Homeಮುಖಪುಟಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ.

- Advertisement -
- Advertisement -

ಶಸ್ತ್ರಸಜ್ಜಿತವಾದ ಸಂಘ ಪರಿವಾರದ ಬೆಂಬಲಿಗರು ಮಂಗಳವಾರ ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯ ದೊರಾನಾ ಗ್ರಾಮದಲ್ಲಿ ಹಿಂಸಾಚಾರ ಮಾಡಿ, ಮಸೀದಿ, ಮನೆಗಳು ಮತ್ತು ಇತರ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ವೈರಲ್ ಆಗದೆ.

ಸಂಘ ಪರಿವಾರದ ಗುಂಪುಗಳು ನಡೆಸಿದ ಈ ಹಿಂಸಾಚಾರದಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು ತಮ್ಮ ಮನೆ ಮತ್ತು ವ್ಯವಹಾರಗಳನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ಕ್ಲಾರಿಅನ್.ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ 

“ನಮ್ಮ ಗ್ರಾಮಕ್ಕೆ ಮಧ್ಯಾಹ್ನ 2 ರ ಸುಮಾರಿಗೆ 5,000 ಮಂದಿ ಗುಂಪು ಬಂದಿತ್ತು. ಅವರು ಮೂರರಿಂದ ನಾಲ್ಕು ಗಂಟೆಗಳ ಕಾಲ ಹಿಂಸಾಚಾರ ನಡೆಸಿದ್ದಾರೆ. ಹಿಂಸಾಚಾರಕ್ಕೆ ಹೆದರಿ ಎಲ್ಲಾ ಮುಸ್ಲಿಮರು ಗ್ರಾಮವನ್ನು ತೊರೆದಿದ್ದರು. ಮುಸ್ಲಿಮರನ್ನು ಪ್ರಚೋದಿಸಲು ಅವರು ಮಸೀದಿಯ ಮುಂದೆ ಡಿಜೆ ಹಾಕಿ ಕುಣಿದಿದ್ದಾರೆ. ಆದರೆ ಅಲ್ಲಿ ಯಾರೂ ಇಲ್ಲದ ಕಾರಣ ಯಾರೂ ಈ ಬಗ್ಗೆ ಏನನ್ನೂ ಹೇಳಲಿಲ್ಲ. ನಂತರ, ಅವರು ಅಲ್ಲಿನ ಇಸ್ಲಾಮಿಕ್ ಧ್ವಜಗಳನ್ನು ತೆಗೆದು ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ” ಎಂದು ಡೋರಾನಾ ನಿವಾಸಿ ಮುಹಮ್ಮದ್ ಹಕೀಮ್ ತಿಳಿಸಿದ್ದಾರೆಂದು ಕ್ಲಾರಿಅನ್ ಇಂಡಿಯಾ ಬರೆದಿದೆ.

ಕೇವಲ 80 ಮುಸ್ಲಿಮರ ಮನೆಗಳನ್ನು ಹೊಂದಿರುವ ನಾವು ಈ ಗ್ರಾಮದಿಂದ ಓಡಿಹೋಗುವುದನ್ನು ಬಿಟ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಬೇರೆ ಯಾವುದೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು ಗ್ರಾಮಸ್ಥರಲ್ಲಿ ಭೀತಿ ತುಂಬಿ, ದೊಣ್ಣೆಗಳಿಂದ ಓಡಿಸಿದರು, ಹಾಗೂ ಅವರ ಮೇಲೆ ಗುಂಡು ಹಾರಿಸಿದರು. ಈ ಗಲಭೆಕೋರರು ಮುಖ್ಯವಾಗಿ ಏಳೆಂಟು ದೊಡ್ಡ ಮನೆಗಳನ್ನು ಗುರಿಯಾಗಿಸಿಕೊಂಡಿದ್ದರಲ್ಲದೆ, ಎರಡು ಅಂಗಡಿಗಳನ್ನೂ ಲೂಟಿ ಮಾಡಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಈ ವಿಧ್ವಂಸಕ ಹಿಂಸಾಚಾರವನ್ನು ನಡೆಸಲಾಯಿತು” ಎಂದು ಹಕೀಮ್ ಹೇಳಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿಡಿಯೋಗಳಲ್ಲಿ ಗಲಭೆಕೋರರು ಜೈಶ್ರೀರಾಮ್ ಎಂದು ಘೋಷಣೆ ಹಾಕುತ್ತಾ, ಮಸೀದಿ ಮೇಲಿನ ಇಸ್ಲಾಮಿಕ್ ಧ್ವಜವನ್ನು ಕಿತ್ತು ಹಾಕಿ, ಕೇಸರಿ ಧ್ವಜವನ್ನು ನೆಡುತ್ತಿರುವುದು ಕಾಣಬಹುದಾಗಿದೆ.

ಘಟನೆಯು ಭಾರಿ ಆಕ್ರೋಶವನ್ನು ಉಂಟು ಮಾಡಿದ್ದು, ಸಂಸದ ಅಸಾದುದ್ದೀನ್ ಓವೈಸಿ ಘಟನೆಗೆ ರಾಜ್ಯದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹೊಣೆಗಾರರನ್ನಾಗಿಸಿದ್ದಾರೆ.

ಇದನ್ನೂ ಓದಿ: ಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಗೆ ದೊರಾನ ಗ್ರಾಮದಲ್ಲಿ ನಡೆದ ಬೈಕ್ ರ್‍ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೊರಾನಗೆ ಆಗಮಿಸುವಂತೆ ಕೋರಿ ಮಂಡ್ಸೂರಿನ ವಿಶ್ವ ಹಿಂದೂ ಪರಿಷತ್‌, ಭಜರಂಗದಳ, ಶ್ರೀ ರಾಷ್ಟ್ರೀಯ ಶಿವಶಕ್ತಿ ಸಂಗಟನ್, ಶ್ರೀ ರಾಷ್ಟ್ರೀಯ ರಜಪೂತ್ ಕೆರ್ಣೀ ಸೇನಾ ಮುಂತಾದ ಸಂಘಟನೆಗಳ ಹೆಸರಿನಲ್ಲಿ ಕೋಮು ಸಂದೇಶವನ್ನು ಪ್ರಸಾರ ಮಾಡಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಸ್ಥಳವನ್ನು ಅಪವಿತ್ರಗೊಳಿಸಿರುವುದು ಮತ್ತು ವಿಧ್ವಂಸಕ ಕೃತ್ಯ ನಡೆಸಿದ್ದಕ್ಕಾಗಿ ಪೊಲೀಸರು ನಾಲ್ಕು ಎಫ್‌ಐಆರ್ ದಾಖಲಿಸಿದ್ದಾರೆ. ಮುಸ್ಲಿಮರ ವಿರುದ್ಧ ಸಂಘ ಪರಿವಾರದ ಗುಂಪುಗಳು ಕೂಡಾ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಅವರನ್ನು ನಿಂದಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...