Homeಮುಖಪುಟಮಧ್ಯಪ್ರದೇಶ: ಆಂಬ್ಯುಲೆನ್ಸ್‌ ಇಲ್ಲದೆ ತಳ್ಳೋಗಾಡಿ ಬಳಕೆ; ಘಟನೆ ವರದಿ ಮಾಡಿದ ಮೂವರು ಪತ್ರಕರ್ತರ ಮೇಲೆ ಎಫ್‌ಐಆರ್‌

ಮಧ್ಯಪ್ರದೇಶ: ಆಂಬ್ಯುಲೆನ್ಸ್‌ ಇಲ್ಲದೆ ತಳ್ಳೋಗಾಡಿ ಬಳಕೆ; ಘಟನೆ ವರದಿ ಮಾಡಿದ ಮೂವರು ಪತ್ರಕರ್ತರ ಮೇಲೆ ಎಫ್‌ಐಆರ್‌

- Advertisement -
- Advertisement -

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ಗಳ ಕೊರತೆ ಎದುರಾಗಿದ್ದು, ಅನಾರೋಗ್ಯ ಪೀಡಿತ ತಂದೆಯನ್ನು ತಳ್ಳುವ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿಯ ಕುರಿತು ವರದಿ ಮಾಡಿದ ಮೂವರು ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ.

ಪತ್ರಕರ್ತರಾದ ಕುಂಜ್‌ಬಿಹಾರಿ ಕೌರವ್, ಅನಿಲ್ ಶರ್ಮಾ ಮತ್ತು ಎನ್‌.ಕೆ.ಭಟೆಲೆ ಅವರು ‘ಪತ್ರಿಕಾ’, ‘ನ್ಯೂಸ್ 18’ ಮತ್ತು ‘ಲಲ್ಲೂರಾಮ್ ಡಾಟ್ ಕಾಮ್‌’ನಲ್ಲಿ ವರದಿ ಮಾಡಿದ್ದಾರೆ. ಆಂಬ್ಯುಲೆನ್ಸ್ ಕೊರತೆಯ ಕುರಿತು ಬೆಳಕು ಚೆಲ್ಲಿದ್ದಕ್ಕೆ ಪತ್ರಕರ್ತರ ಮೇಲೆ ಕ್ರಮ ಜರುಗಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕತೆ), 505-2 (ವರ್ಗಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಾಬೋ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೀವ್ ಕೌರವ್ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಸುಳ್ಳು ಮತ್ತು ಆಧಾರ ರಹಿತ ಸುದ್ದಿಗಳನ್ನು ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಭಿಂಡ್ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಸ್ ತನಿಖಾ ತಂಡವನ್ನು ರಚಿಸಿದ್ದರು. ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವು ವರದಿ ನೀಡಿದ್ದು, ಆಂಬ್ಯುಲೆನ್ಸ್‌ ಸೇವೆಗಾಗಿ ಕುಟುಂಬವು ಯಾವುದೇ ಕರೆಯನ್ನು ಮಾಡಿಲ್ಲ ಎಂದು ತಿಳಿಸಲಾಗಿದೆ.

ಜ್ಞಾನ ಪ್ರಸಾದ್ ವಿಶ್ವಕರ್ಮ ಎಂದು ಗುರುತಿಸಲಾದ ವೃದ್ಧನನ್ನು ಮೊದಲು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತೇ ಹೊರತು ಸರ್ಕಾರಿ ಆಸ್ಪತ್ರೆಗಲ್ಲ ಎಂದು ತನಿಖಾ ತಂಡ ಹೇಳಿಕೊಂಡಿದೆ.

ಆದರೆ ತನಿಖಾ ತಂಡದ ಹೇಳಿಕೆಗಳಿಗೆ ವ್ಯತಿರಿಕ್ತವಾಗಿ ವೃದ್ಧನ ಕುಟುಂಬ ಸದಸ್ಯರು ಹೇಳಿಕೆ ನೀಡಿದ್ದಾರೆ.

“ಆಂಬ್ಯುಲೆನ್ಸ್‌ಗೆ ಕರೆ ಮಾಡಿದರೂ ಸಿಗದ ಕಾರಣ ಸುಮಾರು 5 ಕಿಲೋಮೀಟರ್ ತಳ್ಳೊ ಗಾಡಿಯನ್ನು ಬಳಸಬೇಕಾಯಿತು” ಎಂದು ಜ್ಞಾನಪ್ರಸಾದ್ ವಿಶ್ವಕರ್ಮ ಅವರ ಮಕ್ಕಳಾದ ಹರಿಕೃಷ್ಣ ಮತ್ತು ಪುಷ್ಪಾ ಆರೋಪಿಸಿದ್ದಾರೆ.

ಸದರಿ ಕುಟುಂಬಕ್ಕೆ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿರುವುದನ್ನು ಪುಷ್ಪಾ ಅವರು ಅಲ್ಲಗಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

“ನಮಗೆ ಪಿಎಂ ಆವಾಸ್ ಯೋಜನೆಯ ಒಂದು ಕಂತು ಮಾತ್ರ ಸಿಕ್ಕಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಜಿಲ್ಲಾಡಳಿತದ ತಂಡವು ನನ್ನ ಸಹೋದರನ ಮನೆಯ ಚಿತ್ರಗಳನ್ನು ತೆಗೆದುಕೊಂಡಿತು” ಎಂದು ತಿಳಿಸಿದ್ದಾರೆ.

ಕೆಲವು ಸರ್ಕಾರಿ ಅಧಿಕಾರಿಗಳು ಖಾಲಿ ಪೇಪರ್ ಮೇಲೆ ಸಹಿ ಹಾಕುವಂತೆ ಒತ್ತಾಯಿಸಿದರು ಎಂದು ಹರಿಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಆದರೆ ಈ ಆರೋಪಕ್ಕೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...