Homeಮುಖಪುಟಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ.

- Advertisement -
- Advertisement -

ಶಸ್ತ್ರಸಜ್ಜಿತವಾದ ಸಂಘ ಪರಿವಾರದ ಬೆಂಬಲಿಗರು ಮಂಗಳವಾರ ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯ ದೊರಾನಾ ಗ್ರಾಮದಲ್ಲಿ ಹಿಂಸಾಚಾರ ಮಾಡಿ, ಮಸೀದಿ, ಮನೆಗಳು ಮತ್ತು ಇತರ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ವೈರಲ್ ಆಗದೆ.

ಸಂಘ ಪರಿವಾರದ ಗುಂಪುಗಳು ನಡೆಸಿದ ಈ ಹಿಂಸಾಚಾರದಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು ತಮ್ಮ ಮನೆ ಮತ್ತು ವ್ಯವಹಾರಗಳನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ಕ್ಲಾರಿಅನ್.ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ 

“ನಮ್ಮ ಗ್ರಾಮಕ್ಕೆ ಮಧ್ಯಾಹ್ನ 2 ರ ಸುಮಾರಿಗೆ 5,000 ಮಂದಿ ಗುಂಪು ಬಂದಿತ್ತು. ಅವರು ಮೂರರಿಂದ ನಾಲ್ಕು ಗಂಟೆಗಳ ಕಾಲ ಹಿಂಸಾಚಾರ ನಡೆಸಿದ್ದಾರೆ. ಹಿಂಸಾಚಾರಕ್ಕೆ ಹೆದರಿ ಎಲ್ಲಾ ಮುಸ್ಲಿಮರು ಗ್ರಾಮವನ್ನು ತೊರೆದಿದ್ದರು. ಮುಸ್ಲಿಮರನ್ನು ಪ್ರಚೋದಿಸಲು ಅವರು ಮಸೀದಿಯ ಮುಂದೆ ಡಿಜೆ ಹಾಕಿ ಕುಣಿದಿದ್ದಾರೆ. ಆದರೆ ಅಲ್ಲಿ ಯಾರೂ ಇಲ್ಲದ ಕಾರಣ ಯಾರೂ ಈ ಬಗ್ಗೆ ಏನನ್ನೂ ಹೇಳಲಿಲ್ಲ. ನಂತರ, ಅವರು ಅಲ್ಲಿನ ಇಸ್ಲಾಮಿಕ್ ಧ್ವಜಗಳನ್ನು ತೆಗೆದು ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ” ಎಂದು ಡೋರಾನಾ ನಿವಾಸಿ ಮುಹಮ್ಮದ್ ಹಕೀಮ್ ತಿಳಿಸಿದ್ದಾರೆಂದು ಕ್ಲಾರಿಅನ್ ಇಂಡಿಯಾ ಬರೆದಿದೆ.

ಕೇವಲ 80 ಮುಸ್ಲಿಮರ ಮನೆಗಳನ್ನು ಹೊಂದಿರುವ ನಾವು ಈ ಗ್ರಾಮದಿಂದ ಓಡಿಹೋಗುವುದನ್ನು ಬಿಟ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಬೇರೆ ಯಾವುದೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು ಗ್ರಾಮಸ್ಥರಲ್ಲಿ ಭೀತಿ ತುಂಬಿ, ದೊಣ್ಣೆಗಳಿಂದ ಓಡಿಸಿದರು, ಹಾಗೂ ಅವರ ಮೇಲೆ ಗುಂಡು ಹಾರಿಸಿದರು. ಈ ಗಲಭೆಕೋರರು ಮುಖ್ಯವಾಗಿ ಏಳೆಂಟು ದೊಡ್ಡ ಮನೆಗಳನ್ನು ಗುರಿಯಾಗಿಸಿಕೊಂಡಿದ್ದರಲ್ಲದೆ, ಎರಡು ಅಂಗಡಿಗಳನ್ನೂ ಲೂಟಿ ಮಾಡಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಈ ವಿಧ್ವಂಸಕ ಹಿಂಸಾಚಾರವನ್ನು ನಡೆಸಲಾಯಿತು” ಎಂದು ಹಕೀಮ್ ಹೇಳಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿಡಿಯೋಗಳಲ್ಲಿ ಗಲಭೆಕೋರರು ಜೈಶ್ರೀರಾಮ್ ಎಂದು ಘೋಷಣೆ ಹಾಕುತ್ತಾ, ಮಸೀದಿ ಮೇಲಿನ ಇಸ್ಲಾಮಿಕ್ ಧ್ವಜವನ್ನು ಕಿತ್ತು ಹಾಕಿ, ಕೇಸರಿ ಧ್ವಜವನ್ನು ನೆಡುತ್ತಿರುವುದು ಕಾಣಬಹುದಾಗಿದೆ.

ಘಟನೆಯು ಭಾರಿ ಆಕ್ರೋಶವನ್ನು ಉಂಟು ಮಾಡಿದ್ದು, ಸಂಸದ ಅಸಾದುದ್ದೀನ್ ಓವೈಸಿ ಘಟನೆಗೆ ರಾಜ್ಯದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹೊಣೆಗಾರರನ್ನಾಗಿಸಿದ್ದಾರೆ.

ಇದನ್ನೂ ಓದಿ: ಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಗೆ ದೊರಾನ ಗ್ರಾಮದಲ್ಲಿ ನಡೆದ ಬೈಕ್ ರ್‍ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೊರಾನಗೆ ಆಗಮಿಸುವಂತೆ ಕೋರಿ ಮಂಡ್ಸೂರಿನ ವಿಶ್ವ ಹಿಂದೂ ಪರಿಷತ್‌, ಭಜರಂಗದಳ, ಶ್ರೀ ರಾಷ್ಟ್ರೀಯ ಶಿವಶಕ್ತಿ ಸಂಗಟನ್, ಶ್ರೀ ರಾಷ್ಟ್ರೀಯ ರಜಪೂತ್ ಕೆರ್ಣೀ ಸೇನಾ ಮುಂತಾದ ಸಂಘಟನೆಗಳ ಹೆಸರಿನಲ್ಲಿ ಕೋಮು ಸಂದೇಶವನ್ನು ಪ್ರಸಾರ ಮಾಡಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಸ್ಥಳವನ್ನು ಅಪವಿತ್ರಗೊಳಿಸಿರುವುದು ಮತ್ತು ವಿಧ್ವಂಸಕ ಕೃತ್ಯ ನಡೆಸಿದ್ದಕ್ಕಾಗಿ ಪೊಲೀಸರು ನಾಲ್ಕು ಎಫ್‌ಐಆರ್ ದಾಖಲಿಸಿದ್ದಾರೆ. ಮುಸ್ಲಿಮರ ವಿರುದ್ಧ ಸಂಘ ಪರಿವಾರದ ಗುಂಪುಗಳು ಕೂಡಾ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಅವರನ್ನು ನಿಂದಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....