Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ವಿವಸ್ತ್ರಗೊಳಿಸಿ, ತಲೆಕೆಳಗೆ ನೇತುಹಾಕಿ ಹಲ್ಲೆ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ವಿವಸ್ತ್ರಗೊಳಿಸಿ, ತಲೆಕೆಳಗೆ ನೇತುಹಾಕಿ ಹಲ್ಲೆ

- Advertisement -
- Advertisement -

ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದ ಘಟನೆ ಮಾಸುವ ಮುನ್ನವೆ, ಮತ್ತೊಬ್ಬ ಆದಿವಾಸಿ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿದೆ ಬಂದಿದೆ.

ಟೀ ಅಂಗಡಿ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು, ಆತನನ್ನು ತಲೆ ಕೆಳಗಾಗಿ ನೇತುಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಈ ವಾರ ಜಿಲ್ಲೆಯಲ್ಲಿ ಇಂತಹ ಎರಡನೇ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ ಟೀ ಅಂಗಡಿ ನಡೆಸುತ್ತಿದ್ದು, ದಾಳಿಕೋರರು ನನಗೆ ಥಳಿಸುವಾಗ ‘ಕತ್ತರಿಸು’ ಎಂದು ಹೇಳುತ್ತಿದ್ದರು’ ಎಂದು ಹೇಳಿದ್ದಾರೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಂತ್ರಸ್ತನು ಛಾವಣಿಯಿಂದ ತಲೆಕೆಳಗಾಗಿ ನೇತಾಡುತ್ತಿರುವುದನ್ನು ತೋರಿಸುತ್ತದೆ. ಆತನಿಗೆ ಬೆಲ್ಟ್ ಮತ್ತು ಕೋಲುಗಳಿಂದ ನಿರ್ದಯವಾಗಿ ಥಳಿಸಲಾಗಿದೆ. ‘ಅವರು, ನನ್ನ ಬಟ್ಟೆಗಳನ್ನು ಕಿತ್ತೆಸೆದರು, ಕಟ್ಟಿಹಾಕಿದ ನಂತರ ದೊಣ್ಣೆ, ಬೆಲ್ಟ್ ಮತ್ತು ಚಪ್ಪಲಿಗಳಿಂದ ಥಳಿಸಿದರು. ನನ್ನನ್ನು ಏಕೆ ಹೊಡೆಯಲಾಗಿದೆ ಎಂದು ನನಗೆ ತಿಳಿದಿಲ್ಲ. ಆದರೆ, ಅವರು ನನ್ನ ತಂದೆಯೊಂದಿಗೆ ನಾನು ನಡೆಸುತ್ತಿರುವ ಟೀ ಅಂಗಡಿಗೆ ಹಣಕ್ಕಾಗಿ ಬೇಡಿಕೆಯಿಟ್ಟರು’ ಎಂದು ಸಂತ್ರಸ್ತ ಮಾಧ್ಯಮಗಳಿಗೆ ತಳಿಸಿದ್ದಾರೆ.

ಈ ಘಟನೆ 2023ರ ನವೆಂಬರ್‌ನಲ್ಲಿ ನಡೆದಿದ್ದು, ದಾಳಿಕೋರರು ತಮ್ಮ ಕುಟುಂಬಕ್ಕೆ ಹಾನಿ ಮಾಡುತ್ತಾರೆ ಎಂಬ ಭಯದಿಂದ ಅವರು ದೂರು ದಾಖಲಿಸಲಿಲ್ಲ. ‘ಅವರ ಬಳಿ ಬಂದೂಕು ಇತ್ತು, ಅವರಲ್ಲಿ ಒಬ್ಬರು ಕೊಲೆ ಮಾಡಿದ್ದಾರೆ ಎಂದು ನಾನು ಕೇಳಿದ್ದೆ. ಅದಕ್ಕಾಗಿಯೇ ನಾನು ಈವರೆಗೆ ಯಾರಿಗೂ ಹೇಳಲಿಲ್ಲ. ವೀಡಿಯೊ ವೈರಲ್ ಆದಾಗ, ಕೆಲವು ತಿಂಗಳ ಹಿಂದೆ ನನಗೆ ಇದು ಸಂಭವಿಸಿದೆ ಎಂದು ನಾನು ನನ್ನ ಅಣ್ಣನಿಗೆ ತಿಳಿಸಿದೆ’ ಎಂದು ಹೇಳಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ದುಃಖಕರ ಘಟನೆಯು ಇತ್ತೀಚೆಗೆ ಬೇತುಲ್‌ನಲ್ಲಿ ನಡೆದ ಮತ್ತೊಂದು ಘಟನೆಯನ್ನು ಅನುಸರಿಸುತ್ತದೆ, ಅಲ್ಲಿ ಇನ್ನೊಬ್ಬ ಬುಡಕಟ್ಟು ವ್ಯಕ್ತಿಯನ್ನು ಬರ್ಬರವಾಗಿ ಥಳಿಸಿದ್ದ ವಿಡಿಯೋ ವೈರಲ್ ಆಗಿತ್ತು.

ಸೋಮವಾರದಂದು ಬೆತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಬಜರಂಗದಳದ ಕಾರ್ಯಕರ್ತರು ಕೋಳಿಯಂತೆ ಕೂರುವಂತೆ ಒತ್ತಾಯಿಸಿದ್ದರು. ಬಜರಂಗದಳದ ಸದಸ್ಯ ಚಂಚಲ್ ರಜಪೂತ್ ಎಂಬಾತನ ನೇತೃತ್ವದ ಗುಂಪು ದೈಹಿಕ ಹಿಂಸೆ ಮತ್ತು ಜಾತಿ ನಿಂದನೆಗೆ ಮಾಡಿತ್ತು.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದರು, “ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಮತ್ತು ಹಲ್ಲೆ ನಡೆಸಿದರು. ಮೌಖಿಕವಾಗಿ ಮತ್ತು ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದರು ಹೇಳಿದ್ದರು.

ಅಧಿಕೃತ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಗಂಭೀರ ಅಪರಾಧಗಳಲ್ಲಿ ಇಳಿಕೆಯನ್ನು ಸೂಚಿಸುತ್ತವೆ. ಪೊಲೀಸ್ ಪ್ರಧಾನ ಕಛೇರಿಯ ಅಜಾಕ್ ಶಾಖೆಯು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 2022 ರಿಂದ 2023 ರವರೆಗೆ ಈ ಸಮುದಾಯಗಳ ವಿರುದ್ಧದ ತೀವ್ರ ಅಪರಾಧಗಳಲ್ಲಿ 22% ರಷ್ಟು ಕಡಿಮೆಯಾಗಿದೆ.

2022ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧ 11,384 ಅಪರಾಧ ಪ್ರಕರಣಗಳು ವರದಿಯಾಗಿದ್ದು, 2023ರಲ್ಲಿ ಈ ಸಂಖ್ಯೆ 11,171ಕ್ಕೆ ಇಳಿಕೆಯಾಗಿದೆ. ಕೊಲೆ ಪ್ರಕರಣಗಳು 2022 ರಲ್ಲಿ 140 ರಿಂದ 2023 ರಲ್ಲಿ 121 ಕ್ಕೆ ಇಳಿಕೆ ಕಂಡಿದೆ. ಅಂತೆಯೇ, ಅದೇ ಅವಧಿಯಲ್ಲಿ ವರದಿಯಾದ ಲೈಂಗಿಕ ದೌರ್ಜನ್ಯ ಪ್ರಕರಣಗಳು 996 ರಿಂದ 883 ಕ್ಕೆ ಇಳಿದಿದೆ.

ರಾಜ್ಯದಾದ್ಯಂತ ಅಂಚಿನಲ್ಲಿರುವ ಸಮುದಾಯಗಳ ವಿರುದ್ಧದ ಅಪರಾಧಗಳ ಹಾಟ್‌ಸ್ಪಾಟ್‌ಗಳನ್ನು ಪೊಲೀಸರು ಗುರುತಿಸಿದ್ದಾರೆ. 2021 ರಲ್ಲಿ, ಅಂತಹ 906 ಹಾಟ್‌ಸ್ಪಾಟ್‌ಗಳಿದ್ದವು ಮತ್ತು 2023 ರ ವೇಳೆಗೆ, ಸಂಖ್ಯೆ 566 ಕ್ಕೆ ಇಳಿದಿದೆ.

ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ಸಿಂಘು ಗಡಿಯಲ್ಲಿ ರೈತರ ಮೇಲೆ ಬಲ ಪ್ರಯೋಗಕ್ಕೆ ನಿರ್ದೇಶನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...