Homeಮುಖಪುಟಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ 'ಗೋವು ಸಚಿವ ಸಂಪುಟ' ರಚಿಸಿದ ಮುಖ್ಯಮಂತ್ರಿ!

ಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ ‘ಗೋವು ಸಚಿವ ಸಂಪುಟ’ ರಚಿಸಿದ ಮುಖ್ಯಮಂತ್ರಿ!

ಅಗರ್ ಮಾಲ್ವಾದಲ್ಲಿನ ಕಾಮಧೇನು ಗೋವು ಅಭರಣ್ಯವು ಭಾರತದ ಮೊದಲ ಹಸು ಅಭಯಾರಣ್ಯವಾಗಿದ್ದು, ಇದನ್ನು ಚೌಹಾಣ್ ಸರ್ಕಾರ 2017 ರಲ್ಲಿ ಸ್ಥಾಪಿಸಿತ್ತು

- Advertisement -
- Advertisement -

ಹಸುಗಳ ರಕ್ಷಣೆ ಮತ್ತು ಕಲ್ಯಾಣಕ್ಕಾಗಿ ಮಧ್ಯಪ್ರದೇಶ ಸರ್ಕಾರ “ಕೌ ಕ್ಯಾಬಿನೆಟ್” ರಚಿಸಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಈ ಸಮಿತಿಯ ನಿಖರವಾದ ಕರ್ತವ್ಯಗಳ ಬಗ್ಗೆ ಇನ್ನೂ ಯಾವುದೇ ವಿವರಗಳನ್ನು ನೀಡಿಲ್ಲ.

ಪಶುಸಂಗೋಪನೆ, ರೈತರು ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು ಸಂಪುಟದ ಭಾಗವಾಗಲಿವೆ ಎಂದು ಚೌಹಾಣ್ ಹೇಳಿದ್ದಾರೆ.

“ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆ ಮತ್ತು ಉತ್ತೇಜನಕ್ಕಾಗಿ” ಕ್ಯಾಬಿನೆಟ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಚೌಹಾಣ್ ಬರೆದಿದ್ದಾರೆ. “ಪಶುಸಂಗೋಪನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಇಲಾಖೆಯು ಇದರ ಭಾಗವಾಗಲಿವೆ” ಎಂದಿದ್ದಾರೆ.

“ಈ ಸಂಪುಟದ ಮೊದಲ ಸಭೆ ನವೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಗೋಪಾಷ್ಟಮಿ ದಿನ ಅಗರ್ ಮಾಲ್ವಾದ ಗೋವು ಅಭಯಾರಣ್ಯದಲ್ಲಿ ನಡೆಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ಅಗರ್ ಮಾಲ್ವಾದಲ್ಲಿನ ಕಾಮಧೇನು ಗೋವು ಅಭರಣ್ಯವು ಭಾರತದ ಮೊದಲ ಹಸು ಅಭಯಾರಣ್ಯವಾಗಿದ್ದು, ಇದನ್ನು ಚೌಹಾಣ್ ಸರ್ಕಾರ 2017 ರಲ್ಲಿ ಸ್ಥಾಪಿಸಿತು. ಇದನ್ನು ಮಧ್ಯಪ್ರದೇಶ ಗೋವು ಸಂವರ್ಧನ ಮಂಡಳಿಯು 32 ಕೋಟಿ ರೂಪಾಯಿಯಲ್ಲಿ ಅಭಿವೃದ್ಧಿ ಪಡಿಸಿತ್ತು.

472 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಅಭಯಾರಣ್ಯವನ್ನು ನಂತರ ಆರ್ಥಿಕ ಬಿಕ್ಕಟ್ಟಿನಿಂದ ಖಾಸಗೀಕರಣಗೊಳಿಸಲಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮಧ್ಯಪ್ರದೇಶದ ಬಿಜೆಪಿ ವಕ್ತಾರ ದೀಪಕ್ ವಿಜಯವರ್ಗಿಯಾ “ಗೋವು ಕ್ಯಾಬಿನೆಟ್ ರಚಿಸುವ ನಿರ್ಧಾರವು ಹಸುಗಳ ಸಾಮರ್ಥ್ಯ ಮತ್ತು ಅದರ ಮೂಲಕ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಉದ್ಯೋಗದ ಪರ್ಯಾಯ ಮೂಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದ್ದಾರೆ.

“ಉದ್ಯೋಗವನ್ನು ಒದಗಿಸುವ ಏಕೈಕ ಪರಿಹಾರ ಕೈಗಾರಿಕೀಕರಣ ಒಂದೇ ಅಲ್ಲ” ಎಂದು ವಿಜಯವರ್ಗಿಯಾ ಹೇಳಿದರು. “ಹಸುಗಳನ್ನು ಸುತ್ತುವರೆದಿರುವ ಆರ್ಥಿಕತೆಯು ಸುಸ್ಥಿರವಾಗಿದ್ದು, ಇದು 2,000 ವರ್ಷಗಳಿಂದಲೂ ನಡೆಯುತ್ತಿದೆ. ಈ ಕ್ಯಾಬಿನೆಟ್ ಮೂಲಕ, ಗ್ರಾಮೀಣ ವ್ಯವಸ್ಥೆಯಲ್ಲಿ ಆದಾಯವನ್ನು ಹೆಚ್ಚಿಸಲು ಗೋವು-ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಸರ್ಕಾರವು ಸುಸ್ಥಿರ ಮೂಲಸೌಕರ್ಯಗಳನ್ನು ಒದಗಿಸುತ್ತದೆ” ಎಂದಿದ್ದಾರೆ.

ಇನ್ನು ಈ ಕುರಿತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಕೂಡ ಪ್ರತಿಕ್ರಿಯೆ ನೀಡಿದ್ದು, “ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು 15 ತಿಂಗಳು ಗೊವುಗಳಿಗೆ ಆಶ್ರಯ ತಾಣ ನಿರ್ಮಿಸುವ ಬಗ್ಗೆ ಮಾತನಾಡಿದವು. ಆದರೆ  ಅವರಿಂದ 15 ಗೋವು ಆಶ್ರಯ ತಾಣಗಳನ್ನು ನಿರ್ಮಿಸಲಾಗಲಿಲ್ಲ” ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...