Homeದಲಿತ್ ಫೈಲ್ಸ್ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಜಾತಿ ಕಿರುಕುಳದಿಂದ ಬೇಸತ್ತು ದಲಿತ ವಿದ್ಯಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ನಡೆದಿದೆ. ತರಗತಿಯ ಶಿಕ್ಷಕ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದು, ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ತನ್ನ ಮಗನಿಗೆ ಕಿರುಕುಳ ನೀಡಿದ್ದಾರೆ ಎಂದು ಮೃತ ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

ರಾಂಪುರ (ಸಾಕಿನ್) ಪೊಲೀಸ್ ಠಾಣೆ ವ್ಯಾಪ್ತಿಯ ಪಡ್ಖುರಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ನವೋದಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಅಮಿತ್ ಪ್ರಜಾಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನವೋದಯ ವಿದ್ಯಾಲಯದಲ್ಲಿ ಅಮಿತ್ ಅವರ ಕ್ಲಾಸ್ ಟೀಚರ್ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದರು. ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ಕಿರುಕುಳ ನೀಡಿದ್ದಾರೆ” ಎಂದು ಮೃತ ವಿದ್ಯಾರ್ಥಿಯ ತಂದೆ ಅಲ್ಹಾ ಪ್ರಜಾಪತಿ ಆರೋಪಿಸಿದ್ದಾರೆ.

“ನನ್ನ ಮಗ ಕರೆ ಮಾಡಿ, ನನಗೆ ಅನಾರೋಗ್ಯವಿದೆ, ನಾನು ಮನೆಗೆ ಬರಬೇಕು ಎಂದು ಹೇಳಿದ. ಮಗುವಿನ ತಾಯಿ ಮತ್ತು ಸಹೋದರ ಅವನನ್ನು ಕರೆದುಕೊಂಡು ಬರಲು ನವೋದಯ ಶಾಲೆಗೆ ಹೋದರು. ಆದರೆ ಮಗನನ್ನು ಕಳುಹಿಸಿರಲಿಲ್ಲ. ಶಾಲೆಯ ಅನುಮತಿ ಇಲ್ಲದೆಯೇ ಅಂದು ರಾತ್ರಿ 12 ಗಂಟೆಗೆ ಮಗ ಮನೆಗೆ ಬಂದಿದ್ದ” ಎಂದು ತಿಳಿಸಿದ್ದಾರೆ.

“ಮನೆಗೆ ಬಂದ ನಂತರ, ಅಜಿತ್ ಪಾಂಡೆ ಸರ್ ನನಗೆ ಚಿತ್ರಹಿಂಸೆ ನೀಡುತ್ತಾರೆ ಮತ್ತು ಅವಮಾನಿಸುತ್ತಾರೆ. ನಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಅಮಿತ್ ತಂದೆ ವಿವರಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇಳ್ರಪ್ಪೋ ಕೇಳಿ!!!!?
    ಧರ್ಮ ಧರ್ಮ ಅನ್ನುವ ರಾಜ್ಯದಲ್ಲಿ
    ಯಾರ್ಯಾರೋ ಪುಣ್ಯಾತ್ಮರು ಹುಟ್ಟಿದ ( ಅವರೇ ಹೇಳಿದ್ದು ) ಆ ರಾಜ್ಯದಲ್ಲಿ
    ವಿದ್ಯೆ ಕಲಿತ ಗುರುವು
    ವಿದ್ಯೆ ಕಲಿಯುವ ಮಗುವಿಗೆ ಭವಿಷ್ಯ ರೂಪಿಸುವ ಕೆಲಸ ಮಾಡದೆ
    ಆ ಮಗು ಆತ್ಮಹತ್ಯೆ ಅನ್ನುವ ಯೋಚ್ನೆ ಮಾಡಿ ತನ್ನ ಜೀವನವನ್ನೇ ಕೊನೆ ಮಾಡಿದ್ದಾನೆ… ಯಾವ್ ರಾಜಕೀಯ ವ್ಯಕ್ತಿ ಕೂಡ ಮಾತ್ ಆಡಲ್ಲ. ಯಾವ್ ಪಕ್ಷ ಧರ್ಮ ಕೂಡ ಧ್ವನಿ ಎತ್ತಿಲ್ಲ, ಆಗುತ್ತೆ ಒಂದೆರೆಡು ಸಂತಾಪದ ಮಾತು ಆಡಿ, ತಮ್ ಪಾಡಿಗೆ ತಾವು ಆಗ್ತಾರೆ , ಇತ್ತಗೆ ಹೆಣ್ಣಿಗೆ ರಕ್ಷಣೆ ಇಲ್ಲ ರೈತನಿಗೆ ಬೆಲೆ ಕೊಡ್ತಾ ಇಲ್ಲಾ ಜಾತಿಗೆ ಕೊನೆ ಇಲ್ಲ, ಮನುಷ್ಯತ್ವದ ಕಥೆ ಅದೋ ಗತಿ…

  2. “ಮೇರಾ ಜಾತಿ ಭಾರತ್ ಮಹಾನ್ ಹೈ”, “ಹಿಂದೂ ನಾವೆಲ್ಲ ಒಂದು” ಎನ್ನುವ ಸನಾತನಿ ಶನಿ ಸಂತಾನಗಳು ಈ ದೇಶದ ವಿಷ ಬೇರುಗಳಾಗಿವೆ…, ಶೋಷಿತರೆಲ್ಲ ಜಾಗೃತರಾಗಿ, ಒಂದಾಗಿ ಬಾಬಾಸಾಹೇಬರ ಆಶಯದಂತೆ ಈ ವಿಷ ಬೇರುಗಳ ಬುಡಸಮೇತ ಕೀಳದಿದ್ದಲ್ಲಿ ಈ ದೇಶದಲ್ಲಿ ದಲಿತರಿಗೆ, ದೀನರಿಗೆ, ಶೋಷಿತರಿಗೆ ಬದುಕು ಮತ್ತು ಭವಿಷ್ಯ ಎಂದೂ ಇರದು. ಶಿಕ್ಷಣ, ಸಂಘಟನೆ, ಹೋರಾಟ ಅಷ್ಟೇ ಅಲ್ಲ, ಅಗತ್ಯವಾದಲ್ಲಿ ಬೀದಿ ಕಾಳಗ, ರಕ್ತ ಕ್ರಾಂತಿಗೂ ಸಿದ್ಧಾರಾಗಿರಬೇಕಾದ ಸೇನೆ ನಿರ್ಮಾಣವಾಗಬೇಕು. ಆದಷ್ಟೇ ಈ ಅಮಾನವೀಯ ಕ್ರೂರತೆ, ಅನ್ಯಾಯ, ದಬ್ಬಾಳಿಕೆ, ವಂಚನೆ ಮತ್ತು ಶೋಷಣೆಗೆ ಪರಿಹಾರ. ಯಾವ ಸರ್ಕಾರ, ನಾಯಕರು,ಕಾನೂನುಗಳು ನಮ್ಮ ನೆರವಿಗೆ ಸದಾ ಬಾರದು, ಇವುಗಳು ಕೂಡ ನಮ್ಮ ವಂಚನೆ ಮಾಡುತ್ತಿವೆ. ಎಲ್ಲಕಿಂತ ಮೊದಲು ಶೋಷಿತರು ತಕ್ಷಣದಲ್ಲಿ ಈ ಬದುಕಲ್ಲಿ ಸನಾತನಿ ಧರ್ಮಾಚಾರಣೆ, ಅನುಸರಣೆಗಳ ಧಿಕ್ಕರಿಸಿ ಮಾನವೀಯ ಆಚರಣೆಗಳಷ್ಟೇ ಪಾಲಿಸುವ ನಿರ್ಣಯ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...