Homeದಲಿತ್ ಫೈಲ್ಸ್ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಜಾತಿ ಕಿರುಕುಳದಿಂದ ಬೇಸತ್ತು ದಲಿತ ವಿದ್ಯಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ನಡೆದಿದೆ. ತರಗತಿಯ ಶಿಕ್ಷಕ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದು, ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ತನ್ನ ಮಗನಿಗೆ ಕಿರುಕುಳ ನೀಡಿದ್ದಾರೆ ಎಂದು ಮೃತ ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

ರಾಂಪುರ (ಸಾಕಿನ್) ಪೊಲೀಸ್ ಠಾಣೆ ವ್ಯಾಪ್ತಿಯ ಪಡ್ಖುರಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ನವೋದಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಅಮಿತ್ ಪ್ರಜಾಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನವೋದಯ ವಿದ್ಯಾಲಯದಲ್ಲಿ ಅಮಿತ್ ಅವರ ಕ್ಲಾಸ್ ಟೀಚರ್ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದರು. ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ಕಿರುಕುಳ ನೀಡಿದ್ದಾರೆ” ಎಂದು ಮೃತ ವಿದ್ಯಾರ್ಥಿಯ ತಂದೆ ಅಲ್ಹಾ ಪ್ರಜಾಪತಿ ಆರೋಪಿಸಿದ್ದಾರೆ.

“ನನ್ನ ಮಗ ಕರೆ ಮಾಡಿ, ನನಗೆ ಅನಾರೋಗ್ಯವಿದೆ, ನಾನು ಮನೆಗೆ ಬರಬೇಕು ಎಂದು ಹೇಳಿದ. ಮಗುವಿನ ತಾಯಿ ಮತ್ತು ಸಹೋದರ ಅವನನ್ನು ಕರೆದುಕೊಂಡು ಬರಲು ನವೋದಯ ಶಾಲೆಗೆ ಹೋದರು. ಆದರೆ ಮಗನನ್ನು ಕಳುಹಿಸಿರಲಿಲ್ಲ. ಶಾಲೆಯ ಅನುಮತಿ ಇಲ್ಲದೆಯೇ ಅಂದು ರಾತ್ರಿ 12 ಗಂಟೆಗೆ ಮಗ ಮನೆಗೆ ಬಂದಿದ್ದ” ಎಂದು ತಿಳಿಸಿದ್ದಾರೆ.

“ಮನೆಗೆ ಬಂದ ನಂತರ, ಅಜಿತ್ ಪಾಂಡೆ ಸರ್ ನನಗೆ ಚಿತ್ರಹಿಂಸೆ ನೀಡುತ್ತಾರೆ ಮತ್ತು ಅವಮಾನಿಸುತ್ತಾರೆ. ನಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಅಮಿತ್ ತಂದೆ ವಿವರಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇಳ್ರಪ್ಪೋ ಕೇಳಿ!!!!?
    ಧರ್ಮ ಧರ್ಮ ಅನ್ನುವ ರಾಜ್ಯದಲ್ಲಿ
    ಯಾರ್ಯಾರೋ ಪುಣ್ಯಾತ್ಮರು ಹುಟ್ಟಿದ ( ಅವರೇ ಹೇಳಿದ್ದು ) ಆ ರಾಜ್ಯದಲ್ಲಿ
    ವಿದ್ಯೆ ಕಲಿತ ಗುರುವು
    ವಿದ್ಯೆ ಕಲಿಯುವ ಮಗುವಿಗೆ ಭವಿಷ್ಯ ರೂಪಿಸುವ ಕೆಲಸ ಮಾಡದೆ
    ಆ ಮಗು ಆತ್ಮಹತ್ಯೆ ಅನ್ನುವ ಯೋಚ್ನೆ ಮಾಡಿ ತನ್ನ ಜೀವನವನ್ನೇ ಕೊನೆ ಮಾಡಿದ್ದಾನೆ… ಯಾವ್ ರಾಜಕೀಯ ವ್ಯಕ್ತಿ ಕೂಡ ಮಾತ್ ಆಡಲ್ಲ. ಯಾವ್ ಪಕ್ಷ ಧರ್ಮ ಕೂಡ ಧ್ವನಿ ಎತ್ತಿಲ್ಲ, ಆಗುತ್ತೆ ಒಂದೆರೆಡು ಸಂತಾಪದ ಮಾತು ಆಡಿ, ತಮ್ ಪಾಡಿಗೆ ತಾವು ಆಗ್ತಾರೆ , ಇತ್ತಗೆ ಹೆಣ್ಣಿಗೆ ರಕ್ಷಣೆ ಇಲ್ಲ ರೈತನಿಗೆ ಬೆಲೆ ಕೊಡ್ತಾ ಇಲ್ಲಾ ಜಾತಿಗೆ ಕೊನೆ ಇಲ್ಲ, ಮನುಷ್ಯತ್ವದ ಕಥೆ ಅದೋ ಗತಿ…

  2. “ಮೇರಾ ಜಾತಿ ಭಾರತ್ ಮಹಾನ್ ಹೈ”, “ಹಿಂದೂ ನಾವೆಲ್ಲ ಒಂದು” ಎನ್ನುವ ಸನಾತನಿ ಶನಿ ಸಂತಾನಗಳು ಈ ದೇಶದ ವಿಷ ಬೇರುಗಳಾಗಿವೆ…, ಶೋಷಿತರೆಲ್ಲ ಜಾಗೃತರಾಗಿ, ಒಂದಾಗಿ ಬಾಬಾಸಾಹೇಬರ ಆಶಯದಂತೆ ಈ ವಿಷ ಬೇರುಗಳ ಬುಡಸಮೇತ ಕೀಳದಿದ್ದಲ್ಲಿ ಈ ದೇಶದಲ್ಲಿ ದಲಿತರಿಗೆ, ದೀನರಿಗೆ, ಶೋಷಿತರಿಗೆ ಬದುಕು ಮತ್ತು ಭವಿಷ್ಯ ಎಂದೂ ಇರದು. ಶಿಕ್ಷಣ, ಸಂಘಟನೆ, ಹೋರಾಟ ಅಷ್ಟೇ ಅಲ್ಲ, ಅಗತ್ಯವಾದಲ್ಲಿ ಬೀದಿ ಕಾಳಗ, ರಕ್ತ ಕ್ರಾಂತಿಗೂ ಸಿದ್ಧಾರಾಗಿರಬೇಕಾದ ಸೇನೆ ನಿರ್ಮಾಣವಾಗಬೇಕು. ಆದಷ್ಟೇ ಈ ಅಮಾನವೀಯ ಕ್ರೂರತೆ, ಅನ್ಯಾಯ, ದಬ್ಬಾಳಿಕೆ, ವಂಚನೆ ಮತ್ತು ಶೋಷಣೆಗೆ ಪರಿಹಾರ. ಯಾವ ಸರ್ಕಾರ, ನಾಯಕರು,ಕಾನೂನುಗಳು ನಮ್ಮ ನೆರವಿಗೆ ಸದಾ ಬಾರದು, ಇವುಗಳು ಕೂಡ ನಮ್ಮ ವಂಚನೆ ಮಾಡುತ್ತಿವೆ. ಎಲ್ಲಕಿಂತ ಮೊದಲು ಶೋಷಿತರು ತಕ್ಷಣದಲ್ಲಿ ಈ ಬದುಕಲ್ಲಿ ಸನಾತನಿ ಧರ್ಮಾಚಾರಣೆ, ಅನುಸರಣೆಗಳ ಧಿಕ್ಕರಿಸಿ ಮಾನವೀಯ ಆಚರಣೆಗಳಷ್ಟೇ ಪಾಲಿಸುವ ನಿರ್ಣಯ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...