Homeಮುಖಪುಟಮಧ್ಯಪ್ರದೇಶ: ಇತರ ವಿದ್ಯಾರ್ಥಿಗಳ ಮುಂದೆಯೆ ಬಾಲಕನಿಗೆ ಮನಸೋ ಇಚ್ಛೆ ಥಳಿಸಿದ ಶಿಕ್ಷಕ

ಮಧ್ಯಪ್ರದೇಶ: ಇತರ ವಿದ್ಯಾರ್ಥಿಗಳ ಮುಂದೆಯೆ ಬಾಲಕನಿಗೆ ಮನಸೋ ಇಚ್ಛೆ ಥಳಿಸಿದ ಶಿಕ್ಷಕ

- Advertisement -
- Advertisement -

ಇತರ ವಿದ್ಯಾರ್ಥಿಗಳು ಸುತ್ತಲೂ ನಿಂತು ವೀಕ್ಷಿಸುತ್ತಿರುವ ನಡುವೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಹಿಡಿದು ಮನಸೋಇಚ್ಛೆ ಥಳಿಸಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೊ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಆರೋಪಿ ಶಿಕ್ಷಕನನ್ನು ಸಂದೀಪ್ ಭಾರ್ತಿ ಎಂದು ಗುರುತಿಸಲಾಗಿದ್ದು, ಅವನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಯು 8 ನೇ ತರಗತಿಯಲ್ಲಿ ಕಲಿಯುತ್ತಿದ್ದು ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೇವಾದ ಖಜುಹಾ ಕಾಲಾದಲ್ಲಿನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಸಂಪರ್ಕಿಸಿದ ನಂತರ ಶಿಕ್ಷಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರೇವಾ ಎಸ್ಪಿ ನವನೀತ್ ಭಾಸಿನ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

ಶಿಕ್ಷಕನೂ ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ ಕಪಾಳಮೋಕ್ಷ ಮಾಡುವುದು ವೀಡಿಯೊದಲ್ಲಿ ದಾಖಲಾಗಿದೆ. ಅಲ್ಲದೆ ಹತ್ತಿರದಲ್ಲಿ ಇತರ ವಿದ್ಯಾರ್ಥಿಗಳು ಅದನ್ನು ಗಮನಿಸುತ್ತಿದ್ದರೂ ಶಿಕ್ಷಕನು ತನ್ನ ಕೃತ್ಯವನ್ನು ಮುಂದುವರೆಸುತ್ತಾನೆ. ಈ ವೇಳೆ ವಿದ್ಯಾರ್ಥಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಕೂಡಾ ಪ್ರಯತ್ನಿಸುತ್ತಾರೆ.

ಒಂದು ಹಂತದಲ್ಲಿ ಶಿಕ್ಷಕನು ಥಳಿಸುವುದನ್ನು ನಿಲ್ಲಿಸಿದ ನಂತರ ವಿದ್ಯಾರ್ಥಿಯು ತನ್ನ ಕೆಸರು ಮೆತ್ತಿದ ಬಟ್ಟೆಗಳೊಂದಿಗೆ ಎದ್ದು ನಿಂತರ, ಶಿಕ್ಷಕನ ಮುಖಾಮುಖಿಯಾಗುತ್ತಾರೆ. ಇಲ್ಲಿ ಕೆಲವೆ ಕ್ಷಣದ ಮಾತಿನ ನಂತರ ಶಿಕ್ಷಕ ಮತ್ತೊಮ್ಮೆ ಬಾಲಕನತ್ತ ನುಗ್ಗಿ, ಅವರ ಕುತ್ತಿಗೆಯಿಂದ ಹಿಡಿದು ಆಸುಪಾಸಿನಲ್ಲಿ ಇರುವ ವಿದ್ಯಾರ್ಥಿಗಳ ಗುಂಪಿನೆಡೆಗೆ ತಳ್ಳುತ್ತಾನೆ.

ಇದರ ನಂತರ ಶಿಕ್ಷಕನು ಮತ್ತೆ ವಿದ್ಯಾರ್ಥಿಯ ಕಡೆಗೆ ಹೋಗುತ್ತಿರುವಾಗ, ಬೇರೊಬ್ಬ ಹುಡುಗನು ಶಿಕ್ಷಕನ ಗಮನವನ್ನು ಕ್ಯಾಮೆರಾದ ಕಡೆಗೆ ಸೆಳೆಯುತ್ತಾರೆ. ಹೀಗಾಗಿ ವಿಡಿಯೊ ಕೂಡಾ ಕೊನೆಗೊಳ್ಳುತ್ತದೆ.

“ಶಿಕ್ಷಕ ವಿದ್ಯಾರ್ಥಿಗೆ ಏಕೆ ಹೊಡೆದಿದ್ದಾರೆ ಎಂಬುದನ್ನು ನಿರ್ಧರಿಸಲು ಹೆಚ್ಚಿನ ತನಿಖೆಯ ಅಗತ್ಯವಿದೆ. ತನಿಖೆಯ ಫಲಿತಾಂಶಗಳ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಭಾಸಿನ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ

ಉತ್ತರ ಪ್ರದೇಶದ 10 ನೇ ತರಗತಿಯ ವಿದ್ಯಾರ್ಥಿಯೊಬ್ಬರು ಒಂದು ಪದವನ್ನು ತಪ್ಪಾಗಿ ಬರೆದಿದ್ದಕ್ಕಾಗಿ ತನ್ನ ಶಿಕ್ಷಕರಿಂದ ನಿರ್ದಯವಾಗಿ ಥಳಿಸಲ್ಪಟ್ಟು, ಕೊಲಗೀಡಾಗಿದ್ದರು. ಈ ತಿಂಗಳ ಆರಂಭದಲ್ಲಿ ಮಧ್ಯಪ್ರದೇಶದಲ್ಲಿ ಟ್ಯೂಷನ್ ಶಿಕ್ಷಕನೊಬ್ಬ ಹೋಂ ವರ್ಕ್‌ ಮಾಡದ ಎಂಟು ವರ್ಷದ ವಿದ್ಯಾರ್ಥಿಗೆ ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾನೆ ಎಂದು ಆರೋಪಿಸಲಾಗಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...