Homeದಲಿತ್ ಫೈಲ್ಸ್ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಜಾತಿ ಕಿರುಕುಳದಿಂದ ಬೇಸತ್ತು ದಲಿತ ವಿದ್ಯಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ನಡೆದಿದೆ. ತರಗತಿಯ ಶಿಕ್ಷಕ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದು, ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ತನ್ನ ಮಗನಿಗೆ ಕಿರುಕುಳ ನೀಡಿದ್ದಾರೆ ಎಂದು ಮೃತ ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

ರಾಂಪುರ (ಸಾಕಿನ್) ಪೊಲೀಸ್ ಠಾಣೆ ವ್ಯಾಪ್ತಿಯ ಪಡ್ಖುರಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ನವೋದಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಅಮಿತ್ ಪ್ರಜಾಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನವೋದಯ ವಿದ್ಯಾಲಯದಲ್ಲಿ ಅಮಿತ್ ಅವರ ಕ್ಲಾಸ್ ಟೀಚರ್ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದರು. ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ಕಿರುಕುಳ ನೀಡಿದ್ದಾರೆ” ಎಂದು ಮೃತ ವಿದ್ಯಾರ್ಥಿಯ ತಂದೆ ಅಲ್ಹಾ ಪ್ರಜಾಪತಿ ಆರೋಪಿಸಿದ್ದಾರೆ.

“ನನ್ನ ಮಗ ಕರೆ ಮಾಡಿ, ನನಗೆ ಅನಾರೋಗ್ಯವಿದೆ, ನಾನು ಮನೆಗೆ ಬರಬೇಕು ಎಂದು ಹೇಳಿದ. ಮಗುವಿನ ತಾಯಿ ಮತ್ತು ಸಹೋದರ ಅವನನ್ನು ಕರೆದುಕೊಂಡು ಬರಲು ನವೋದಯ ಶಾಲೆಗೆ ಹೋದರು. ಆದರೆ ಮಗನನ್ನು ಕಳುಹಿಸಿರಲಿಲ್ಲ. ಶಾಲೆಯ ಅನುಮತಿ ಇಲ್ಲದೆಯೇ ಅಂದು ರಾತ್ರಿ 12 ಗಂಟೆಗೆ ಮಗ ಮನೆಗೆ ಬಂದಿದ್ದ” ಎಂದು ತಿಳಿಸಿದ್ದಾರೆ.

“ಮನೆಗೆ ಬಂದ ನಂತರ, ಅಜಿತ್ ಪಾಂಡೆ ಸರ್ ನನಗೆ ಚಿತ್ರಹಿಂಸೆ ನೀಡುತ್ತಾರೆ ಮತ್ತು ಅವಮಾನಿಸುತ್ತಾರೆ. ನಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಅಮಿತ್ ತಂದೆ ವಿವರಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇಳ್ರಪ್ಪೋ ಕೇಳಿ!!!!?
    ಧರ್ಮ ಧರ್ಮ ಅನ್ನುವ ರಾಜ್ಯದಲ್ಲಿ
    ಯಾರ್ಯಾರೋ ಪುಣ್ಯಾತ್ಮರು ಹುಟ್ಟಿದ ( ಅವರೇ ಹೇಳಿದ್ದು ) ಆ ರಾಜ್ಯದಲ್ಲಿ
    ವಿದ್ಯೆ ಕಲಿತ ಗುರುವು
    ವಿದ್ಯೆ ಕಲಿಯುವ ಮಗುವಿಗೆ ಭವಿಷ್ಯ ರೂಪಿಸುವ ಕೆಲಸ ಮಾಡದೆ
    ಆ ಮಗು ಆತ್ಮಹತ್ಯೆ ಅನ್ನುವ ಯೋಚ್ನೆ ಮಾಡಿ ತನ್ನ ಜೀವನವನ್ನೇ ಕೊನೆ ಮಾಡಿದ್ದಾನೆ… ಯಾವ್ ರಾಜಕೀಯ ವ್ಯಕ್ತಿ ಕೂಡ ಮಾತ್ ಆಡಲ್ಲ. ಯಾವ್ ಪಕ್ಷ ಧರ್ಮ ಕೂಡ ಧ್ವನಿ ಎತ್ತಿಲ್ಲ, ಆಗುತ್ತೆ ಒಂದೆರೆಡು ಸಂತಾಪದ ಮಾತು ಆಡಿ, ತಮ್ ಪಾಡಿಗೆ ತಾವು ಆಗ್ತಾರೆ , ಇತ್ತಗೆ ಹೆಣ್ಣಿಗೆ ರಕ್ಷಣೆ ಇಲ್ಲ ರೈತನಿಗೆ ಬೆಲೆ ಕೊಡ್ತಾ ಇಲ್ಲಾ ಜಾತಿಗೆ ಕೊನೆ ಇಲ್ಲ, ಮನುಷ್ಯತ್ವದ ಕಥೆ ಅದೋ ಗತಿ…

  2. “ಮೇರಾ ಜಾತಿ ಭಾರತ್ ಮಹಾನ್ ಹೈ”, “ಹಿಂದೂ ನಾವೆಲ್ಲ ಒಂದು” ಎನ್ನುವ ಸನಾತನಿ ಶನಿ ಸಂತಾನಗಳು ಈ ದೇಶದ ವಿಷ ಬೇರುಗಳಾಗಿವೆ…, ಶೋಷಿತರೆಲ್ಲ ಜಾಗೃತರಾಗಿ, ಒಂದಾಗಿ ಬಾಬಾಸಾಹೇಬರ ಆಶಯದಂತೆ ಈ ವಿಷ ಬೇರುಗಳ ಬುಡಸಮೇತ ಕೀಳದಿದ್ದಲ್ಲಿ ಈ ದೇಶದಲ್ಲಿ ದಲಿತರಿಗೆ, ದೀನರಿಗೆ, ಶೋಷಿತರಿಗೆ ಬದುಕು ಮತ್ತು ಭವಿಷ್ಯ ಎಂದೂ ಇರದು. ಶಿಕ್ಷಣ, ಸಂಘಟನೆ, ಹೋರಾಟ ಅಷ್ಟೇ ಅಲ್ಲ, ಅಗತ್ಯವಾದಲ್ಲಿ ಬೀದಿ ಕಾಳಗ, ರಕ್ತ ಕ್ರಾಂತಿಗೂ ಸಿದ್ಧಾರಾಗಿರಬೇಕಾದ ಸೇನೆ ನಿರ್ಮಾಣವಾಗಬೇಕು. ಆದಷ್ಟೇ ಈ ಅಮಾನವೀಯ ಕ್ರೂರತೆ, ಅನ್ಯಾಯ, ದಬ್ಬಾಳಿಕೆ, ವಂಚನೆ ಮತ್ತು ಶೋಷಣೆಗೆ ಪರಿಹಾರ. ಯಾವ ಸರ್ಕಾರ, ನಾಯಕರು,ಕಾನೂನುಗಳು ನಮ್ಮ ನೆರವಿಗೆ ಸದಾ ಬಾರದು, ಇವುಗಳು ಕೂಡ ನಮ್ಮ ವಂಚನೆ ಮಾಡುತ್ತಿವೆ. ಎಲ್ಲಕಿಂತ ಮೊದಲು ಶೋಷಿತರು ತಕ್ಷಣದಲ್ಲಿ ಈ ಬದುಕಲ್ಲಿ ಸನಾತನಿ ಧರ್ಮಾಚಾರಣೆ, ಅನುಸರಣೆಗಳ ಧಿಕ್ಕರಿಸಿ ಮಾನವೀಯ ಆಚರಣೆಗಳಷ್ಟೇ ಪಾಲಿಸುವ ನಿರ್ಣಯ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...