Homeಮುಖಪುಟಮಧ್ಯಪ್ರದೇಶ: ಆಂಬ್ಯುಲೆನ್ಸ್‌ ಇಲ್ಲದೆ ತಳ್ಳೋಗಾಡಿ ಬಳಕೆ; ಘಟನೆ ವರದಿ ಮಾಡಿದ ಮೂವರು ಪತ್ರಕರ್ತರ ಮೇಲೆ ಎಫ್‌ಐಆರ್‌

ಮಧ್ಯಪ್ರದೇಶ: ಆಂಬ್ಯುಲೆನ್ಸ್‌ ಇಲ್ಲದೆ ತಳ್ಳೋಗಾಡಿ ಬಳಕೆ; ಘಟನೆ ವರದಿ ಮಾಡಿದ ಮೂವರು ಪತ್ರಕರ್ತರ ಮೇಲೆ ಎಫ್‌ಐಆರ್‌

- Advertisement -
- Advertisement -

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ಗಳ ಕೊರತೆ ಎದುರಾಗಿದ್ದು, ಅನಾರೋಗ್ಯ ಪೀಡಿತ ತಂದೆಯನ್ನು ತಳ್ಳುವ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿಯ ಕುರಿತು ವರದಿ ಮಾಡಿದ ಮೂವರು ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ.

ಪತ್ರಕರ್ತರಾದ ಕುಂಜ್‌ಬಿಹಾರಿ ಕೌರವ್, ಅನಿಲ್ ಶರ್ಮಾ ಮತ್ತು ಎನ್‌.ಕೆ.ಭಟೆಲೆ ಅವರು ‘ಪತ್ರಿಕಾ’, ‘ನ್ಯೂಸ್ 18’ ಮತ್ತು ‘ಲಲ್ಲೂರಾಮ್ ಡಾಟ್ ಕಾಮ್‌’ನಲ್ಲಿ ವರದಿ ಮಾಡಿದ್ದಾರೆ. ಆಂಬ್ಯುಲೆನ್ಸ್ ಕೊರತೆಯ ಕುರಿತು ಬೆಳಕು ಚೆಲ್ಲಿದ್ದಕ್ಕೆ ಪತ್ರಕರ್ತರ ಮೇಲೆ ಕ್ರಮ ಜರುಗಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕತೆ), 505-2 (ವರ್ಗಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಾಬೋ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೀವ್ ಕೌರವ್ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಸುಳ್ಳು ಮತ್ತು ಆಧಾರ ರಹಿತ ಸುದ್ದಿಗಳನ್ನು ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಭಿಂಡ್ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಸ್ ತನಿಖಾ ತಂಡವನ್ನು ರಚಿಸಿದ್ದರು. ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವು ವರದಿ ನೀಡಿದ್ದು, ಆಂಬ್ಯುಲೆನ್ಸ್‌ ಸೇವೆಗಾಗಿ ಕುಟುಂಬವು ಯಾವುದೇ ಕರೆಯನ್ನು ಮಾಡಿಲ್ಲ ಎಂದು ತಿಳಿಸಲಾಗಿದೆ.

ಜ್ಞಾನ ಪ್ರಸಾದ್ ವಿಶ್ವಕರ್ಮ ಎಂದು ಗುರುತಿಸಲಾದ ವೃದ್ಧನನ್ನು ಮೊದಲು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತೇ ಹೊರತು ಸರ್ಕಾರಿ ಆಸ್ಪತ್ರೆಗಲ್ಲ ಎಂದು ತನಿಖಾ ತಂಡ ಹೇಳಿಕೊಂಡಿದೆ.

ಆದರೆ ತನಿಖಾ ತಂಡದ ಹೇಳಿಕೆಗಳಿಗೆ ವ್ಯತಿರಿಕ್ತವಾಗಿ ವೃದ್ಧನ ಕುಟುಂಬ ಸದಸ್ಯರು ಹೇಳಿಕೆ ನೀಡಿದ್ದಾರೆ.

“ಆಂಬ್ಯುಲೆನ್ಸ್‌ಗೆ ಕರೆ ಮಾಡಿದರೂ ಸಿಗದ ಕಾರಣ ಸುಮಾರು 5 ಕಿಲೋಮೀಟರ್ ತಳ್ಳೊ ಗಾಡಿಯನ್ನು ಬಳಸಬೇಕಾಯಿತು” ಎಂದು ಜ್ಞಾನಪ್ರಸಾದ್ ವಿಶ್ವಕರ್ಮ ಅವರ ಮಕ್ಕಳಾದ ಹರಿಕೃಷ್ಣ ಮತ್ತು ಪುಷ್ಪಾ ಆರೋಪಿಸಿದ್ದಾರೆ.

ಸದರಿ ಕುಟುಂಬಕ್ಕೆ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿರುವುದನ್ನು ಪುಷ್ಪಾ ಅವರು ಅಲ್ಲಗಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

“ನಮಗೆ ಪಿಎಂ ಆವಾಸ್ ಯೋಜನೆಯ ಒಂದು ಕಂತು ಮಾತ್ರ ಸಿಕ್ಕಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಜಿಲ್ಲಾಡಳಿತದ ತಂಡವು ನನ್ನ ಸಹೋದರನ ಮನೆಯ ಚಿತ್ರಗಳನ್ನು ತೆಗೆದುಕೊಂಡಿತು” ಎಂದು ತಿಳಿಸಿದ್ದಾರೆ.

ಕೆಲವು ಸರ್ಕಾರಿ ಅಧಿಕಾರಿಗಳು ಖಾಲಿ ಪೇಪರ್ ಮೇಲೆ ಸಹಿ ಹಾಕುವಂತೆ ಒತ್ತಾಯಿಸಿದರು ಎಂದು ಹರಿಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಆದರೆ ಈ ಆರೋಪಕ್ಕೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...