ, ದೊಣ್ಣೆಗಳಿಂದ ಓಡಿಸಿದರು, ಹಾಗೂ ಅವರ ಮೇಲೆ ಗುಂಡು ಹಾರಿಸಿದರು. ಈ ಗಲಭೆಕೋರರು ಮುಖ್ಯವಾಗಿ ಏಳೆಂಟು ದೊಡ್ಡ ಮನೆಗಳನ್ನು ಗುರಿಯಾಗಿಸಿಕೊಂಡಿದ್ದರಲ್ಲದೆ, ಎರಡು ಅಂಗಡಿಗಳನ್ನೂ ಲೂಟಿ ಮಾಡಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಈ ವಿಧ್ವಂಸಕ ಹಿಂಸಾಚಾರವನ್ನು ನಡೆಸಲಾಯಿತು” ಎಂದು ಹಕೀಮ್ ಹೇಳಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿಡಿಯೋಗಳಲ್ಲಿ ಗಲಭೆಕೋರರು ಜೈಶ್ರೀರಾಮ್ ಎಂದು ಘೋಷಣೆ ಹಾಕುತ್ತಾ, ಮಸೀದಿ ಮೇಲಿನ ಇಸ್ಲಾಮಿಕ್ ಧ್ವಜವನ್ನು ಕಿತ್ತು ಹಾಕಿ, ಕೇಸರಿ ಧ್ವಜವನ್ನು ನೆಡುತ್ತಿರುವುದು ಕಾಣಬಹುದಾಗಿದೆ.

ಘಟನೆಯು ಭಾರಿ ಆಕ್ರೋಶವನ್ನು ಉಂಟು ಮಾಡಿದ್ದು, ಸಂಸದ ಅಸಾದುದ್ದೀನ್ ಓವೈಸಿ ಘಟನೆಗೆ ರಾಜ್ಯದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹೊಣೆಗಾರರನ್ನಾಗಿಸಿದ್ದಾರೆ.

ಇದನ್ನೂ ಓದಿ: ಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಗೆ ದೊರಾನ ಗ್ರಾಮದಲ್ಲಿ ನಡೆದ ಬೈಕ್ ರ್‍ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೊರಾನಗೆ ಆಗಮಿಸುವಂತೆ ಕೋರಿ ಮಂಡ್ಸೂರಿನ ವಿಶ್ವ ಹಿಂದೂ ಪರಿಷತ್‌, ಭಜರಂಗದಳ, ಶ್ರೀ ರಾಷ್ಟ್ರೀಯ ಶಿವಶಕ್ತಿ ಸಂಗಟನ್, ಶ್ರೀ ರಾಷ್ಟ್ರೀಯ ರಜಪೂತ್ ಕೆರ್ಣೀ ಸೇನಾ ಮುಂತಾದ ಸಂಘಟನೆಗಳ ಹೆಸರಿನಲ್ಲಿ ಕೋಮು ಸಂದೇಶವನ್ನು ಪ್ರಸಾರ ಮಾಡಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಸ್ಥಳವನ್ನು ಅಪವಿತ್ರಗೊಳಿಸಿರುವುದು ಮತ್ತು ವಿಧ್ವಂಸಕ ಕೃತ್ಯ ನಡೆಸಿದ್ದಕ್ಕಾಗಿ ಪೊಲೀಸರು ನಾಲ್ಕು ಎಫ್‌ಐಆರ್ ದಾಖಲಿಸಿದ್ದಾರೆ. ಮುಸ್ಲಿಮರ ವಿರುದ್ಧ ಸಂಘ ಪರಿವಾರದ ಗುಂಪುಗಳು ಕೂಡಾ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಅವರನ್ನು ನಿಂದಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...