Homeಮುಖಪುಟಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಮಧ್ಯಪ್ರದೇಶ: ಶಿವರಾಜ್ ಚೌಹಾಣ್‌ ಕ್ಯಾಬಿನೆಟ್ ವಿಸ್ತರಣೆಗೆ ಉಮಾ ಭಾರತಿ ಬೇಸರ

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ.

- Advertisement -
- Advertisement -

ಮಧ್ರಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಂತೂ ಇಂತೂ ತಮ್ಮ ಸಚಿವ ಸಂಪುಟ ವಿಸ್ತರಣೆ ಮುಗಿಸಿದ್ದಾರೆ. ಹೊಸ ಸರ್ಕಾರ ರಚನೆಗೆ ಕಾರಣರಾದ ಜ್ಯೋತಿರಾದಿತ್ಯ ಸಿಂಧಿಯಾ ಶಿಬಿರಕ್ಕೆ 14 ಸಚಿವ ಸ್ಥಾನಗಳು ಸಿಕ್ಕಿವೆ. ಇದರಿಂದ ಮಧ್ಯಪ್ರದೇಶದ ಬಿಜೆಪಿಯೊಳಗೆ ಮೊದಲ ಬಿರುಕುಗಳು ಕಾಣಿಸಿಕೊಂಡಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವಾರು ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದುದ್ದಕ್ಕೆ ಬೇಸರಗೊಂಡಿದ್ದಾರೆ. ಅವರ ಬೆಂಬಲಿಗರು ಸಚಿವ ಸ್ಥಾನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಪಕ್ಷದ ಹಿರಿಯ ನಾಯಕಿ ಉಮಾ ಭಾರತಿಯವರು ಪಕ್ಷದ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರಿಗೆ ಪತ್ರ ಬರೆದಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ದೂರಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದ ಉಮಾ ಭಾರತಿಗೆ ಪಕ್ಷದ ಕಾರ್ಯದರ್ಶಿ ಸುಹಾಸ್ ಭಗತ್ ಮತ್ತು ರಾಜ್ಯ ಘಟಕದ ಬಿಜೆಪಿ ಸಂಸದೀಯ ಉಸ್ತುವಾರಿ ವಿನಯ್ ಸಹಸ್ರಬುಧೆ ಅವರಿಗೆ ಪತ್ರ ಬರೆದಿದ್ದಾರೆ. ಈ ಸಂಪುಟ ವಿಸ್ತರಣೆಯು ಜಾತಿ ಮತ್ತು ಪ್ರಾದೇಶಿಕ ಸಮಗ್ರತೆಯಿಂದ ಕೂಡಿಲ್ಲವಾದ್ದರಿಮದ ಪಟ್ಟಿಯನ್ನು ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

33 ಸದಸ್ಯರ ಕ್ಯಾಬಿನೆಟ್‌ನಲ್ಲಿ ಎಂಟು ಠಾಕೂರ್‌ಗಳು, ಮೂವರು ಬ್ರಾಹ್ಮಣರು, ಒಬ್ಬ ಕಾಯಸ್ಥ, ಒಬ್ಬ ಸಿಖ್, ಪರಿಶಿಷ್ಟ ಪಂಗಡದ ನಾಲ್ವರು ಮತ್ತು ನಾಲ್ವರು ಪರಿಶಿಷ್ಟ ಜಾತಿಯ ಮಂತ್ರಿಗಳು ಸೇರಿದ್ದಾರೆ.

ಮ್ಯಾಂಡ್‌ಸೋರ್ ಸ್ಥಳೀಯ ಬಿಜೆಪಿ ಶಾಸಕ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರ ಬೆಂಬಲಿಗರು ತಮ್ಮ ನಾಯಕನನ್ನು ಸಚಿವಾಲಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿ ಧರಣಿ ನಡೆಸಿದ್ದಾರೆ.

ರಮೇಶ್ ಮೆಂಡೋಲಾ ಅವರನ್ನು ಸಂಪುಟದಿಂದ ಹೊರಗಿಡುವುದು ಕೈಲಾಶ್ ವಿಜಯವರ್ಗಿಯಾಗೆ ರಾಜಕೀಯ ಸೋಲು ಎಂದು ಪರಿಗಣಿಸಲಾಗಿದೆ. ಅವರು ಈ ಮೊದಲು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಲ್ಲಿದ್ದಾಗ ಅವರ ಪ್ರಬಲ ಎದುರಾಳಿ ಎಂದು ಪರಿಗಣಿಸಲ್ಪಟ್ಟಿದ್ದರು. ಅವರ ಬೆಂಬಲಿಗರು ಕೂಡ ಪ್ರತಿಭಟನೆ ನಡೆಸಿದ್ದಾರೆ.

ಅದೇ ರೀತಿ ದಿವಾಸ್‌ನಲ್ಲಿ ಗಾಯತ್ರಿ ರಾಜೇ ಪವಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದ 22 ಕಾಂಗ್ರೆಸ್ ಶಾಸಕರಲ್ಲಿ 14 ಜನರನ್ನು ಮಂತ್ರಿಗಳಾಗಿ ಸೇರಿಸಿಕೊಳ್ಳಲಾಗಿದೆ. ಅವರಲ್ಲಿ 11 ಮಂದಿ ಜ್ಯೋತಿರಾದಿತ್ಯ ಸಿಂಧಿಯಾರವರ ಆಪ್ತರಾಗಿದ್ದಾರೆ. 14 ರಲ್ಲಿ 10 ಮಂದಿ ಕ್ಯಾಬಿನೆಟ್ ಮಂತ್ರಿಗಳು ಮತ್ತು ನಾಲ್ವರು ರಾಜ್ಯ ಸಚಿವ ಸ್ಥಾನ ಪಡೆದಿದ್ದಾರೆ.

ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ ತೀರ್ಮಾನ ಸ್ಪಷ್ಟವಾಗಿ ಗೋಚರಿಸಿದೆ. ತಮ್ಮ ಆಪ್ತರನ್ನೇ ಸಂಪುಟದಲ್ಲಿ ಸೇರಿಸಿಕೊಳ್ಳಲಾಗದಿದ್ದುದ್ದಕ್ಕೆ ಮುಖ್ಯಮಂತ್ರಿ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...