Homeಮುಖಪುಟಮಧ್ಯಪ್ರದೇಶ: ಇತರ ವಿದ್ಯಾರ್ಥಿಗಳ ಮುಂದೆಯೆ ಬಾಲಕನಿಗೆ ಮನಸೋ ಇಚ್ಛೆ ಥಳಿಸಿದ ಶಿಕ್ಷಕ

ಮಧ್ಯಪ್ರದೇಶ: ಇತರ ವಿದ್ಯಾರ್ಥಿಗಳ ಮುಂದೆಯೆ ಬಾಲಕನಿಗೆ ಮನಸೋ ಇಚ್ಛೆ ಥಳಿಸಿದ ಶಿಕ್ಷಕ

- Advertisement -
- Advertisement -

ಇತರ ವಿದ್ಯಾರ್ಥಿಗಳು ಸುತ್ತಲೂ ನಿಂತು ವೀಕ್ಷಿಸುತ್ತಿರುವ ನಡುವೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಹಿಡಿದು ಮನಸೋಇಚ್ಛೆ ಥಳಿಸಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೊ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಆರೋಪಿ ಶಿಕ್ಷಕನನ್ನು ಸಂದೀಪ್ ಭಾರ್ತಿ ಎಂದು ಗುರುತಿಸಲಾಗಿದ್ದು, ಅವನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಯು 8 ನೇ ತರಗತಿಯಲ್ಲಿ ಕಲಿಯುತ್ತಿದ್ದು ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೇವಾದ ಖಜುಹಾ ಕಾಲಾದಲ್ಲಿನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಸಂಪರ್ಕಿಸಿದ ನಂತರ ಶಿಕ್ಷಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರೇವಾ ಎಸ್ಪಿ ನವನೀತ್ ಭಾಸಿನ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

ಶಿಕ್ಷಕನೂ ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ ಕಪಾಳಮೋಕ್ಷ ಮಾಡುವುದು ವೀಡಿಯೊದಲ್ಲಿ ದಾಖಲಾಗಿದೆ. ಅಲ್ಲದೆ ಹತ್ತಿರದಲ್ಲಿ ಇತರ ವಿದ್ಯಾರ್ಥಿಗಳು ಅದನ್ನು ಗಮನಿಸುತ್ತಿದ್ದರೂ ಶಿಕ್ಷಕನು ತನ್ನ ಕೃತ್ಯವನ್ನು ಮುಂದುವರೆಸುತ್ತಾನೆ. ಈ ವೇಳೆ ವಿದ್ಯಾರ್ಥಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಕೂಡಾ ಪ್ರಯತ್ನಿಸುತ್ತಾರೆ.

ಒಂದು ಹಂತದಲ್ಲಿ ಶಿಕ್ಷಕನು ಥಳಿಸುವುದನ್ನು ನಿಲ್ಲಿಸಿದ ನಂತರ ವಿದ್ಯಾರ್ಥಿಯು ತನ್ನ ಕೆಸರು ಮೆತ್ತಿದ ಬಟ್ಟೆಗಳೊಂದಿಗೆ ಎದ್ದು ನಿಂತರ, ಶಿಕ್ಷಕನ ಮುಖಾಮುಖಿಯಾಗುತ್ತಾರೆ. ಇಲ್ಲಿ ಕೆಲವೆ ಕ್ಷಣದ ಮಾತಿನ ನಂತರ ಶಿಕ್ಷಕ ಮತ್ತೊಮ್ಮೆ ಬಾಲಕನತ್ತ ನುಗ್ಗಿ, ಅವರ ಕುತ್ತಿಗೆಯಿಂದ ಹಿಡಿದು ಆಸುಪಾಸಿನಲ್ಲಿ ಇರುವ ವಿದ್ಯಾರ್ಥಿಗಳ ಗುಂಪಿನೆಡೆಗೆ ತಳ್ಳುತ್ತಾನೆ.

ಇದರ ನಂತರ ಶಿಕ್ಷಕನು ಮತ್ತೆ ವಿದ್ಯಾರ್ಥಿಯ ಕಡೆಗೆ ಹೋಗುತ್ತಿರುವಾಗ, ಬೇರೊಬ್ಬ ಹುಡುಗನು ಶಿಕ್ಷಕನ ಗಮನವನ್ನು ಕ್ಯಾಮೆರಾದ ಕಡೆಗೆ ಸೆಳೆಯುತ್ತಾರೆ. ಹೀಗಾಗಿ ವಿಡಿಯೊ ಕೂಡಾ ಕೊನೆಗೊಳ್ಳುತ್ತದೆ.

“ಶಿಕ್ಷಕ ವಿದ್ಯಾರ್ಥಿಗೆ ಏಕೆ ಹೊಡೆದಿದ್ದಾರೆ ಎಂಬುದನ್ನು ನಿರ್ಧರಿಸಲು ಹೆಚ್ಚಿನ ತನಿಖೆಯ ಅಗತ್ಯವಿದೆ. ತನಿಖೆಯ ಫಲಿತಾಂಶಗಳ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಭಾಸಿನ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ

ಉತ್ತರ ಪ್ರದೇಶದ 10 ನೇ ತರಗತಿಯ ವಿದ್ಯಾರ್ಥಿಯೊಬ್ಬರು ಒಂದು ಪದವನ್ನು ತಪ್ಪಾಗಿ ಬರೆದಿದ್ದಕ್ಕಾಗಿ ತನ್ನ ಶಿಕ್ಷಕರಿಂದ ನಿರ್ದಯವಾಗಿ ಥಳಿಸಲ್ಪಟ್ಟು, ಕೊಲಗೀಡಾಗಿದ್ದರು. ಈ ತಿಂಗಳ ಆರಂಭದಲ್ಲಿ ಮಧ್ಯಪ್ರದೇಶದಲ್ಲಿ ಟ್ಯೂಷನ್ ಶಿಕ್ಷಕನೊಬ್ಬ ಹೋಂ ವರ್ಕ್‌ ಮಾಡದ ಎಂಟು ವರ್ಷದ ವಿದ್ಯಾರ್ಥಿಗೆ ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾನೆ ಎಂದು ಆರೋಪಿಸಲಾಗಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...