Homeಮುಖಪುಟಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ.

- Advertisement -
- Advertisement -

ಮಧ್ರಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಂತೂ ಇಂತೂ ತಮ್ಮ ಸಚಿವ ಸಂಪುಟ ವಿಸ್ತರಣೆ ಮುಗಿಸಿದ್ದಾರೆ. ಹೊಸ ಸರ್ಕಾರ ರಚನೆಗೆ ಕಾರಣರಾದ ಜ್ಯೋತಿರಾದಿತ್ಯ ಸಿಂಧಿಯಾ ಶಿಬಿರಕ್ಕೆ 14 ಸಚಿವ ಸ್ಥಾನಗಳು ಸಿಕ್ಕಿವೆ. ಇದರಿಂದ ಮಧ್ಯಪ್ರದೇಶದ ಬಿಜೆಪಿಯೊಳಗೆ ಮೊದಲ ಬಿರುಕುಗಳು ಕಾಣಿಸಿಕೊಂಡಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವಾರು ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದುದ್ದಕ್ಕೆ ಬೇಸರಗೊಂಡಿದ್ದಾರೆ. ಅವರ ಬೆಂಬಲಿಗರು ಸಚಿವ ಸ್ಥಾನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಪಕ್ಷದ ಹಿರಿಯ ನಾಯಕಿ ಉಮಾ ಭಾರತಿಯವರು ಪಕ್ಷದ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರಿಗೆ ಪತ್ರ ಬರೆದಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ದೂರಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದ ಉಮಾ ಭಾರತಿಗೆ ಪಕ್ಷದ ಕಾರ್ಯದರ್ಶಿ ಸುಹಾಸ್ ಭಗತ್ ಮತ್ತು ರಾಜ್ಯ ಘಟಕದ ಬಿಜೆಪಿ ಸಂಸದೀಯ ಉಸ್ತುವಾರಿ ವಿನಯ್ ಸಹಸ್ರಬುಧೆ ಅವರಿಗೆ ಪತ್ರ ಬರೆದಿದ್ದಾರೆ. ಈ ಸಂಪುಟ ವಿಸ್ತರಣೆಯು ಜಾತಿ ಮತ್ತು ಪ್ರಾದೇಶಿಕ ಸಮಗ್ರತೆಯಿಂದ ಕೂಡಿಲ್ಲವಾದ್ದರಿಮದ ಪಟ್ಟಿಯನ್ನು ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

33 ಸದಸ್ಯರ ಕ್ಯಾಬಿನೆಟ್‌ನಲ್ಲಿ ಎಂಟು ಠಾಕೂರ್‌ಗಳು, ಮೂವರು ಬ್ರಾಹ್ಮಣರು, ಒಬ್ಬ ಕಾಯಸ್ಥ, ಒಬ್ಬ ಸಿಖ್, ಪರಿಶಿಷ್ಟ ಪಂಗಡದ ನಾಲ್ವರು ಮತ್ತು ನಾಲ್ವರು ಪರಿಶಿಷ್ಟ ಜಾತಿಯ ಮಂತ್ರಿಗಳು ಸೇರಿದ್ದಾರೆ.

ಮ್ಯಾಂಡ್‌ಸೋರ್ ಸ್ಥಳೀಯ ಬಿಜೆಪಿ ಶಾಸಕ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರ ಬೆಂಬಲಿಗರು ತಮ್ಮ ನಾಯಕನನ್ನು ಸಚಿವಾಲಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿ ಧರಣಿ ನಡೆಸಿದ್ದಾರೆ.

ರಮೇಶ್ ಮೆಂಡೋಲಾ ಅವರನ್ನು ಸಂಪುಟದಿಂದ ಹೊರಗಿಡುವುದು ಕೈಲಾಶ್ ವಿಜಯವರ್ಗಿಯಾಗೆ ರಾಜಕೀಯ ಸೋಲು ಎಂದು ಪರಿಗಣಿಸಲಾಗಿದೆ. ಅವರು ಈ ಮೊದಲು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಲ್ಲಿದ್ದಾಗ ಅವರ ಪ್ರಬಲ ಎದುರಾಳಿ ಎಂದು ಪರಿಗಣಿಸಲ್ಪಟ್ಟಿದ್ದರು. ಅವರ ಬೆಂಬಲಿಗರು ಕೂಡ ಪ್ರತಿಭಟನೆ ನಡೆಸಿದ್ದಾರೆ.

ಅದೇ ರೀತಿ ದಿವಾಸ್‌ನಲ್ಲಿ ಗಾಯತ್ರಿ ರಾಜೇ ಪವಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ. 14 ರಲ್ಲಿ 10 ಮಂದಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ನಾಲ್ವರು ರಾಜ್ಯ ಸಚಿವ ಸ್ಥಾನ ಪಡೆದಿದ್ದಾರೆ.

ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ ತೀರ್ಮಾನ ಸ್ಪಷ್ಟವಾಗಿ ಗೋಚರಿಸಿದೆ. ತಮ್ಮ ಆಪ್ತರನ್ನೇ ಸಂಪುಟದಲ್ಲಿ ಸೇರಿಸಿಕೊಳ್ಳಲಾಗದಿದ್ದುದ್ದಕ್ಕೆ ಮುಖ್ಯಮಂತ್ರಿ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...