Homeಮುಖಪುಟಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ.

- Advertisement -
- Advertisement -

ಮಧ್ರಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಂತೂ ಇಂತೂ ತಮ್ಮ ಸಚಿವ ಸಂಪುಟ ವಿಸ್ತರಣೆ ಮುಗಿಸಿದ್ದಾರೆ. ಹೊಸ ಸರ್ಕಾರ ರಚನೆಗೆ ಕಾರಣರಾದ ಜ್ಯೋತಿರಾದಿತ್ಯ ಸಿಂಧಿಯಾ ಶಿಬಿರಕ್ಕೆ 14 ಸಚಿವ ಸ್ಥಾನಗಳು ಸಿಕ್ಕಿವೆ. ಇದರಿಂದ ಮಧ್ಯಪ್ರದೇಶದ ಬಿಜೆಪಿಯೊಳಗೆ ಮೊದಲ ಬಿರುಕುಗಳು ಕಾಣಿಸಿಕೊಂಡಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವಾರು ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದುದ್ದಕ್ಕೆ ಬೇಸರಗೊಂಡಿದ್ದಾರೆ. ಅವರ ಬೆಂಬಲಿಗರು ಸಚಿವ ಸ್ಥಾನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಪಕ್ಷದ ಹಿರಿಯ ನಾಯಕಿ ಉಮಾ ಭಾರತಿಯವರು ಪಕ್ಷದ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರಿಗೆ ಪತ್ರ ಬರೆದಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ದೂರಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದ ಉಮಾ ಭಾರತಿಗೆ ಪಕ್ಷದ ಕಾರ್ಯದರ್ಶಿ ಸುಹಾಸ್ ಭಗತ್ ಮತ್ತು ರಾಜ್ಯ ಘಟಕದ ಬಿಜೆಪಿ ಸಂಸದೀಯ ಉಸ್ತುವಾರಿ ವಿನಯ್ ಸಹಸ್ರಬುಧೆ ಅವರಿಗೆ ಪತ್ರ ಬರೆದಿದ್ದಾರೆ. ಈ ಸಂಪುಟ ವಿಸ್ತರಣೆಯು ಜಾತಿ ಮತ್ತು ಪ್ರಾದೇಶಿಕ ಸಮಗ್ರತೆಯಿಂದ ಕೂಡಿಲ್ಲವಾದ್ದರಿಮದ ಪಟ್ಟಿಯನ್ನು ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

33 ಸದಸ್ಯರ ಕ್ಯಾಬಿನೆಟ್‌ನಲ್ಲಿ ಎಂಟು ಠಾಕೂರ್‌ಗಳು, ಮೂವರು ಬ್ರಾಹ್ಮಣರು, ಒಬ್ಬ ಕಾಯಸ್ಥ, ಒಬ್ಬ ಸಿಖ್, ಪರಿಶಿಷ್ಟ ಪಂಗಡದ ನಾಲ್ವರು ಮತ್ತು ನಾಲ್ವರು ಪರಿಶಿಷ್ಟ ಜಾತಿಯ ಮಂತ್ರಿಗಳು ಸೇರಿದ್ದಾರೆ.

ಮ್ಯಾಂಡ್‌ಸೋರ್ ಸ್ಥಳೀಯ ಬಿಜೆಪಿ ಶಾಸಕ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರ ಬೆಂಬಲಿಗರು ತಮ್ಮ ನಾಯಕನನ್ನು ಸಚಿವಾಲಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿ ಧರಣಿ ನಡೆಸಿದ್ದಾರೆ.

ರಮೇಶ್ ಮೆಂಡೋಲಾ ಅವರನ್ನು ಸಂಪುಟದಿಂದ ಹೊರಗಿಡುವುದು ಕೈಲಾಶ್ ವಿಜಯವರ್ಗಿಯಾಗೆ ರಾಜಕೀಯ ಸೋಲು ಎಂದು ಪರಿಗಣಿಸಲಾಗಿದೆ. ಅವರು ಈ ಮೊದಲು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಲ್ಲಿದ್ದಾಗ ಅವರ ಪ್ರಬಲ ಎದುರಾಳಿ ಎಂದು ಪರಿಗಣಿಸಲ್ಪಟ್ಟಿದ್ದರು. ಅವರ ಬೆಂಬಲಿಗರು ಕೂಡ ಪ್ರತಿಭಟನೆ ನಡೆಸಿದ್ದಾರೆ.

ಅದೇ ರೀತಿ ದಿವಾಸ್‌ನಲ್ಲಿ ಗಾಯತ್ರಿ ರಾಜೇ ಪವಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ. 14 ರಲ್ಲಿ 10 ಮಂದಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ನಾಲ್ವರು ರಾಜ್ಯ ಸಚಿವ ಸ್ಥಾನ ಪಡೆದಿದ್ದಾರೆ.

ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ ತೀರ್ಮಾನ ಸ್ಪಷ್ಟವಾಗಿ ಗೋಚರಿಸಿದೆ. ತಮ್ಮ ಆಪ್ತರನ್ನೇ ಸಂಪುಟದಲ್ಲಿ ಸೇರಿಸಿಕೊಳ್ಳಲಾಗದಿದ್ದುದ್ದಕ್ಕೆ ಮುಖ್ಯಮಂತ್ರಿ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...