Homeದಲಿತ್ ಫೈಲ್ಸ್ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಜಾತಿ ಕಿರುಕುಳದಿಂದ ಬೇಸತ್ತು ದಲಿತ ವಿದ್ಯಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ನಡೆದಿದೆ. ತರಗತಿಯ ಶಿಕ್ಷಕ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದು, ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ತನ್ನ ಮಗನಿಗೆ ಕಿರುಕುಳ ನೀಡಿದ್ದಾರೆ ಎಂದು ಮೃತ ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

ರಾಂಪುರ (ಸಾಕಿನ್) ಪೊಲೀಸ್ ಠಾಣೆ ವ್ಯಾಪ್ತಿಯ ಪಡ್ಖುರಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ನವೋದಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಅಮಿತ್ ಪ್ರಜಾಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನವೋದಯ ವಿದ್ಯಾಲಯದಲ್ಲಿ ಅಮಿತ್ ಅವರ ಕ್ಲಾಸ್ ಟೀಚರ್ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದರು. ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ಕಿರುಕುಳ ನೀಡಿದ್ದಾರೆ” ಎಂದು ಮೃತ ವಿದ್ಯಾರ್ಥಿಯ ತಂದೆ ಅಲ್ಹಾ ಪ್ರಜಾಪತಿ ಆರೋಪಿಸಿದ್ದಾರೆ.

“ನನ್ನ ಮಗ ಕರೆ ಮಾಡಿ, ನನಗೆ ಅನಾರೋಗ್ಯವಿದೆ, ನಾನು ಮನೆಗೆ ಬರಬೇಕು ಎಂದು ಹೇಳಿದ. ಮಗುವಿನ ತಾಯಿ ಮತ್ತು ಸಹೋದರ ಅವನನ್ನು ಕರೆದುಕೊಂಡು ಬರಲು ನವೋದಯ ಶಾಲೆಗೆ ಹೋದರು. ಆದರೆ ಮಗನನ್ನು ಕಳುಹಿಸಿರಲಿಲ್ಲ. ಶಾಲೆಯ ಅನುಮತಿ ಇಲ್ಲದೆಯೇ ಅಂದು ರಾತ್ರಿ 12 ಗಂಟೆಗೆ ಮಗ ಮನೆಗೆ ಬಂದಿದ್ದ” ಎಂದು ತಿಳಿಸಿದ್ದಾರೆ.

“ಮನೆಗೆ ಬಂದ ನಂತರ, ಅಜಿತ್ ಪಾಂಡೆ ಸರ್ ನನಗೆ ಚಿತ್ರಹಿಂಸೆ ನೀಡುತ್ತಾರೆ ಮತ್ತು ಅವಮಾನಿಸುತ್ತಾರೆ. ನಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಅಮಿತ್ ತಂದೆ ವಿವರಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇಳ್ರಪ್ಪೋ ಕೇಳಿ!!!!?
    ಧರ್ಮ ಧರ್ಮ ಅನ್ನುವ ರಾಜ್ಯದಲ್ಲಿ
    ಯಾರ್ಯಾರೋ ಪುಣ್ಯಾತ್ಮರು ಹುಟ್ಟಿದ ( ಅವರೇ ಹೇಳಿದ್ದು ) ಆ ರಾಜ್ಯದಲ್ಲಿ
    ವಿದ್ಯೆ ಕಲಿತ ಗುರುವು
    ವಿದ್ಯೆ ಕಲಿಯುವ ಮಗುವಿಗೆ ಭವಿಷ್ಯ ರೂಪಿಸುವ ಕೆಲಸ ಮಾಡದೆ
    ಆ ಮಗು ಆತ್ಮಹತ್ಯೆ ಅನ್ನುವ ಯೋಚ್ನೆ ಮಾಡಿ ತನ್ನ ಜೀವನವನ್ನೇ ಕೊನೆ ಮಾಡಿದ್ದಾನೆ… ಯಾವ್ ರಾಜಕೀಯ ವ್ಯಕ್ತಿ ಕೂಡ ಮಾತ್ ಆಡಲ್ಲ. ಯಾವ್ ಪಕ್ಷ ಧರ್ಮ ಕೂಡ ಧ್ವನಿ ಎತ್ತಿಲ್ಲ, ಆಗುತ್ತೆ ಒಂದೆರೆಡು ಸಂತಾಪದ ಮಾತು ಆಡಿ, ತಮ್ ಪಾಡಿಗೆ ತಾವು ಆಗ್ತಾರೆ , ಇತ್ತಗೆ ಹೆಣ್ಣಿಗೆ ರಕ್ಷಣೆ ಇಲ್ಲ ರೈತನಿಗೆ ಬೆಲೆ ಕೊಡ್ತಾ ಇಲ್ಲಾ ಜಾತಿಗೆ ಕೊನೆ ಇಲ್ಲ, ಮನುಷ್ಯತ್ವದ ಕಥೆ ಅದೋ ಗತಿ…

  2. “ಮೇರಾ ಜಾತಿ ಭಾರತ್ ಮಹಾನ್ ಹೈ”, “ಹಿಂದೂ ನಾವೆಲ್ಲ ಒಂದು” ಎನ್ನುವ ಸನಾತನಿ ಶನಿ ಸಂತಾನಗಳು ಈ ದೇಶದ ವಿಷ ಬೇರುಗಳಾಗಿವೆ…, ಶೋಷಿತರೆಲ್ಲ ಜಾಗೃತರಾಗಿ, ಒಂದಾಗಿ ಬಾಬಾಸಾಹೇಬರ ಆಶಯದಂತೆ ಈ ವಿಷ ಬೇರುಗಳ ಬುಡಸಮೇತ ಕೀಳದಿದ್ದಲ್ಲಿ ಈ ದೇಶದಲ್ಲಿ ದಲಿತರಿಗೆ, ದೀನರಿಗೆ, ಶೋಷಿತರಿಗೆ ಬದುಕು ಮತ್ತು ಭವಿಷ್ಯ ಎಂದೂ ಇರದು. ಶಿಕ್ಷಣ, ಸಂಘಟನೆ, ಹೋರಾಟ ಅಷ್ಟೇ ಅಲ್ಲ, ಅಗತ್ಯವಾದಲ್ಲಿ ಬೀದಿ ಕಾಳಗ, ರಕ್ತ ಕ್ರಾಂತಿಗೂ ಸಿದ್ಧಾರಾಗಿರಬೇಕಾದ ಸೇನೆ ನಿರ್ಮಾಣವಾಗಬೇಕು. ಆದಷ್ಟೇ ಈ ಅಮಾನವೀಯ ಕ್ರೂರತೆ, ಅನ್ಯಾಯ, ದಬ್ಬಾಳಿಕೆ, ವಂಚನೆ ಮತ್ತು ಶೋಷಣೆಗೆ ಪರಿಹಾರ. ಯಾವ ಸರ್ಕಾರ, ನಾಯಕರು,ಕಾನೂನುಗಳು ನಮ್ಮ ನೆರವಿಗೆ ಸದಾ ಬಾರದು, ಇವುಗಳು ಕೂಡ ನಮ್ಮ ವಂಚನೆ ಮಾಡುತ್ತಿವೆ. ಎಲ್ಲಕಿಂತ ಮೊದಲು ಶೋಷಿತರು ತಕ್ಷಣದಲ್ಲಿ ಈ ಬದುಕಲ್ಲಿ ಸನಾತನಿ ಧರ್ಮಾಚಾರಣೆ, ಅನುಸರಣೆಗಳ ಧಿಕ್ಕರಿಸಿ ಮಾನವೀಯ ಆಚರಣೆಗಳಷ್ಟೇ ಪಾಲಿಸುವ ನಿರ್ಣಯ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...