Homeದಲಿತ್ ಫೈಲ್ಸ್ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಜಾತಿ ಕಿರುಕುಳದಿಂದ ಬೇಸತ್ತು ದಲಿತ ವಿದ್ಯಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ನಡೆದಿದೆ. ತರಗತಿಯ ಶಿಕ್ಷಕ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದು, ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ತನ್ನ ಮಗನಿಗೆ ಕಿರುಕುಳ ನೀಡಿದ್ದಾರೆ ಎಂದು ಮೃತ ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

ರಾಂಪುರ (ಸಾಕಿನ್) ಪೊಲೀಸ್ ಠಾಣೆ ವ್ಯಾಪ್ತಿಯ ಪಡ್ಖುರಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ನವೋದಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಅಮಿತ್ ಪ್ರಜಾಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನವೋದಯ ವಿದ್ಯಾಲಯದಲ್ಲಿ ಅಮಿತ್ ಅವರ ಕ್ಲಾಸ್ ಟೀಚರ್ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದರು. ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ಕಿರುಕುಳ ನೀಡಿದ್ದಾರೆ” ಎಂದು ಮೃತ ವಿದ್ಯಾರ್ಥಿಯ ತಂದೆ ಅಲ್ಹಾ ಪ್ರಜಾಪತಿ ಆರೋಪಿಸಿದ್ದಾರೆ.

“ನನ್ನ ಮಗ ಕರೆ ಮಾಡಿ, ನನಗೆ ಅನಾರೋಗ್ಯವಿದೆ, ನಾನು ಮನೆಗೆ ಬರಬೇಕು ಎಂದು ಹೇಳಿದ. ಮಗುವಿನ ತಾಯಿ ಮತ್ತು ಸಹೋದರ ಅವನನ್ನು ಕರೆದುಕೊಂಡು ಬರಲು ನವೋದಯ ಶಾಲೆಗೆ ಹೋದರು. ಆದರೆ ಮಗನನ್ನು ಕಳುಹಿಸಿರಲಿಲ್ಲ. ಶಾಲೆಯ ಅನುಮತಿ ಇಲ್ಲದೆಯೇ ಅಂದು ರಾತ್ರಿ 12 ಗಂಟೆಗೆ ಮಗ ಮನೆಗೆ ಬಂದಿದ್ದ” ಎಂದು ತಿಳಿಸಿದ್ದಾರೆ.

“ಮನೆಗೆ ಬಂದ ನಂತರ, ಅಜಿತ್ ಪಾಂಡೆ ಸರ್ ನನಗೆ ಚಿತ್ರಹಿಂಸೆ ನೀಡುತ್ತಾರೆ ಮತ್ತು ಅವಮಾನಿಸುತ್ತಾರೆ. ನಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಅಮಿತ್ ತಂದೆ ವಿವರಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇಳ್ರಪ್ಪೋ ಕೇಳಿ!!!!?
    ಧರ್ಮ ಧರ್ಮ ಅನ್ನುವ ರಾಜ್ಯದಲ್ಲಿ
    ಯಾರ್ಯಾರೋ ಪುಣ್ಯಾತ್ಮರು ಹುಟ್ಟಿದ ( ಅವರೇ ಹೇಳಿದ್ದು ) ಆ ರಾಜ್ಯದಲ್ಲಿ
    ವಿದ್ಯೆ ಕಲಿತ ಗುರುವು
    ವಿದ್ಯೆ ಕಲಿಯುವ ಮಗುವಿಗೆ ಭವಿಷ್ಯ ರೂಪಿಸುವ ಕೆಲಸ ಮಾಡದೆ
    ಆ ಮಗು ಆತ್ಮಹತ್ಯೆ ಅನ್ನುವ ಯೋಚ್ನೆ ಮಾಡಿ ತನ್ನ ಜೀವನವನ್ನೇ ಕೊನೆ ಮಾಡಿದ್ದಾನೆ… ಯಾವ್ ರಾಜಕೀಯ ವ್ಯಕ್ತಿ ಕೂಡ ಮಾತ್ ಆಡಲ್ಲ. ಯಾವ್ ಪಕ್ಷ ಧರ್ಮ ಕೂಡ ಧ್ವನಿ ಎತ್ತಿಲ್ಲ, ಆಗುತ್ತೆ ಒಂದೆರೆಡು ಸಂತಾಪದ ಮಾತು ಆಡಿ, ತಮ್ ಪಾಡಿಗೆ ತಾವು ಆಗ್ತಾರೆ , ಇತ್ತಗೆ ಹೆಣ್ಣಿಗೆ ರಕ್ಷಣೆ ಇಲ್ಲ ರೈತನಿಗೆ ಬೆಲೆ ಕೊಡ್ತಾ ಇಲ್ಲಾ ಜಾತಿಗೆ ಕೊನೆ ಇಲ್ಲ, ಮನುಷ್ಯತ್ವದ ಕಥೆ ಅದೋ ಗತಿ…

  2. “ಮೇರಾ ಜಾತಿ ಭಾರತ್ ಮಹಾನ್ ಹೈ”, “ಹಿಂದೂ ನಾವೆಲ್ಲ ಒಂದು” ಎನ್ನುವ ಸನಾತನಿ ಶನಿ ಸಂತಾನಗಳು ಈ ದೇಶದ ವಿಷ ಬೇರುಗಳಾಗಿವೆ…, ಶೋಷಿತರೆಲ್ಲ ಜಾಗೃತರಾಗಿ, ಒಂದಾಗಿ ಬಾಬಾಸಾಹೇಬರ ಆಶಯದಂತೆ ಈ ವಿಷ ಬೇರುಗಳ ಬುಡಸಮೇತ ಕೀಳದಿದ್ದಲ್ಲಿ ಈ ದೇಶದಲ್ಲಿ ದಲಿತರಿಗೆ, ದೀನರಿಗೆ, ಶೋಷಿತರಿಗೆ ಬದುಕು ಮತ್ತು ಭವಿಷ್ಯ ಎಂದೂ ಇರದು. ಶಿಕ್ಷಣ, ಸಂಘಟನೆ, ಹೋರಾಟ ಅಷ್ಟೇ ಅಲ್ಲ, ಅಗತ್ಯವಾದಲ್ಲಿ ಬೀದಿ ಕಾಳಗ, ರಕ್ತ ಕ್ರಾಂತಿಗೂ ಸಿದ್ಧಾರಾಗಿರಬೇಕಾದ ಸೇನೆ ನಿರ್ಮಾಣವಾಗಬೇಕು. ಆದಷ್ಟೇ ಈ ಅಮಾನವೀಯ ಕ್ರೂರತೆ, ಅನ್ಯಾಯ, ದಬ್ಬಾಳಿಕೆ, ವಂಚನೆ ಮತ್ತು ಶೋಷಣೆಗೆ ಪರಿಹಾರ. ಯಾವ ಸರ್ಕಾರ, ನಾಯಕರು,ಕಾನೂನುಗಳು ನಮ್ಮ ನೆರವಿಗೆ ಸದಾ ಬಾರದು, ಇವುಗಳು ಕೂಡ ನಮ್ಮ ವಂಚನೆ ಮಾಡುತ್ತಿವೆ. ಎಲ್ಲಕಿಂತ ಮೊದಲು ಶೋಷಿತರು ತಕ್ಷಣದಲ್ಲಿ ಈ ಬದುಕಲ್ಲಿ ಸನಾತನಿ ಧರ್ಮಾಚಾರಣೆ, ಅನುಸರಣೆಗಳ ಧಿಕ್ಕರಿಸಿ ಮಾನವೀಯ ಆಚರಣೆಗಳಷ್ಟೇ ಪಾಲಿಸುವ ನಿರ್ಣಯ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...