Homeದಲಿತ್ ಫೈಲ್ಸ್ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಜಾತಿ ಕಿರುಕುಳದಿಂದ ಬೇಸತ್ತು ದಲಿತ ವಿದ್ಯಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ನಡೆದಿದೆ. ತರಗತಿಯ ಶಿಕ್ಷಕ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದು, ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ತನ್ನ ಮಗನಿಗೆ ಕಿರುಕುಳ ನೀಡಿದ್ದಾರೆ ಎಂದು ಮೃತ ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

ರಾಂಪುರ (ಸಾಕಿನ್) ಪೊಲೀಸ್ ಠಾಣೆ ವ್ಯಾಪ್ತಿಯ ಪಡ್ಖುರಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ನವೋದಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಅಮಿತ್ ಪ್ರಜಾಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನವೋದಯ ವಿದ್ಯಾಲಯದಲ್ಲಿ ಅಮಿತ್ ಅವರ ಕ್ಲಾಸ್ ಟೀಚರ್ ಅಜಿತ್ ಪಾಂಡೆ ಜಾತಿ ತಾರತಮ್ಯ ಮಾಡುತ್ತಿದ್ದರು. ನೀನು ಕೀಳು ಜಾತಿಯವನು, ನಿನಗೆ ಓದುವ ಹಕ್ಕಿಲ್ಲ ಎಂದು ಕಿರುಕುಳ ನೀಡಿದ್ದಾರೆ” ಎಂದು ಮೃತ ವಿದ್ಯಾರ್ಥಿಯ ತಂದೆ ಅಲ್ಹಾ ಪ್ರಜಾಪತಿ ಆರೋಪಿಸಿದ್ದಾರೆ.

“ನನ್ನ ಮಗ ಕರೆ ಮಾಡಿ, ನನಗೆ ಅನಾರೋಗ್ಯವಿದೆ, ನಾನು ಮನೆಗೆ ಬರಬೇಕು ಎಂದು ಹೇಳಿದ. ಮಗುವಿನ ತಾಯಿ ಮತ್ತು ಸಹೋದರ ಅವನನ್ನು ಕರೆದುಕೊಂಡು ಬರಲು ನವೋದಯ ಶಾಲೆಗೆ ಹೋದರು. ಆದರೆ ಮಗನನ್ನು ಕಳುಹಿಸಿರಲಿಲ್ಲ. ಶಾಲೆಯ ಅನುಮತಿ ಇಲ್ಲದೆಯೇ ಅಂದು ರಾತ್ರಿ 12 ಗಂಟೆಗೆ ಮಗ ಮನೆಗೆ ಬಂದಿದ್ದ” ಎಂದು ತಿಳಿಸಿದ್ದಾರೆ.

“ಮನೆಗೆ ಬಂದ ನಂತರ, ಅಜಿತ್ ಪಾಂಡೆ ಸರ್ ನನಗೆ ಚಿತ್ರಹಿಂಸೆ ನೀಡುತ್ತಾರೆ ಮತ್ತು ಅವಮಾನಿಸುತ್ತಾರೆ. ನಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಅಮಿತ್ ತಂದೆ ವಿವರಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇಳ್ರಪ್ಪೋ ಕೇಳಿ!!!!?
    ಧರ್ಮ ಧರ್ಮ ಅನ್ನುವ ರಾಜ್ಯದಲ್ಲಿ
    ಯಾರ್ಯಾರೋ ಪುಣ್ಯಾತ್ಮರು ಹುಟ್ಟಿದ ( ಅವರೇ ಹೇಳಿದ್ದು ) ಆ ರಾಜ್ಯದಲ್ಲಿ
    ವಿದ್ಯೆ ಕಲಿತ ಗುರುವು
    ವಿದ್ಯೆ ಕಲಿಯುವ ಮಗುವಿಗೆ ಭವಿಷ್ಯ ರೂಪಿಸುವ ಕೆಲಸ ಮಾಡದೆ
    ಆ ಮಗು ಆತ್ಮಹತ್ಯೆ ಅನ್ನುವ ಯೋಚ್ನೆ ಮಾಡಿ ತನ್ನ ಜೀವನವನ್ನೇ ಕೊನೆ ಮಾಡಿದ್ದಾನೆ… ಯಾವ್ ರಾಜಕೀಯ ವ್ಯಕ್ತಿ ಕೂಡ ಮಾತ್ ಆಡಲ್ಲ. ಯಾವ್ ಪಕ್ಷ ಧರ್ಮ ಕೂಡ ಧ್ವನಿ ಎತ್ತಿಲ್ಲ, ಆಗುತ್ತೆ ಒಂದೆರೆಡು ಸಂತಾಪದ ಮಾತು ಆಡಿ, ತಮ್ ಪಾಡಿಗೆ ತಾವು ಆಗ್ತಾರೆ , ಇತ್ತಗೆ ಹೆಣ್ಣಿಗೆ ರಕ್ಷಣೆ ಇಲ್ಲ ರೈತನಿಗೆ ಬೆಲೆ ಕೊಡ್ತಾ ಇಲ್ಲಾ ಜಾತಿಗೆ ಕೊನೆ ಇಲ್ಲ, ಮನುಷ್ಯತ್ವದ ಕಥೆ ಅದೋ ಗತಿ…

  2. “ಮೇರಾ ಜಾತಿ ಭಾರತ್ ಮಹಾನ್ ಹೈ”, “ಹಿಂದೂ ನಾವೆಲ್ಲ ಒಂದು” ಎನ್ನುವ ಸನಾತನಿ ಶನಿ ಸಂತಾನಗಳು ಈ ದೇಶದ ವಿಷ ಬೇರುಗಳಾಗಿವೆ…, ಶೋಷಿತರೆಲ್ಲ ಜಾಗೃತರಾಗಿ, ಒಂದಾಗಿ ಬಾಬಾಸಾಹೇಬರ ಆಶಯದಂತೆ ಈ ವಿಷ ಬೇರುಗಳ ಬುಡಸಮೇತ ಕೀಳದಿದ್ದಲ್ಲಿ ಈ ದೇಶದಲ್ಲಿ ದಲಿತರಿಗೆ, ದೀನರಿಗೆ, ಶೋಷಿತರಿಗೆ ಬದುಕು ಮತ್ತು ಭವಿಷ್ಯ ಎಂದೂ ಇರದು. ಶಿಕ್ಷಣ, ಸಂಘಟನೆ, ಹೋರಾಟ ಅಷ್ಟೇ ಅಲ್ಲ, ಅಗತ್ಯವಾದಲ್ಲಿ ಬೀದಿ ಕಾಳಗ, ರಕ್ತ ಕ್ರಾಂತಿಗೂ ಸಿದ್ಧಾರಾಗಿರಬೇಕಾದ ಸೇನೆ ನಿರ್ಮಾಣವಾಗಬೇಕು. ಆದಷ್ಟೇ ಈ ಅಮಾನವೀಯ ಕ್ರೂರತೆ, ಅನ್ಯಾಯ, ದಬ್ಬಾಳಿಕೆ, ವಂಚನೆ ಮತ್ತು ಶೋಷಣೆಗೆ ಪರಿಹಾರ. ಯಾವ ಸರ್ಕಾರ, ನಾಯಕರು,ಕಾನೂನುಗಳು ನಮ್ಮ ನೆರವಿಗೆ ಸದಾ ಬಾರದು, ಇವುಗಳು ಕೂಡ ನಮ್ಮ ವಂಚನೆ ಮಾಡುತ್ತಿವೆ. ಎಲ್ಲಕಿಂತ ಮೊದಲು ಶೋಷಿತರು ತಕ್ಷಣದಲ್ಲಿ ಈ ಬದುಕಲ್ಲಿ ಸನಾತನಿ ಧರ್ಮಾಚಾರಣೆ, ಅನುಸರಣೆಗಳ ಧಿಕ್ಕರಿಸಿ ಮಾನವೀಯ ಆಚರಣೆಗಳಷ್ಟೇ ಪಾಲಿಸುವ ನಿರ್ಣಯ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...