Homeಮುಖಪುಟಮಧ್ಯಪ್ರದೇಶ: ನೀಟ್ ಪರೀಕ್ಷೆಯಲ್ಲಿ 6 ಅಂಕ ಗಳಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ!

ಮಧ್ಯಪ್ರದೇಶ: ನೀಟ್ ಪರೀಕ್ಷೆಯಲ್ಲಿ 6 ಅಂಕ ಗಳಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ!

ವೈದ್ಯಕೀಯ ಆಕಾಂಕ್ಷಿಗಳಿಗಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಆಕೆ 590 ಅಂಕಗಳನ್ನು ಗಳಿಸಿದ್ದಾಳೆ ಎಂದು ಆಕೆಯ ಪೋಷಕರು 18 ವರ್ಷದ ವಿಧಿ ಸೂರ್ಯವಂಶಿ ಅವರನ್ನು ಉತ್ಸಾಹಗೊಳಿಸಲು ಪ್ರಯತ್ನಿಸಿದ್ದರು.

- Advertisement -
- Advertisement -

ರಾಷ್ಟ್ರೀಯ ಅರ್ಹತೆ-ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಕೇವಲ ಆರು ಅಂಕ ಪಡೆದಿದ್ದರಿಂದ ಆಘಾತಕ್ಕೊಳಗಾದ ಯುವತಿಯೊಬ್ಬಳು ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಆಕಾಂಕ್ಷಿಗಳಿಗಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಆಕೆ 590 ಅಂಕ ಗಳಿಸಿದ್ದಾಳೆ ಎಂದು ಆಕೆಯ ಪೋಷಕರು 18 ವರ್ಷದ ವಿಧಿ ಸೂರ್ಯವಂಶಿ ಅವರನ್ನು ಉತ್ಸಾಹಗೊಳಿಸಲು ಪ್ರಯತ್ನಿಸಿದ್ದರು.

ಆಕೆಗೆ 590 ಅಂಕ ದೊರೆತಿವೆ ಎಂದು ಪೋಷಕರು ತಿಳಿಸಿದರೂ, ತೀವ್ರ ಖಿನ್ನತೆಗೆ ಒಳಗಾದ ಯುವತಿ ಅಕ್ಟೋಬರ್ 20 ರಂದು ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. “ವಿಧಿ ಮಂಗಳವಾರ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕುಟುಂಬವು ಮರುದಿನ ಈ ವಿಷಯವನ್ನು ವರದಿ ಮಾಡಿದೆ. ಪ್ರಾಥಮಿಕ ತನಿಖೆಯು ನೀಟ್‌ನಲ್ಲಿನ ಕಡಿಮೆ ಅಂಕಗಳು ಆತ್ಮಹತ್ಯೆಗೆ ಕಾರಣವಾಯಿತು ಎಂದು ಸೂಚಿಸುತ್ತದೆ. ಆದರೆ ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪರಾಸಿಯಾ ಪೊಲೀಸ್ ಠಾಣೆಯ ಉಸ್ತುವಾರಿ ಸುಮೇರ್ ಸಿಂಗ್ ಜಗ್ಟೆ ಹೇಳಿದ್ದಾರೆ.

ಇದನ್ನೂ ಓದಿ: ಜೆಇಇ-ನೀಟ್ ‘ಮನುನೀತಿ’ ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈಗಾಗಲೇ ನೀಟ್ ಪರೀಕ್ಷೆಯ ಎಲ್ಲಾ ವಿಭಾಗಗಳ ನೀಟ್ ತಾತ್ಕಾಲಿಕ ಉತ್ತರದ ಕೀಗಳನ್ನು ಮತ್ತು ಅಭ್ಯರ್ಥಿಗಳ ನೀಟ್ ಒಎಂಆರ್ ಹಾಳೆಗಳನ್ನು ಬಿಡುಗಡೆ ಮಾಡಿದೆ. ಚಿಂದ್ವಾರ ಜಿಲ್ಲೆಯಲ್ಲಿ ಪರಾಸಿಯಾ ಪೊಲೀಸರು ತನಿಖೆ ನಡೆಸುತ್ತಿರುವ ವರದಿಯನ್ನು ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

“ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ ಇಂತಹ ಗಂಭೀರ ನಷ್ಟವನ್ನು ಹೇಗೆ ಒಪ್ಪಿಕೊಳ್ಳುವುದು. ಈ ವಿಷಯದ ಬಗ್ಗೆ ತಕ್ಷಣವೇ ಅರಿವು ಮೂಡಿಸಿ, ಗಂಭೀರ ನಷ್ಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ” ಎಂದು ಚಿಂದ್ವರ ಸಂಸದ ಗುರುವಾರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ಈ ಹಿಂದೆಯೂ ತಮಿಳುನಾಡಿನಲ್ಲಿ ನಿಡಿ ಪರೀಕ್ಷೆಗೆ ಹೆದರಿ ಅನೇಕ ಯುವ ಮನಸ್ಸುಗಳು ಆತ್ಮಹತ್ಯೆಯ ಮನಸ್ಸು ಮಾಡಿದ್ದವು. ಕೇವಲ ಒಂದು ಪರೀಕ್ಷೆಗೆ ಹೆದರಿ ತಮ್ಮ ಜೀವನವನ್ನು ಕೊನೆಗೊಳಿಸಿಕೊಳ್ಳುವುದು ಅತ್ಯಂತ ಹೇಡಿತನದ ಕೆಲಸ. ಹಾಗಾಗಿ ಅವರಿಗೆ ನಮ್ಮ ಸಮಾಜ ಮತ್ತು ಸರ್ಕಾರ ಮಾನಸಿಕ ಸ್ಥೈರ್ಯ ತುಂಬುವಂತಹ ಕ್ರಮಗಳನ್ನು ಕೈಗೊಂಡು ಬೆಳೆಯುವ ಮುನ್ನವೆ ಬಾಡಿಹೋಗುವ ಜೀವಗಳನ್ನು ಉಳಿಸಿಕೊಳ್ಳಬೇಕಾಗಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...