Homeಮುಖಪುಟಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ 'ಗೋವು ಸಚಿವ ಸಂಪುಟ' ರಚಿಸಿದ ಮುಖ್ಯಮಂತ್ರಿ!

ಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ ‘ಗೋವು ಸಚಿವ ಸಂಪುಟ’ ರಚಿಸಿದ ಮುಖ್ಯಮಂತ್ರಿ!

ಅಗರ್ ಮಾಲ್ವಾದಲ್ಲಿನ ಕಾಮಧೇನು ಗೋವು ಅಭರಣ್ಯವು ಭಾರತದ ಮೊದಲ ಹಸು ಅಭಯಾರಣ್ಯವಾಗಿದ್ದು, ಇದನ್ನು ಚೌಹಾಣ್ ಸರ್ಕಾರ 2017 ರಲ್ಲಿ ಸ್ಥಾಪಿಸಿತ್ತು

- Advertisement -
- Advertisement -

ಹಸುಗಳ ರಕ್ಷಣೆ ಮತ್ತು ಕಲ್ಯಾಣಕ್ಕಾಗಿ ಮಧ್ಯಪ್ರದೇಶ ಸರ್ಕಾರ “ಕೌ ಕ್ಯಾಬಿನೆಟ್” ರಚಿಸಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಈ ಸಮಿತಿಯ ನಿಖರವಾದ ಕರ್ತವ್ಯಗಳ ಬಗ್ಗೆ ಇನ್ನೂ ಯಾವುದೇ ವಿವರಗಳನ್ನು ನೀಡಿಲ್ಲ.

ಪಶುಸಂಗೋಪನೆ, ರೈತರು ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು ಸಂಪುಟದ ಭಾಗವಾಗಲಿವೆ ಎಂದು ಚೌಹಾಣ್ ಹೇಳಿದ್ದಾರೆ.

“ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆ ಮತ್ತು ಉತ್ತೇಜನಕ್ಕಾಗಿ” ಕ್ಯಾಬಿನೆಟ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಚೌಹಾಣ್ ಬರೆದಿದ್ದಾರೆ. “ಪಶುಸಂಗೋಪನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಇಲಾಖೆಯು ಇದರ ಭಾಗವಾಗಲಿವೆ” ಎಂದಿದ್ದಾರೆ.

“ಈ ಸಂಪುಟದ ಮೊದಲ ಸಭೆ ನವೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಗೋಪಾಷ್ಟಮಿ ದಿನ ಅಗರ್ ಮಾಲ್ವಾದ ಗೋವು ಅಭಯಾರಣ್ಯದಲ್ಲಿ ನಡೆಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ಅಗರ್ ಮಾಲ್ವಾದಲ್ಲಿನ ಕಾಮಧೇನು ಗೋವು ಅಭರಣ್ಯವು ಭಾರತದ ಮೊದಲ ಹಸು ಅಭಯಾರಣ್ಯವಾಗಿದ್ದು, ಇದನ್ನು ಚೌಹಾಣ್ ಸರ್ಕಾರ 2017 ರಲ್ಲಿ ಸ್ಥಾಪಿಸಿತು. ಇದನ್ನು ಮಧ್ಯಪ್ರದೇಶ ಗೋವು ಸಂವರ್ಧನ ಮಂಡಳಿಯು 32 ಕೋಟಿ ರೂಪಾಯಿಯಲ್ಲಿ ಅಭಿವೃದ್ಧಿ ಪಡಿಸಿತ್ತು.

472 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಅಭಯಾರಣ್ಯವನ್ನು ನಂತರ ಆರ್ಥಿಕ ಬಿಕ್ಕಟ್ಟಿನಿಂದ ಖಾಸಗೀಕರಣಗೊಳಿಸಲಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮಧ್ಯಪ್ರದೇಶದ ಬಿಜೆಪಿ ವಕ್ತಾರ ದೀಪಕ್ ವಿಜಯವರ್ಗಿಯಾ “ಗೋವು ಕ್ಯಾಬಿನೆಟ್ ರಚಿಸುವ ನಿರ್ಧಾರವು ಹಸುಗಳ ಸಾಮರ್ಥ್ಯ ಮತ್ತು ಅದರ ಮೂಲಕ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಉದ್ಯೋಗದ ಪರ್ಯಾಯ ಮೂಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದ್ದಾರೆ.

“ಉದ್ಯೋಗವನ್ನು ಒದಗಿಸುವ ಏಕೈಕ ಪರಿಹಾರ ಕೈಗಾರಿಕೀಕರಣ ಒಂದೇ ಅಲ್ಲ” ಎಂದು ವಿಜಯವರ್ಗಿಯಾ ಹೇಳಿದರು. “ಹಸುಗಳನ್ನು ಸುತ್ತುವರೆದಿರುವ ಆರ್ಥಿಕತೆಯು ಸುಸ್ಥಿರವಾಗಿದ್ದು, ಇದು 2,000 ವರ್ಷಗಳಿಂದಲೂ ನಡೆಯುತ್ತಿದೆ. ಈ ಕ್ಯಾಬಿನೆಟ್ ಮೂಲಕ, ಗ್ರಾಮೀಣ ವ್ಯವಸ್ಥೆಯಲ್ಲಿ ಆದಾಯವನ್ನು ಹೆಚ್ಚಿಸಲು ಗೋವು-ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಸರ್ಕಾರವು ಸುಸ್ಥಿರ ಮೂಲಸೌಕರ್ಯಗಳನ್ನು ಒದಗಿಸುತ್ತದೆ” ಎಂದಿದ್ದಾರೆ.

ಇನ್ನು ಈ ಕುರಿತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಕೂಡ ಪ್ರತಿಕ್ರಿಯೆ ನೀಡಿದ್ದು, “ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು 15 ತಿಂಗಳು ಗೊವುಗಳಿಗೆ ಆಶ್ರಯ ತಾಣ ನಿರ್ಮಿಸುವ ಬಗ್ಗೆ ಮಾತನಾಡಿದವು. ಆದರೆ  ಅವರಿಂದ 15 ಗೋವು ಆಶ್ರಯ ತಾಣಗಳನ್ನು ನಿರ್ಮಿಸಲಾಗಲಿಲ್ಲ” ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...