Homeಮುಖಪುಟಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

ಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

- Advertisement -
- Advertisement -

2018-2021ರ ನಡುವೆ ಮಧ್ಯಪ್ರದೇಶದಲ್ಲಿ ಟೇಕ್ ಹೋಮ್ ರೇಷನ್ (ಟಿಎಚ್‌ಆರ್) ಯೋಜನೆಯಲ್ಲಿ ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಸುಮಾರು 428 ಕೋಟಿ ರೂಪಾಯಿ ಮೌಲ್ಯದ ಅಕ್ರಮಗಳನ್ನು ಪತ್ತೆಹಚ್ಚಿದೆ ಎಂದು ವರದಿ ಹೇಳಿದೆ. ಯೋಜನೆಯಲ್ಲಿ ಅಕ್ರಮಗಳು ಪತ್ತೆಯಾಗಿರುವ ಅವಧಿಯಲ್ಲಿ ರಾಜ್ಯದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಮತ್ತು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಆಡಳಿತ ನಡೆಸಿತ್ತು ಎಂದು ವರದಿ ಉಲ್ಲೇಖಿಸಿದೆ. ಮಧ್ಯಪ್ರದೇಶ 

ಟಿಎಚ್‌ಆರ್ ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದ ಘಟಕಗಳಲ್ಲಿ ಒಂದಾಗಿದ್ದು, ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಭಾಗವಾಗಿದೆ. ಆರು ತಿಂಗಳಿಂದ ಮೂರು ವರ್ಷದೊಳಗಿನ ಮಕ್ಕಳು, ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರು ಮತ್ತು 11 ಮತ್ತು 14 ವರ್ಷದೊಳಗಿನ ಶಾಲೆಯಿಂದ ಹೊರಗಿರುವ ಹದಿಹರೆಯದ ಹುಡುಗಿಯರ (OOSAG ಗಳು) ಪೌಷ್ಟಿಕಾಂಶದ ಅವಶ್ಯಕತೆಗಳನ್ನು ಪೂರೈಸುವುದು ಯೋಜನೆಯ ಮುಖ್ಯ ಗುರಿಯಾಗಿದೆ.ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫಲಾನುಭವಿಗಳ ಗುರುತಿಸುವಿಕೆ, ಉತ್ಪಾದನೆ, ಸಾಗಣೆ, ವಿತರಣೆ ಮತ್ತು ಟಿಎಚ್‌ಆರ್‌ನ ಗುಣಮಟ್ಟ ನಿಯಂತ್ರಣದಲ್ಲಿ ಗಂಭೀರ ಅಕ್ರಮಗಳನ್ನು ಆಡಿಟ್ ವರದಿಗಳು ಸ್ಪಷ್ಟವಾಗಿ ಸೂಚಿಸುತ್ತವೆ… ಆದ್ದರಿಂದ, ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಡಿಟ್‌ ಜನರಲ್ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಮಾರ್ಚ್ 31, 2021 ರಂದು ವಿಧಾನಸಭೆಯಲ್ಲಿ ಮಂಡಿಸಲಾದ ವರ್ಷದ ವರದಿಯು ಹೇಳಿದೆ.

ಈ ಬಗ್ಗೆ ಎರಡು ವರ್ಷಗಳ ಹಿಂದೆಯೆ ಆರೋಪ ಬಂದಿದ್ದರೂ, ಮಧ್ಯಪ್ರದೇಶ ಸರ್ಕಾರ ಅದನ್ನು ತಳ್ಳಿಹಾಕಿತ್ತು. ಆದರೆ ಎರಡು ವರ್ಷಗಳ ನಂತರ ಸಿಎಜಿ ಇದನ್ನು ದೃಢಪಡಿಸಿದೆ. ನಕಲಿ ಫಲಾನುಭವಿಗಳು, ಮೋಸದ ಸಾರಿಗೆ ಪ್ರತಿಪಾದನೆ ಮತ್ತು ಭ್ರಷ್ಟಾಚಾರ ಯೋಜನೆಯ ಪ್ರತಿಯೊಂದು ಹಂತಕ್ಕೂ ನುಗ್ಗಿದೆ ಎಂದು ವರದಿ ಹೇಳಿದೆ.

ಪಡಿತರಕ್ಕೆ ಅರ್ಹರಾಗಿರುವ ಹದಿಹರೆಯದ ಹೆಣ್ಣುಮಕ್ಕಳ ಸಂಖ್ಯೆಯನ್ನು 9,000 ಆಗಿದ್ದು, ಆದರೆ ಇದನ್ನು 36 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದಾಗಿ ಸರ್ಕಾರಕ್ಕೆ ₹ 110 ಕೋಟಿ ನಷ್ಟವಾಗಿದೆ. ಜೊತೆಗೆ, ಪೌಷ್ಟಿಕಾಂಶ ಪಡಿತರ ಸಾಗಿಸಿದ್ದು ಟ್ರಕ್‌ಗಳು, ಮೋಟಾರ್‌ಸೈಕಲ್‌ಗಳು, ಆಟೊಗಳು ಮತ್ತು ಟ್ಯಾಂಕರ್‌ಗಳಾಗಿವೆ. ಆದರೆ ಸಿಎಜಿ ವರದಿಯು ಇದರಲ್ಲಿ ಅಕ್ರಮಗಳನ್ನು ಎತ್ತಿತೋರಿಸಿದ್ದು, 400 ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಸಾಗಿಸಲಾಗಿಲ್ಲ ಎಂದು ವರದಿ ತಿಳಿಸಿದೆ. 96,000 ಮೆಟ್ರಿಕ್‌ ಟನ್‌ಗೂ ಹೆಚ್ಚು ಪಡಿತರ ದಾಸ್ತಾನು ಇದ್ದರೂ, 86,000 ಮೆಟ್ರಿಕ್‌ ಟನ್‌ ಮಾತ್ರ ಅಂಗನವಾಡಿ ಕೇಂದ್ರಗಳಿಗೆ ತಲುಪಿದ್ದು, 10,000 ಮೆಟ್ರಿಕ್‌ ಟನ್‌ ಆಹಾರ ಪತ್ತೆಯಾಗಿಲ್ಲ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...