Homeಮುಖಪುಟಮಧ್ಯಪ್ರದೇಶದ ಆದಿವಾಸಿ ಯುವಕನ ಕಸ್ಟಡಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಮಧ್ಯಪ್ರದೇಶದ ಆದಿವಾಸಿ ಯುವಕನ ಕಸ್ಟಡಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

- Advertisement -
- Advertisement -

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 25 ವರ್ಷದ ಆದಿವಾಸಿ ವ್ಯಕ್ತಿಯೊಬ್ಬರನ್ನು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಂದಿರುವ ಆರೋಪದ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಗುರುವಾರ ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮಧ್ಯಪ್ರದೇಶದ ಆದಿವಾಸಿ 

ಕಳ್ಳತನದ ಆರೋಪ ಹೊರಿಸಿ ದೇವ ಪಾರ್ಧಿ ಮತ್ತು ಅವರ ಚಿಕ್ಕಪ್ಪ ಗಂಗಾರಾಮ್ ಪಾರ್ಧಿ ಅವರನ್ನು ಪೊಲೀಸರು ಬಂಧಿಸಿದ್ದರು. ಅದೇ ದಿನ ರಾತ್ರಿ ದೇವ ಪಾರ್ಧಿ ಅವರ ಕುಟುಂಬಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. ಮೃತ ದೇವ ಪಾರ್ಧಿ ಅವರಿಗೆ ಜುಲೈನಲ್ಲಿ ವಿವಾಹ ನಿಶ್ಚಯವಾಗಿತ್ತು.

ಪೊಲೀಸ್ ಕಸ್ಟಡಿಯಲ್ಲಿ ಅವರು ಹೃದಯಾಘಾತದಿಂದ ನಿಧನರಾದರು ಎಂದು ಹೇಳಿಕೊಂಡರೂ, ಕುಟುಂಬವು ಪೊಲೀಸರ ವಿವರಣೆಯನ್ನು ತಿರಸ್ಕರಿಸಿದೆ. ಪೊಲೀಸರಿಂದ ಬಂಧನಕ್ಕೆ ಒಳಗಾದ ಇಬ್ಬರನ್ನೂ ಕಸ್ಟಡಿಯಲ್ಲಿ ಚಿತ್ರಹಿಂಸೆಗೆ ಒಳಪಡಿಸಲಾಗಿದೆ ಎಂದು ಕುಟುಂಬ ಆರೋಪಿಸಿದೆ.

ಗುರುವಾರ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ವಿಭಾಗೀಯ ಪೀಠವು ರಾಜ್ಯ ಪೊಲೀಸರು ತನಿಖೆಯನ್ನು “ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ” ನಡೆಸುತ್ತಿಲ್ಲ ಎಂದು ಹೇಳಿದೆ.

ತನಿಖೆಯನ್ನು ರಾಜ್ಯ ಪೊಲೀಸರ ಬಳಿ ಬಿಟ್ಟರೆ ಆರೋಪಿಗಳು ಪ್ರಾಸಿಕ್ಯೂಷನ್ ಅನ್ನು “ಪ್ರಭಾವಿಸುತ್ತಾರೆ”, ಅವರು “ತಮ್ಮದೇ ಆದ ಸಹ ಪೊಲೀಸರನ್ನು ರಕ್ಷಿಸುತ್ತಿದ್ದಾರೆ” ಎಂದು ಪೀಠ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ದೇವ ಪಾರ್ಧಿಯವರ “ಕಸ್ಟಡಿ ಸಾವಿನ ಬಗ್ಗೆ ನ್ಯಾಯಯುತ, ಪಾರದರ್ಶಕ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳುವಂತೆ” ಮತ್ತು ದೂರು ದಾಖಲಿಸಲು ತಕ್ಷಣವೇ ನಿರ್ದೇಶಿಸುವಂತೆ ನ್ಯಾಯಾಲಯ ಸಿಬಿಐಗೆ ಸೂಚಿಸಿತು.

ಪೊಲೀಸ್ ಅಧಿಕಾರಿಗಳು ಕಸ್ಟಡಿ ಸಾವಿಗೆ ಕಾರಣರೆಂದು ಕಂಡುಬಂದರೆ, ಅವರನ್ನು ಒಂದು ತಿಂಗಳೊಳಗೆ ಬಂಧಿಸಬೇಕು ಎಂದು ಪೀಠ ಇದೇ ವೇಳೆ ಆದೇಶಿಸಿದೆ. ಆರೋಪಿಗಳನ್ನು ಬಂಧಿಸಿದ 90 ದಿನಗಳ ಒಳಗೆ ತನಿಖೆಯನ್ನು ಪೂರ್ಣಗೊಳಿಸುವಂತೆಯೂ ಅದು ಸಿಬಿಐಗೆ ನಿರ್ದೇಶಿಸಿದೆ.

ಏಪ್ರಿಲ್‌ನಲ್ಲಿ ದೇವ ಪಾರ್ಧಿಯವರ ಸಾವಿನ ಕಾರಣದ ಬಗ್ಗೆ ಸುಪ್ರೀಂಕೋರ್ಟ್ ಅನುಮಾನಗಳನ್ನು ವ್ಯಕ್ತಪಡಿಸಿತ್ತು ಮತ್ತು ಮಧ್ಯಪ್ರದೇಶ ಪೊಲೀಸರು ತಮ್ಮ ಅಧಿಕಾರಿಗಳನ್ನು “ರಕ್ಷಿಸುತ್ತಿದ್ದಾರೆ” ಎಂದು ಟೀಕಿಸಿತ್ತು. ಮಧ್ಯಪ್ರದೇಶದ ಆದಿವಾಸಿ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಆಕ್ಷೇಪಾರ್ಹ’ ಪೋಸ್ಟ್‌ ಆರೋಪ – ಗುಜರಾತ್‌ನಲ್ಲಿ ಇಬ್ಬರ ಬಂಧನ

ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಆಕ್ಷೇಪಾರ್ಹ’ ಪೋಸ್ಟ್‌ ಆರೋಪ – ಗುಜರಾತ್‌ನಲ್ಲಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....