Homeಮುಖಪುಟಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ.

- Advertisement -
- Advertisement -

ಮಧ್ರಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಂತೂ ಇಂತೂ ತಮ್ಮ ಸಚಿವ ಸಂಪುಟ ವಿಸ್ತರಣೆ ಮುಗಿಸಿದ್ದಾರೆ. ಹೊಸ ಸರ್ಕಾರ ರಚನೆಗೆ ಕಾರಣರಾದ ಜ್ಯೋತಿರಾದಿತ್ಯ ಸಿಂಧಿಯಾ ಶಿಬಿರಕ್ಕೆ 14 ಸಚಿವ ಸ್ಥಾನಗಳು ಸಿಕ್ಕಿವೆ. ಇದರಿಂದ ಮಧ್ಯಪ್ರದೇಶದ ಬಿಜೆಪಿಯೊಳಗೆ ಮೊದಲ ಬಿರುಕುಗಳು ಕಾಣಿಸಿಕೊಂಡಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವಾರು ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದುದ್ದಕ್ಕೆ ಬೇಸರಗೊಂಡಿದ್ದಾರೆ. ಅವರ ಬೆಂಬಲಿಗರು ಸಚಿವ ಸ್ಥಾನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಪಕ್ಷದ ಹಿರಿಯ ನಾಯಕಿ ಉಮಾ ಭಾರತಿಯವರು ಪಕ್ಷದ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರಿಗೆ ಪತ್ರ ಬರೆದಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ದೂರಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದ ಉಮಾ ಭಾರತಿಗೆ ಪಕ್ಷದ ಕಾರ್ಯದರ್ಶಿ ಸುಹಾಸ್ ಭಗತ್ ಮತ್ತು ರಾಜ್ಯ ಘಟಕದ ಬಿಜೆಪಿ ಸಂಸದೀಯ ಉಸ್ತುವಾರಿ ವಿನಯ್ ಸಹಸ್ರಬುಧೆ ಅವರಿಗೆ ಪತ್ರ ಬರೆದಿದ್ದಾರೆ. ಈ ಸಂಪುಟ ವಿಸ್ತರಣೆಯು ಜಾತಿ ಮತ್ತು ಪ್ರಾದೇಶಿಕ ಸಮಗ್ರತೆಯಿಂದ ಕೂಡಿಲ್ಲವಾದ್ದರಿಮದ ಪಟ್ಟಿಯನ್ನು ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

33 ಸದಸ್ಯರ ಕ್ಯಾಬಿನೆಟ್‌ನಲ್ಲಿ ಎಂಟು ಠಾಕೂರ್‌ಗಳು, ಮೂವರು ಬ್ರಾಹ್ಮಣರು, ಒಬ್ಬ ಕಾಯಸ್ಥ, ಒಬ್ಬ ಸಿಖ್, ಪರಿಶಿಷ್ಟ ಪಂಗಡದ ನಾಲ್ವರು ಮತ್ತು ನಾಲ್ವರು ಪರಿಶಿಷ್ಟ ಜಾತಿಯ ಮಂತ್ರಿಗಳು ಸೇರಿದ್ದಾರೆ.

ಮ್ಯಾಂಡ್‌ಸೋರ್ ಸ್ಥಳೀಯ ಬಿಜೆಪಿ ಶಾಸಕ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರ ಬೆಂಬಲಿಗರು ತಮ್ಮ ನಾಯಕನನ್ನು ಸಚಿವಾಲಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿ ಧರಣಿ ನಡೆಸಿದ್ದಾರೆ.

ರಮೇಶ್ ಮೆಂಡೋಲಾ ಅವರನ್ನು ಸಂಪುಟದಿಂದ ಹೊರಗಿಡುವುದು ಕೈಲಾಶ್ ವಿಜಯವರ್ಗಿಯಾಗೆ ರಾಜಕೀಯ ಸೋಲು ಎಂದು ಪರಿಗಣಿಸಲಾಗಿದೆ. ಅವರು ಈ ಮೊದಲು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಲ್ಲಿದ್ದಾಗ ಅವರ ಪ್ರಬಲ ಎದುರಾಳಿ ಎಂದು ಪರಿಗಣಿಸಲ್ಪಟ್ಟಿದ್ದರು. ಅವರ ಬೆಂಬಲಿಗರು ಕೂಡ ಪ್ರತಿಭಟನೆ ನಡೆಸಿದ್ದಾರೆ.

ಅದೇ ರೀತಿ ದಿವಾಸ್‌ನಲ್ಲಿ ಗಾಯತ್ರಿ ರಾಜೇ ಪವಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ. 14 ರಲ್ಲಿ 10 ಮಂದಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ನಾಲ್ವರು ರಾಜ್ಯ ಸಚಿವ ಸ್ಥಾನ ಪಡೆದಿದ್ದಾರೆ.

ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ ತೀರ್ಮಾನ ಸ್ಪಷ್ಟವಾಗಿ ಗೋಚರಿಸಿದೆ. ತಮ್ಮ ಆಪ್ತರನ್ನೇ ಸಂಪುಟದಲ್ಲಿ ಸೇರಿಸಿಕೊಳ್ಳಲಾಗದಿದ್ದುದ್ದಕ್ಕೆ ಮುಖ್ಯಮಂತ್ರಿ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...