Homeದಲಿತ್ ಫೈಲ್ಸ್ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಜಾತಿ ಕಿರುಕುಳದಿಂದ ಬೇಸತ್ತು ದಲಿತ ವಿದ್ಯಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ನಡೆದಿದೆ. ತರಗತಿಯ ಶಿಕ್ಷಕ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದು, ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ತನ್ನ ಮಗನಿಗೆ ಕಿರುಕುಳ ನೀಡಿದ್ದಾರೆ ಎಂದು ಮೃತ ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

ರಾಂಪುರ (ಸಾಕಿನ್) ಪೊಲೀಸ್ ಠಾಣೆ ವ್ಯಾಪ್ತಿಯ ಪಡ್ಖುರಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ನವೋದಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಅಮಿತ್ ಪ್ರಜಾಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನವೋದಯ ವಿದ್ಯಾಲಯದಲ್ಲಿ ಅಮಿತ್ ಅವರ ಕ್ಲಾಸ್ ಟೀಚರ್ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದರು. ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ಕಿರುಕುಳ ನೀಡಿದ್ದಾರೆ” ಎಂದು ಮೃತ ವಿದ್ಯಾರ್ಥಿಯ ತಂದೆ ಅಲ್ಹಾ ಪ್ರಜಾಪತಿ ಆರೋಪಿಸಿದ್ದಾರೆ.

“ನನ್ನ ಮಗ ಕರೆ ಮಾಡಿ, ನನಗೆ ಅನಾರೋಗ್ಯವಿದೆ, ನಾನು ಮನೆಗೆ ಬರಬೇಕು ಎಂದು ಹೇಳಿದ. ಮಗುವಿನ ತಾಯಿ ಮತ್ತು ಸಹೋದರ ಅವನನ್ನು ಕರೆದುಕೊಂಡು ಬರಲು ನವೋದಯ ಶಾಲೆಗೆ ಹೋದರು. ಆದರೆ ಮಗನನ್ನು ಕಳುಹಿಸಿರಲಿಲ್ಲ. ಶಾಲೆಯ ಅನುಮತಿ ಇಲ್ಲದೆಯೇ ಅಂದು ರಾತ್ರಿ 12 ಗಂಟೆಗೆ ಮಗ ಮನೆಗೆ ಬಂದಿದ್ದ” ಎಂದು ತಿಳಿಸಿದ್ದಾರೆ.

“ಮನೆಗೆ ಬಂದ ನಂತರ, ಅಜಿತ್ ಪಾಂಡೆ ಸರ್ ನನಗೆ ಚಿತ್ರಹಿಂಸೆ ನೀಡುತ್ತಾರೆ ಮತ್ತು ಅವಮಾನಿಸುತ್ತಾರೆ. ನಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಅಮಿತ್ ತಂದೆ ವಿವರಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇಳ್ರಪ್ಪೋ ಕೇಳಿ!!!!?
    ಧರ್ಮ ಧರ್ಮ ಅನ್ನುವ ರಾಜ್ಯದಲ್ಲಿ
    ಯಾರ್ಯಾರೋ ಪುಣ್ಯಾತ್ಮರು ಹುಟ್ಟಿದ ( ಅವರೇ ಹೇಳಿದ್ದು ) ಆ ರಾಜ್ಯದಲ್ಲಿ
    ವಿದ್ಯೆ ಕಲಿತ ಗುರುವು
    ವಿದ್ಯೆ ಕಲಿಯುವ ಮಗುವಿಗೆ ಭವಿಷ್ಯ ರೂಪಿಸುವ ಕೆಲಸ ಮಾಡದೆ
    ಆ ಮಗು ಆತ್ಮಹತ್ಯೆ ಅನ್ನುವ ಯೋಚ್ನೆ ಮಾಡಿ ತನ್ನ ಜೀವನವನ್ನೇ ಕೊನೆ ಮಾಡಿದ್ದಾನೆ… ಯಾವ್ ರಾಜಕೀಯ ವ್ಯಕ್ತಿ ಕೂಡ ಮಾತ್ ಆಡಲ್ಲ. ಯಾವ್ ಪಕ್ಷ ಧರ್ಮ ಕೂಡ ಧ್ವನಿ ಎತ್ತಿಲ್ಲ, ಆಗುತ್ತೆ ಒಂದೆರೆಡು ಸಂತಾಪದ ಮಾತು ಆಡಿ, ತಮ್ ಪಾಡಿಗೆ ತಾವು ಆಗ್ತಾರೆ , ಇತ್ತಗೆ ಹೆಣ್ಣಿಗೆ ರಕ್ಷಣೆ ಇಲ್ಲ ರೈತನಿಗೆ ಬೆಲೆ ಕೊಡ್ತಾ ಇಲ್ಲಾ ಜಾತಿಗೆ ಕೊನೆ ಇಲ್ಲ, ಮನುಷ್ಯತ್ವದ ಕಥೆ ಅದೋ ಗತಿ…

  2. “ಮೇರಾ ಜಾತಿ ಭಾರತ್ ಮಹಾನ್ ಹೈ”, “ಹಿಂದೂ ನಾವೆಲ್ಲ ಒಂದು” ಎನ್ನುವ ಸನಾತನಿ ಶನಿ ಸಂತಾನಗಳು ಈ ದೇಶದ ವಿಷ ಬೇರುಗಳಾಗಿವೆ…, ಶೋಷಿತರೆಲ್ಲ ಜಾಗೃತರಾಗಿ, ಒಂದಾಗಿ ಬಾಬಾಸಾಹೇಬರ ಆಶಯದಂತೆ ಈ ವಿಷ ಬೇರುಗಳ ಬುಡಸಮೇತ ಕೀಳದಿದ್ದಲ್ಲಿ ಈ ದೇಶದಲ್ಲಿ ದಲಿತರಿಗೆ, ದೀನರಿಗೆ, ಶೋಷಿತರಿಗೆ ಬದುಕು ಮತ್ತು ಭವಿಷ್ಯ ಎಂದೂ ಇರದು. ಶಿಕ್ಷಣ, ಸಂಘಟನೆ, ಹೋರಾಟ ಅಷ್ಟೇ ಅಲ್ಲ, ಅಗತ್ಯವಾದಲ್ಲಿ ಬೀದಿ ಕಾಳಗ, ರಕ್ತ ಕ್ರಾಂತಿಗೂ ಸಿದ್ಧಾರಾಗಿರಬೇಕಾದ ಸೇನೆ ನಿರ್ಮಾಣವಾಗಬೇಕು. ಆದಷ್ಟೇ ಈ ಅಮಾನವೀಯ ಕ್ರೂರತೆ, ಅನ್ಯಾಯ, ದಬ್ಬಾಳಿಕೆ, ವಂಚನೆ ಮತ್ತು ಶೋಷಣೆಗೆ ಪರಿಹಾರ. ಯಾವ ಸರ್ಕಾರ, ನಾಯಕರು,ಕಾನೂನುಗಳು ನಮ್ಮ ನೆರವಿಗೆ ಸದಾ ಬಾರದು, ಇವುಗಳು ಕೂಡ ನಮ್ಮ ವಂಚನೆ ಮಾಡುತ್ತಿವೆ. ಎಲ್ಲಕಿಂತ ಮೊದಲು ಶೋಷಿತರು ತಕ್ಷಣದಲ್ಲಿ ಈ ಬದುಕಲ್ಲಿ ಸನಾತನಿ ಧರ್ಮಾಚಾರಣೆ, ಅನುಸರಣೆಗಳ ಧಿಕ್ಕರಿಸಿ ಮಾನವೀಯ ಆಚರಣೆಗಳಷ್ಟೇ ಪಾಲಿಸುವ ನಿರ್ಣಯ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...