Homeಮುಖಪುಟಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮನೆ ಧ್ವಂಸಗೊಳಿಸಿದ ಸ್ಥಳೀಯ ಆಡಳಿತ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮನೆ ಧ್ವಂಸಗೊಳಿಸಿದ ಸ್ಥಳೀಯ ಆಡಳಿತ

- Advertisement -
- Advertisement -

ಮಧ್ಯಪ್ರದೇಶದ ಪ್ರಸಿದ್ಧ ದೇವಸ್ಥಾನದ ಬಳಿಯ ಕಾಡಿನಲ್ಲಿ 11 ವರ್ಷದ ಬಾಲಕಿಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಶುಕ್ರವಾರ ಬೆಳಗ್ಗೆ ಕಂಡುಬಂದಿತ್ತು. ಶನಿವಾರ ಮೈಹಾರ್ ಪಟ್ಟಣದ ಸ್ಥಳೀಯ ಆಡಳಿತವು ಆರೋಪಿಗಳಿಬ್ಬರ ಮನೆಗಳನ್ನು ಧ್ವಂಸಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿಗಳಾದ ರವೀಂದ್ರ ಕುಮಾರ್ ಮತ್ತು ಅತುಲ್ ಭಡೋಲಿಯಾ ಗುರುವಾರ ಬಾಲಕಿಯನ್ನು ಪ್ರತ್ಯೇಕ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಒಂದು ದಿನದ ನಂತರ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶುಕ್ರವಾರ ಮೈಹಾರ್ ಮುನ್ಸಿಪಲ್ ಕೌನ್ಸಿಲ್ ಮುಖ್ಯ ಪುರಸಭೆ ಅಧಿಕಾರಿಯಿಂದ ಆರೋಪಿಗಳ ಕುಟುಂಬಗಳಿಗೆ ಜಮೀನು ಮತ್ತು ಮನೆಗಳ ದಾಖಲೆಗಳನ್ನು ಕೋರಿ ನೋಟಿಸ್ ನೀಡಲಾಗಿದೆ ಎಂದು ಉಪವಿಭಾಗಾಧಿಕಾರಿ ಲೋಕೇಶ್ ದಾಬರ್ ಹೇಳಿದ್ದರು.

ಆರೋಪಿಗಳಿಬ್ಬರ ಮನೆಗಳು ಅಕ್ರಮವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ದಬರ್ ಹೇಳಿದರು. ಭಡೋಲಿಯಾ ಅವರ ಮನೆಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬಳಸಿದ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದರೆ, ಕುಮಾರ್ ಅವರ ಮನೆಯನ್ನು ಅನುಮತಿಯಿಲ್ಲದೆ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಕ್ರಮ ಕೈಗೊಳ್ಳುವಂತೆ ಆರೋಪಿಗಳ ಕುಟುಂಬಸ್ಥರು ಅಧಿಕಾರಿಗಳನ್ನು ವಿನಂತಿಸಿದರೂ ಅವರ ಮನೆಗಳನ್ನು ಕೆಡವಲಾಗಿದೆ ಎಂದು ಸ್ಥಳೀಯರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಅಪರಾಧದ ಆರೋಪಿಗಳ ಆಸ್ತಿಯನ್ನು ನಾಶಮಾಡಲು ಯಾವುದೇ ಕಾನೂನು ಅವಕಾಶಗಳಿಲ್ಲದಿದ್ದರೂ, ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸುವ ಕ್ರಮವನ್ನು ಹೆಚ್ಚು ಮಾಡುತ್ತಿವೆ. ಈ ಹೆಚ್ಚಿನ ಪ್ರಕರಣಗಳು ಮುಸ್ಲಿಮರ ಒಡೆತನದ ಆಸ್ತಿಗಳನ್ನು ಗುರಿಯಾಗಿಸಿಕೊಂಡಿವೆ.

”ವೈದ್ಯರ ತಂಡವು ಸಂತ್ರಸ್ತೆಯ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಭೋಪಾಲ್ ಅಥವಾ ದೆಹಲಿಗೆ ಸ್ಥಳಾಂತರಿಸಬಹುದು” ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಗುಪ್ತಾ ಹೇಳಿದರು.

ಏನಿದು ಘಟನೆ:

ಗುರುವಾರ ಸಂಜೆ ಬಾಲಕಿ ನಾಪತ್ತೆಯಾಗಿದ್ದು, ತಡರಾತ್ರಿಯಾದರೂ ಮನೆಗೆ ಬಾರದೆ ಇದ್ದಾಗ ಆಕೆಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿ ಹುಡುಕಾಟ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ತನ್ನ ಮನೆಯಿಂದ ಒಂದು ಕಿಲೋಮೀಟರ್ ದೂರದ ಕಾಡಿನಲ್ಲಿ ಆಕೆ ಪತ್ತೆಯಾಗಿದ್ದಳು.

ಈ ಕಾಡು ಮೈಹಾರ್ ಪಟ್ಟಣದಲ್ಲಿರುವ ಶಾರದಾ ದೇವಿಯ ದೇವಸ್ಥಾನಕ್ಕೆ ಸಮೀಪದಲ್ಲಿದೆ, ಇಲ್ಲಿಗೆ ದೇಶದಾದ್ಯಂತ ಯಾತ್ರಾರ್ಥಿಗಳ ಬರುತ್ತಾರೆ.

”ಬಾಲಕಿ ಪತ್ತೆಯಾಗಿರುವ ಬಗ್ಗೆ ಇಂದು ಬೆಳಗ್ಗೆ ನಮಗೆ ಮಾಹಿತಿ ಲಭಿಸಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ನಮ್ಮ ತನಿಖೆಯಿಂದ ದೃಢಪಟ್ಟಿದೆ. ಇಬ್ಬರು ಶಂಕಿತರನ್ನು ಬಂಧಿಸಿ ಪೊಲೀಸರ ವಶದಲ್ಲಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಬಾಲಕಿಯನ್ನು ರೇವಾ ವೈದ್ಯಕೀಯ ಕಾಲೇಜಿಗೆ ಶಿಫಾರಸು ಮಾಡಲಾಗಿದೆ” ಎಂದು ಮೈಹಾರ್ ಉಪವಿಭಾಗದ ಪೊಲೀಸ್ ಅಧಿಕಾರಿ ಲೋಕೇಶ್ ದಬರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...