Homeಮುಖಪುಟಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ.

- Advertisement -
- Advertisement -

ಮಧ್ರಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಂತೂ ಇಂತೂ ತಮ್ಮ ಸಚಿವ ಸಂಪುಟ ವಿಸ್ತರಣೆ ಮುಗಿಸಿದ್ದಾರೆ. ಹೊಸ ಸರ್ಕಾರ ರಚನೆಗೆ ಕಾರಣರಾದ ಜ್ಯೋತಿರಾದಿತ್ಯ ಸಿಂಧಿಯಾ ಶಿಬಿರಕ್ಕೆ 14 ಸಚಿವ ಸ್ಥಾನಗಳು ಸಿಕ್ಕಿವೆ. ಇದರಿಂದ ಮಧ್ಯಪ್ರದೇಶದ ಬಿಜೆಪಿಯೊಳಗೆ ಮೊದಲ ಬಿರುಕುಗಳು ಕಾಣಿಸಿಕೊಂಡಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವಾರು ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದುದ್ದಕ್ಕೆ ಬೇಸರಗೊಂಡಿದ್ದಾರೆ. ಅವರ ಬೆಂಬಲಿಗರು ಸಚಿವ ಸ್ಥಾನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಪಕ್ಷದ ಹಿರಿಯ ನಾಯಕಿ ಉಮಾ ಭಾರತಿಯವರು ಪಕ್ಷದ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರಿಗೆ ಪತ್ರ ಬರೆದಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ದೂರಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದ ಉಮಾ ಭಾರತಿಗೆ ಪಕ್ಷದ ಕಾರ್ಯದರ್ಶಿ ಸುಹಾಸ್ ಭಗತ್ ಮತ್ತು ರಾಜ್ಯ ಘಟಕದ ಬಿಜೆಪಿ ಸಂಸದೀಯ ಉಸ್ತುವಾರಿ ವಿನಯ್ ಸಹಸ್ರಬುಧೆ ಅವರಿಗೆ ಪತ್ರ ಬರೆದಿದ್ದಾರೆ. ಈ ಸಂಪುಟ ವಿಸ್ತರಣೆಯು ಜಾತಿ ಮತ್ತು ಪ್ರಾದೇಶಿಕ ಸಮಗ್ರತೆಯಿಂದ ಕೂಡಿಲ್ಲವಾದ್ದರಿಮದ ಪಟ್ಟಿಯನ್ನು ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

33 ಸದಸ್ಯರ ಕ್ಯಾಬಿನೆಟ್‌ನಲ್ಲಿ ಎಂಟು ಠಾಕೂರ್‌ಗಳು, ಮೂವರು ಬ್ರಾಹ್ಮಣರು, ಒಬ್ಬ ಕಾಯಸ್ಥ, ಒಬ್ಬ ಸಿಖ್, ಪರಿಶಿಷ್ಟ ಪಂಗಡದ ನಾಲ್ವರು ಮತ್ತು ನಾಲ್ವರು ಪರಿಶಿಷ್ಟ ಜಾತಿಯ ಮಂತ್ರಿಗಳು ಸೇರಿದ್ದಾರೆ.

ಮ್ಯಾಂಡ್‌ಸೋರ್ ಸ್ಥಳೀಯ ಬಿಜೆಪಿ ಶಾಸಕ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರ ಬೆಂಬಲಿಗರು ತಮ್ಮ ನಾಯಕನನ್ನು ಸಚಿವಾಲಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿ ಧರಣಿ ನಡೆಸಿದ್ದಾರೆ.

ರಮೇಶ್ ಮೆಂಡೋಲಾ ಅವರನ್ನು ಸಂಪುಟದಿಂದ ಹೊರಗಿಡುವುದು ಕೈಲಾಶ್ ವಿಜಯವರ್ಗಿಯಾಗೆ ರಾಜಕೀಯ ಸೋಲು ಎಂದು ಪರಿಗಣಿಸಲಾಗಿದೆ. ಅವರು ಈ ಮೊದಲು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಲ್ಲಿದ್ದಾಗ ಅವರ ಪ್ರಬಲ ಎದುರಾಳಿ ಎಂದು ಪರಿಗಣಿಸಲ್ಪಟ್ಟಿದ್ದರು. ಅವರ ಬೆಂಬಲಿಗರು ಕೂಡ ಪ್ರತಿಭಟನೆ ನಡೆಸಿದ್ದಾರೆ.

ಅದೇ ರೀತಿ ದಿವಾಸ್‌ನಲ್ಲಿ ಗಾಯತ್ರಿ ರಾಜೇ ಪವಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ. 14 ರಲ್ಲಿ 10 ಮಂದಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ನಾಲ್ವರು ರಾಜ್ಯ ಸಚಿವ ಸ್ಥಾನ ಪಡೆದಿದ್ದಾರೆ.

ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ ತೀರ್ಮಾನ ಸ್ಪಷ್ಟವಾಗಿ ಗೋಚರಿಸಿದೆ. ತಮ್ಮ ಆಪ್ತರನ್ನೇ ಸಂಪುಟದಲ್ಲಿ ಸೇರಿಸಿಕೊಳ್ಳಲಾಗದಿದ್ದುದ್ದಕ್ಕೆ ಮುಖ್ಯಮಂತ್ರಿ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...