Homeಮುಖಪುಟಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ.

- Advertisement -
- Advertisement -

ಮಧ್ರಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಂತೂ ಇಂತೂ ತಮ್ಮ ಸಚಿವ ಸಂಪುಟ ವಿಸ್ತರಣೆ ಮುಗಿಸಿದ್ದಾರೆ. ಹೊಸ ಸರ್ಕಾರ ರಚನೆಗೆ ಕಾರಣರಾದ ಜ್ಯೋತಿರಾದಿತ್ಯ ಸಿಂಧಿಯಾ ಶಿಬಿರಕ್ಕೆ 14 ಸಚಿವ ಸ್ಥಾನಗಳು ಸಿಕ್ಕಿವೆ. ಇದರಿಂದ ಮಧ್ಯಪ್ರದೇಶದ ಬಿಜೆಪಿಯೊಳಗೆ ಮೊದಲ ಬಿರುಕುಗಳು ಕಾಣಿಸಿಕೊಂಡಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವಾರು ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದುದ್ದಕ್ಕೆ ಬೇಸರಗೊಂಡಿದ್ದಾರೆ. ಅವರ ಬೆಂಬಲಿಗರು ಸಚಿವ ಸ್ಥಾನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಪಕ್ಷದ ಹಿರಿಯ ನಾಯಕಿ ಉಮಾ ಭಾರತಿಯವರು ಪಕ್ಷದ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರಿಗೆ ಪತ್ರ ಬರೆದಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ದೂರಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದ ಉಮಾ ಭಾರತಿಗೆ ಪಕ್ಷದ ಕಾರ್ಯದರ್ಶಿ ಸುಹಾಸ್ ಭಗತ್ ಮತ್ತು ರಾಜ್ಯ ಘಟಕದ ಬಿಜೆಪಿ ಸಂಸದೀಯ ಉಸ್ತುವಾರಿ ವಿನಯ್ ಸಹಸ್ರಬುಧೆ ಅವರಿಗೆ ಪತ್ರ ಬರೆದಿದ್ದಾರೆ. ಈ ಸಂಪುಟ ವಿಸ್ತರಣೆಯು ಜಾತಿ ಮತ್ತು ಪ್ರಾದೇಶಿಕ ಸಮಗ್ರತೆಯಿಂದ ಕೂಡಿಲ್ಲವಾದ್ದರಿಮದ ಪಟ್ಟಿಯನ್ನು ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

33 ಸದಸ್ಯರ ಕ್ಯಾಬಿನೆಟ್‌ನಲ್ಲಿ ಎಂಟು ಠಾಕೂರ್‌ಗಳು, ಮೂವರು ಬ್ರಾಹ್ಮಣರು, ಒಬ್ಬ ಕಾಯಸ್ಥ, ಒಬ್ಬ ಸಿಖ್, ಪರಿಶಿಷ್ಟ ಪಂಗಡದ ನಾಲ್ವರು ಮತ್ತು ನಾಲ್ವರು ಪರಿಶಿಷ್ಟ ಜಾತಿಯ ಮಂತ್ರಿಗಳು ಸೇರಿದ್ದಾರೆ.

ಮ್ಯಾಂಡ್‌ಸೋರ್ ಸ್ಥಳೀಯ ಬಿಜೆಪಿ ಶಾಸಕ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರ ಬೆಂಬಲಿಗರು ತಮ್ಮ ನಾಯಕನನ್ನು ಸಚಿವಾಲಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿ ಧರಣಿ ನಡೆಸಿದ್ದಾರೆ.

ರಮೇಶ್ ಮೆಂಡೋಲಾ ಅವರನ್ನು ಸಂಪುಟದಿಂದ ಹೊರಗಿಡುವುದು ಕೈಲಾಶ್ ವಿಜಯವರ್ಗಿಯಾಗೆ ರಾಜಕೀಯ ಸೋಲು ಎಂದು ಪರಿಗಣಿಸಲಾಗಿದೆ. ಅವರು ಈ ಮೊದಲು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಲ್ಲಿದ್ದಾಗ ಅವರ ಪ್ರಬಲ ಎದುರಾಳಿ ಎಂದು ಪರಿಗಣಿಸಲ್ಪಟ್ಟಿದ್ದರು. ಅವರ ಬೆಂಬಲಿಗರು ಕೂಡ ಪ್ರತಿಭಟನೆ ನಡೆಸಿದ್ದಾರೆ.

ಅದೇ ರೀತಿ ದಿವಾಸ್‌ನಲ್ಲಿ ಗಾಯತ್ರಿ ರಾಜೇ ಪವಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ. 14 ರಲ್ಲಿ 10 ಮಂದಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ನಾಲ್ವರು ರಾಜ್ಯ ಸಚಿವ ಸ್ಥಾನ ಪಡೆದಿದ್ದಾರೆ.

ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ ತೀರ್ಮಾನ ಸ್ಪಷ್ಟವಾಗಿ ಗೋಚರಿಸಿದೆ. ತಮ್ಮ ಆಪ್ತರನ್ನೇ ಸಂಪುಟದಲ್ಲಿ ಸೇರಿಸಿಕೊಳ್ಳಲಾಗದಿದ್ದುದ್ದಕ್ಕೆ ಮುಖ್ಯಮಂತ್ರಿ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...