Homeಮುಖಪುಟಮಧ್ಯಪ್ರದೇಶ: ಗುಂಪಿನ ಮೇಲೆ ಕಾರು ಹತ್ತಿಸಿ ಅಪರಿಚಿತ ಪರಾರಿ

ಮಧ್ಯಪ್ರದೇಶ: ಗುಂಪಿನ ಮೇಲೆ ಕಾರು ಹತ್ತಿಸಿ ಅಪರಿಚಿತ ಪರಾರಿ

- Advertisement -
- Advertisement -

ಭೋಪಾಲ್‌: ವೇಗವಾಗಿ ಬಂದ ಕಾರು ಜನರ ಮೇಲೆ ಹರಿದು ಹದಿಹರೆಯದ ಯುವಕ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌‌ನ ದುರ್ಗಾ ಪೂಜೆಯಲ್ಲಿ ಶನಿವಾರ ನಡೆದಿದೆ.

ಈ ಘಟನೆಯ ವೀಡಿಯೋವನ್ನು, ಘಟನಾ ಸ್ಥಳದಲ್ಲಿದ್ದವರು ಹಂಚಿಕೊಂಡಿದ್ದು, ಕಾರು ಚಾಲಕ ಗುಂಪಿನ ಮೇಲೆ ಕಾರು ಚಲಾಯಿಸಿದ ಬಳಿಕ ಕಾರನ್ನು ಹಿಂದಕ್ಕೆ ಓಡಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. 16 ವರ್ಷದ ಹುಡುಗನು ಕಾರಿಗೆ ಸಿಲುಕಿ ಕಾರು ಆತನನ್ನು ಕೆಲವು ದೂರ ಎಳೆದೋಯ್ದಿದೆ. ಗಾಯಗೊಂಡ ಯುವಕ ಗಂಭೀರ ಸ್ಥಿತಿಯಲ್ಲಿದ್ದಾನೆ ಎಂದು ವರದಿಯಾಗಿದೆ.

ಭೋಪಾಲ್ ರೈಲ್ವೇ ನಿಲ್ದಾಣದ ಹೊರಗಿನ ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ ಅವರ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.

ಸಿಸಿಟಿವಿ ದೃಶ್ಯಾವಳಿ ಹಾಗೂ ಇತರ ಭಕ್ತಾದಿಗಳು ಸೆರೆ ಹಿಡಿದಿರುವ ದೃಶ್ಯಗಳ ಆಧಾರದಲ್ಲಿ ಆರೋಪಿಯನ್ನು ಹಿಡಿಯಲು ಯತ್ನಿಸಲಾಗುವುದು ಎಂದು ಭೋಪಾಲ್‌ ಡಿಐಜಿ ಇರ್ಷಾದ್ ವಾಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಅವರು ಇದ್ದ ಕಾರು ಹರಿದ ಬಳಿಕ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಫ್‌ಐಆರ್‌ ದಾಖಲಾದ ನಂತರದಲ್ಲಿ ಜನರ ಗುಂಪಿನ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಛತ್ತೀಸ್‌ಘಡದ ಜಶ್‌ಪುರ ಘಟನೆ

ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ದುರ್ಗಾದೇವಿಯ ವಿಗ್ರಹವನ್ನು ವಿಸರ್ಜಿಸಲು ತೆರಳುತ್ತಿದ್ದ ಭಕ್ತರ ಮೇಲೆ ವೇಗವಾಗಿ ಬಂದ ಕಾರು ಹರಿದು ನಾಲ್ವರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಪಾತಲಗಾಂವ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಳೆ ಮುರಿತದಿಂದ ಗಂಭೀರವಾಗಿರುವವರನ್ನು ಎಕ್ಸ್‌ರೇಗಾಗಿ ಇತರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಬ್ಲಾಕ್ ಮೆಡಿಕಲ್ ಆಫೀಸರ್ ಜೇಮ್ಸ್ ಮಿಂಜ್ ಮಾಹಿತಿ ನೀಡಿದ್ದಾರೆ.

“ಜನರ ಸಾವಿಗೆ ಕಾರಣರಾದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. 21 ವರ್ಷದ ಬಬ್ಲು ವಿಶ್ವಕರ್ಮ ಮತ್ತು  26 ವರ್ಷದ ಶಿಶುಪಾಲ್ ಸಾಹು ಆರೋಪಿಗಳು, ಇಬ್ಬರೂ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ನಿವಾಸಿಗಳಾಗಿದ್ದು, ಛತ್ತೀಸ್‌ಗಢದ ಮೂಲಕ ಹಾದು ಹೋಗುತ್ತಿದ್ದರು” ಎಂದು ಜಶ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮಾಹಿತಿ ನೀಡಿದ್ದಾರೆ.

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ಸೂಚಿಸಿದ್ದಾರೆ. “ಜಶ್‌ಪುರ ಘಟನೆ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದ ಪೊಲೀಸರ ವಿರುದ್ಧವೂ ಕ್ರಮ ಕೈಗೊಂಡು ವಿಚಾರಣೆಗೆ ಆದೇಶಿಸಲಾಗಿದೆ. ಸಂತ್ರಸ್ತರಿಗೆ ನ್ಯಾಯ ಒದಗಿಸಲಾಗುವುದು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ಜಶ್‌ಪುರ ಘಟನೆ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಲಾಯಿತು. ತಪ್ಪಿತಸ್ಥರೆಂದು ಕಂಡುಬಂದ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಪ್ರಥಮ ಕ್ರಮ ಕೈಗೊಳ್ಳಲಾಗಿದೆ. ವಿಚಾರಣೆಗೆ ಆದೇಶಿಸಲಾಗಿದೆ. ಯಾರನ್ನೂ ಬಿಡುವುದಿಲ್ಲ. ಎಲ್ಲರಿಗೂ ನ್ಯಾಯವನ್ನು ನೀಡಲಾಗುತ್ತದೆ. ಅಗಲಿದವರ ಆತ್ಮಕ್ಕೆ ದೇವರು ಶಾಂತಿಯನ್ನು ನೀಡಲಿ” ಎಂದು ಬಘೇಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...