Homeಮುಖಪುಟಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ 'ಗೋವು ಸಚಿವ ಸಂಪುಟ' ರಚಿಸಿದ ಮುಖ್ಯಮಂತ್ರಿ!

ಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ ‘ಗೋವು ಸಚಿವ ಸಂಪುಟ’ ರಚಿಸಿದ ಮುಖ್ಯಮಂತ್ರಿ!

ಅಗರ್ ಮಾಲ್ವಾದಲ್ಲಿನ ಕಾಮಧೇನು ಗೋವು ಅಭರಣ್ಯವು ಭಾರತದ ಮೊದಲ ಹಸು ಅಭಯಾರಣ್ಯವಾಗಿದ್ದು, ಇದನ್ನು ಚೌಹಾಣ್ ಸರ್ಕಾರ 2017 ರಲ್ಲಿ ಸ್ಥಾಪಿಸಿತ್ತು

- Advertisement -
- Advertisement -

ಹಸುಗಳ ರಕ್ಷಣೆ ಮತ್ತು ಕಲ್ಯಾಣಕ್ಕಾಗಿ ಮಧ್ಯಪ್ರದೇಶ ಸರ್ಕಾರ “ಕೌ ಕ್ಯಾಬಿನೆಟ್” ರಚಿಸಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಈ ಸಮಿತಿಯ ನಿಖರವಾದ ಕರ್ತವ್ಯಗಳ ಬಗ್ಗೆ ಇನ್ನೂ ಯಾವುದೇ ವಿವರಗಳನ್ನು ನೀಡಿಲ್ಲ.

ಪಶುಸಂಗೋಪನೆ, ರೈತರು ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು ಸಂಪುಟದ ಭಾಗವಾಗಲಿವೆ ಎಂದು ಚೌಹಾಣ್ ಹೇಳಿದ್ದಾರೆ.

“ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆ ಮತ್ತು ಉತ್ತೇಜನಕ್ಕಾಗಿ” ಕ್ಯಾಬಿನೆಟ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಚೌಹಾಣ್ ಬರೆದಿದ್ದಾರೆ. “ಪಶುಸಂಗೋಪನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಇಲಾಖೆಯು ಇದರ ಭಾಗವಾಗಲಿವೆ” ಎಂದಿದ್ದಾರೆ.

“ಈ ಸಂಪುಟದ ಮೊದಲ ಸಭೆ ನವೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಗೋಪಾಷ್ಟಮಿ ದಿನ ಅಗರ್ ಮಾಲ್ವಾದ ಗೋವು ಅಭಯಾರಣ್ಯದಲ್ಲಿ ನಡೆಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ಅಗರ್ ಮಾಲ್ವಾದಲ್ಲಿನ ಕಾಮಧೇನು ಗೋವು ಅಭರಣ್ಯವು ಭಾರತದ ಮೊದಲ ಹಸು ಅಭಯಾರಣ್ಯವಾಗಿದ್ದು, ಇದನ್ನು ಚೌಹಾಣ್ ಸರ್ಕಾರ 2017 ರಲ್ಲಿ ಸ್ಥಾಪಿಸಿತು. ಇದನ್ನು ಮಧ್ಯಪ್ರದೇಶ ಗೋವು ಸಂವರ್ಧನ ಮಂಡಳಿಯು 32 ಕೋಟಿ ರೂಪಾಯಿಯಲ್ಲಿ ಅಭಿವೃದ್ಧಿ ಪಡಿಸಿತ್ತು.

472 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಅಭಯಾರಣ್ಯವನ್ನು ನಂತರ ಆರ್ಥಿಕ ಬಿಕ್ಕಟ್ಟಿನಿಂದ ಖಾಸಗೀಕರಣಗೊಳಿಸಲಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮಧ್ಯಪ್ರದೇಶದ ಬಿಜೆಪಿ ವಕ್ತಾರ ದೀಪಕ್ ವಿಜಯವರ್ಗಿಯಾ “ಗೋವು ಕ್ಯಾಬಿನೆಟ್ ರಚಿಸುವ ನಿರ್ಧಾರವು ಹಸುಗಳ ಸಾಮರ್ಥ್ಯ ಮತ್ತು ಅದರ ಮೂಲಕ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಉದ್ಯೋಗದ ಪರ್ಯಾಯ ಮೂಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದ್ದಾರೆ.

“ಉದ್ಯೋಗವನ್ನು ಒದಗಿಸುವ ಏಕೈಕ ಪರಿಹಾರ ಕೈಗಾರಿಕೀಕರಣ ಒಂದೇ ಅಲ್ಲ” ಎಂದು ವಿಜಯವರ್ಗಿಯಾ ಹೇಳಿದರು. “ಹಸುಗಳನ್ನು ಸುತ್ತುವರೆದಿರುವ ಆರ್ಥಿಕತೆಯು ಸುಸ್ಥಿರವಾಗಿದ್ದು, ಇದು 2,000 ವರ್ಷಗಳಿಂದಲೂ ನಡೆಯುತ್ತಿದೆ. ಈ ಕ್ಯಾಬಿನೆಟ್ ಮೂಲಕ, ಗ್ರಾಮೀಣ ವ್ಯವಸ್ಥೆಯಲ್ಲಿ ಆದಾಯವನ್ನು ಹೆಚ್ಚಿಸಲು ಗೋವು-ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಸರ್ಕಾರವು ಸುಸ್ಥಿರ ಮೂಲಸೌಕರ್ಯಗಳನ್ನು ಒದಗಿಸುತ್ತದೆ” ಎಂದಿದ್ದಾರೆ.

ಇನ್ನು ಈ ಕುರಿತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಕೂಡ ಪ್ರತಿಕ್ರಿಯೆ ನೀಡಿದ್ದು, “ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು 15 ತಿಂಗಳು ಗೊವುಗಳಿಗೆ ಆಶ್ರಯ ತಾಣ ನಿರ್ಮಿಸುವ ಬಗ್ಗೆ ಮಾತನಾಡಿದವು. ಆದರೆ  ಅವರಿಂದ 15 ಗೋವು ಆಶ್ರಯ ತಾಣಗಳನ್ನು ನಿರ್ಮಿಸಲಾಗಲಿಲ್ಲ” ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...