Homeರಾಷ್ಟ್ರೀಯಮಧ್ಯಪ್ರದೇಶ: ಸ್ಥಳೀಯ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

ಮಧ್ಯಪ್ರದೇಶ: ಸ್ಥಳೀಯ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ನೀಡಲು ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸಂತಸ ವ್ಯಕ್ತಪಡಿಸಿದ್ದು, ಇದೊಂದು ಐತಿಹಾಸಿಕ ದಿನ ಎಂದು ಬಣ್ಣಿಸಿದೆ.

“ಇದೊಂದು ಐತಿಹಾಸಿಕ ದಿನ. ಸತ್ಯಕ್ಕೆ ಸೋಲು ಸಾಧ್ಯವಿಲ್ಲ ಎಂದು ಮತ್ತೊಮ್ಮೆ ಸಾಬೀತಾಗಿದೆ. ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳುತ್ತೇನೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಚುನಾವಣೆ ಬೇಕು ಆದರೆ ಒಬಿಸಿ ಮೀಸಲಾತಿ ಎಂದು ಹೇಳಿದ್ದೇವೆ. ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ಗೆ ಹೋಗಿ  ಪಾಪ ಮಾಡಿದೆ. ಅದು ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡುವಂತೆ ನ್ಯಾಯಾಲಯದಲ್ಲಿ ಕೇಳಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ವರದಿಯನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಚುನಾವಣೆಯನ್ನು ಘೋಷಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗವು ತನ್ನ ವರದಿಯನ್ನು ಮಂಡಿಸಿದ್ದು, ಅದರಲ್ಲಿ ‘ತ್ರಿವಳಿ ಪರೀಕ್ಷೆ’ ಅನುಸರಿಸಲಾಗಿದೆ ಎಂದು ಹೇಳಿತ್ತು.

ಸ್ಥಳೀಯ ಚುನಾವಣೆಗಳಲ್ಲಿ ಒಬಿಸಿ ಮೀಸಲಾತಿಯನ್ನು ತೆರವುಗೊಳಿಸದ ಸುಪ್ರೀಂ ಕೋರ್ಟ್‌ನ ಮೇ 10 ರ ಆದೇಶಕ್ಕೆ ಬದಲಾವಣೆಗಳನ್ನು ಕೋರಿ ಮಧ್ಯಪ್ರದೇಶ ಸರ್ಕಾರವು ತಿದ್ದುಪಡಿ ಅರ್ಜಿಯನ್ನು ಸಲ್ಲಿಸಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಎರಡು ವರ್ಷಗಳಿಂದ ನಡೆದಿರಲಿಲ್ಲ. ಹೀಗಾಗಿ ಅಲ್ಲಿ ಪ್ರಸ್ತುತ 23,000 ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆ ಸ್ಥಾನಗಳು ಖಾಲಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....