Homeದಲಿತ್ ಫೈಲ್ಸ್ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಜಾತಿ ಕಿರುಕುಳದಿಂದ ಬೇಸತ್ತು ದಲಿತ ವಿದ್ಯಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ನಡೆದಿದೆ. ತರಗತಿಯ ಶಿಕ್ಷಕ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದು, ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ತನ್ನ ಮಗನಿಗೆ ಕಿರುಕುಳ ನೀಡಿದ್ದಾರೆ ಎಂದು ಮೃತ ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

ರಾಂಪುರ (ಸಾಕಿನ್) ಪೊಲೀಸ್ ಠಾಣೆ ವ್ಯಾಪ್ತಿಯ ಪಡ್ಖುರಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ನವೋದಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಅಮಿತ್ ಪ್ರಜಾಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನವೋದಯ ವಿದ್ಯಾಲಯದಲ್ಲಿ ಅಮಿತ್ ಅವರ ಕ್ಲಾಸ್ ಟೀಚರ್ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದರು. ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ಕಿರುಕುಳ ನೀಡಿದ್ದಾರೆ” ಎಂದು ಮೃತ ವಿದ್ಯಾರ್ಥಿಯ ತಂದೆ ಅಲ್ಹಾ ಪ್ರಜಾಪತಿ ಆರೋಪಿಸಿದ್ದಾರೆ.

“ನನ್ನ ಮಗ ಕರೆ ಮಾಡಿ, ನನಗೆ ಅನಾರೋಗ್ಯವಿದೆ, ನಾನು ಮನೆಗೆ ಬರಬೇಕು ಎಂದು ಹೇಳಿದ. ಮಗುವಿನ ತಾಯಿ ಮತ್ತು ಸಹೋದರ ಅವನನ್ನು ಕರೆದುಕೊಂಡು ಬರಲು ನವೋದಯ ಶಾಲೆಗೆ ಹೋದರು. ಆದರೆ ಮಗನನ್ನು ಕಳುಹಿಸಿರಲಿಲ್ಲ. ಶಾಲೆಯ ಅನುಮತಿ ಇಲ್ಲದೆಯೇ ಅಂದು ರಾತ್ರಿ 12 ಗಂಟೆಗೆ ಮಗ ಮನೆಗೆ ಬಂದಿದ್ದ” ಎಂದು ತಿಳಿಸಿದ್ದಾರೆ.

“ಮನೆಗೆ ಬಂದ ನಂತರ, ಅಜಿತ್ ಪಾಂಡೆ ಸರ್ ನನಗೆ ಚಿತ್ರಹಿಂಸೆ ನೀಡುತ್ತಾರೆ ಮತ್ತು ಅವಮಾನಿಸುತ್ತಾರೆ. ನಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಅಮಿತ್ ತಂದೆ ವಿವರಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇಳ್ರಪ್ಪೋ ಕೇಳಿ!!!!?
    ಧರ್ಮ ಧರ್ಮ ಅನ್ನುವ ರಾಜ್ಯದಲ್ಲಿ
    ಯಾರ್ಯಾರೋ ಪುಣ್ಯಾತ್ಮರು ಹುಟ್ಟಿದ ( ಅವರೇ ಹೇಳಿದ್ದು ) ಆ ರಾಜ್ಯದಲ್ಲಿ
    ವಿದ್ಯೆ ಕಲಿತ ಗುರುವು
    ವಿದ್ಯೆ ಕಲಿಯುವ ಮಗುವಿಗೆ ಭವಿಷ್ಯ ರೂಪಿಸುವ ಕೆಲಸ ಮಾಡದೆ
    ಆ ಮಗು ಆತ್ಮಹತ್ಯೆ ಅನ್ನುವ ಯೋಚ್ನೆ ಮಾಡಿ ತನ್ನ ಜೀವನವನ್ನೇ ಕೊನೆ ಮಾಡಿದ್ದಾನೆ… ಯಾವ್ ರಾಜಕೀಯ ವ್ಯಕ್ತಿ ಕೂಡ ಮಾತ್ ಆಡಲ್ಲ. ಯಾವ್ ಪಕ್ಷ ಧರ್ಮ ಕೂಡ ಧ್ವನಿ ಎತ್ತಿಲ್ಲ, ಆಗುತ್ತೆ ಒಂದೆರೆಡು ಸಂತಾಪದ ಮಾತು ಆಡಿ, ತಮ್ ಪಾಡಿಗೆ ತಾವು ಆಗ್ತಾರೆ , ಇತ್ತಗೆ ಹೆಣ್ಣಿಗೆ ರಕ್ಷಣೆ ಇಲ್ಲ ರೈತನಿಗೆ ಬೆಲೆ ಕೊಡ್ತಾ ಇಲ್ಲಾ ಜಾತಿಗೆ ಕೊನೆ ಇಲ್ಲ, ಮನುಷ್ಯತ್ವದ ಕಥೆ ಅದೋ ಗತಿ…

  2. “ಮೇರಾ ಜಾತಿ ಭಾರತ್ ಮಹಾನ್ ಹೈ”, “ಹಿಂದೂ ನಾವೆಲ್ಲ ಒಂದು” ಎನ್ನುವ ಸನಾತನಿ ಶನಿ ಸಂತಾನಗಳು ಈ ದೇಶದ ವಿಷ ಬೇರುಗಳಾಗಿವೆ…, ಶೋಷಿತರೆಲ್ಲ ಜಾಗೃತರಾಗಿ, ಒಂದಾಗಿ ಬಾಬಾಸಾಹೇಬರ ಆಶಯದಂತೆ ಈ ವಿಷ ಬೇರುಗಳ ಬುಡಸಮೇತ ಕೀಳದಿದ್ದಲ್ಲಿ ಈ ದೇಶದಲ್ಲಿ ದಲಿತರಿಗೆ, ದೀನರಿಗೆ, ಶೋಷಿತರಿಗೆ ಬದುಕು ಮತ್ತು ಭವಿಷ್ಯ ಎಂದೂ ಇರದು. ಶಿಕ್ಷಣ, ಸಂಘಟನೆ, ಹೋರಾಟ ಅಷ್ಟೇ ಅಲ್ಲ, ಅಗತ್ಯವಾದಲ್ಲಿ ಬೀದಿ ಕಾಳಗ, ರಕ್ತ ಕ್ರಾಂತಿಗೂ ಸಿದ್ಧಾರಾಗಿರಬೇಕಾದ ಸೇನೆ ನಿರ್ಮಾಣವಾಗಬೇಕು. ಆದಷ್ಟೇ ಈ ಅಮಾನವೀಯ ಕ್ರೂರತೆ, ಅನ್ಯಾಯ, ದಬ್ಬಾಳಿಕೆ, ವಂಚನೆ ಮತ್ತು ಶೋಷಣೆಗೆ ಪರಿಹಾರ. ಯಾವ ಸರ್ಕಾರ, ನಾಯಕರು,ಕಾನೂನುಗಳು ನಮ್ಮ ನೆರವಿಗೆ ಸದಾ ಬಾರದು, ಇವುಗಳು ಕೂಡ ನಮ್ಮ ವಂಚನೆ ಮಾಡುತ್ತಿವೆ. ಎಲ್ಲಕಿಂತ ಮೊದಲು ಶೋಷಿತರು ತಕ್ಷಣದಲ್ಲಿ ಈ ಬದುಕಲ್ಲಿ ಸನಾತನಿ ಧರ್ಮಾಚಾರಣೆ, ಅನುಸರಣೆಗಳ ಧಿಕ್ಕರಿಸಿ ಮಾನವೀಯ ಆಚರಣೆಗಳಷ್ಟೇ ಪಾಲಿಸುವ ನಿರ್ಣಯ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...