Homeಮುಖಪುಟಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರವಹಿಸಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ಧರ್ಮೇಂದ್ರ ಪ್ರಧಾನ್ ಅಲ್ಲ.

- Advertisement -
- Advertisement -

ಈ ವರ್ಷದ ಮಾರ್ಚ್‌ನಲ್ಲಿ ದೇಶ ಕೋವಿಡ್ ಭಯದಲ್ಲಿದ್ದಾಗ ಮಧ್ಯಪ್ರದೇಶದಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿ 22 ಕಾಂಗ್ರೆಸ್ ಶಾಸಕರನ್ನು ರಾಜೀನಾಮೆ ಕೊಡಿಸಿ ಕಾಂಗ್ರೆಸ್ ಸರ್ಕಾರ ಬೀಳಿಸಿ, ತಾನು ಅಧಿಕಾರದ ಗದ್ದುಗೆಯೇರಿತ್ತು. ಈ ರೀತಿಯಾಗಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಿ ಸಿಎಂ ಕಮಲ್ ನಾಥ್ ಅವರನ್ನು ಪದಚ್ಯುತಗೊಳಿಸುವಲ್ಲಿ ಪ್ರಧಾನಿ ಮೋದಿಯವರು ಪ್ರಮುಖ ಪಾತ್ರ ವಹಿಸಿದ್ದರು’ ಎಂದು ಇಂದೋರ್‌ನಲ್ಲಿ ಬುಧವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕೈಲಾಸ್ ವಿಜಯವರ್ಗಿಯಾ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಷ್ಟು ದಿನ ಕಾಂಗ್ರೆಸ್ ಪಕ್ಷದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದೊಂದಿಗೆ ಮುನಿಸಿಕೊಂಡು ತನ್ನ ಬೆಂಬಲಿಗ 22 ಶಾಸಕರ ಜೊತೆಗೆ ರಾಜೀನಾಮೆ ನೀಡಿದ್ದರು. ಆ ನಂತರವಷ್ಟೇ ಅವರು ಬಿಜೆಪಿ ಸೇರಿದ್ದರು ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಕಮಲ್‌ ನಾಥ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿನ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಪ್ರಧಾನಿ ಮೋದಿಯನ್ನು ದೂರಿದ್ದರು.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹಾಜರಿದ್ದ ಸಂದರ್ಭದಲ್ಲಿಯೇ ಮಾತನಾಡಿರುವ ವಿಜಯ ವರ್ಗಿಯಾ “ಈ ವಿಚಾರವನ್ನು ನಾನು ಮೊದಲ ಬಾರಿಗೆ ಸಾರ್ವಜನಿಕಗೊಳಿಸುತ್ತಿದ್ದೇನೆ. ಹೀಗಾಗಿ ನೀವೂ ಸಹ ಯಾರಿಗೂ ಹೇಳಬೇಡಿ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರವಹಿಸಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ಧರ್ಮೇಂದ್ರ ಪ್ರಧಾನ್ ಅಲ್ಲ” ಎಂದು ಹೇಳಿದ್ದಾರೆ.

ಈ ವರ್ಷದ ಜೂನ್‌ನಲ್ಲಿಯೂ ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ “ಕಮಲ್ ನಾಥ್ ಸರ್ಕಾರವನ್ನು ಬಿಳೀಸುವಲ್ಲಿ ಬಿಜೆಪಿ ಕೇಂದ್ರ ನಾಯಕರು ಕೆಲಸ ಮಾಡಿದ್ದರು” ಎಂದು ಹೇಳಿದ್ದರು. ಆದರೆ ಅವರು ನಿರ್ಧಿಷ್ಟ ಹೆಸರುಗಳನ್ನು ಬಹಿರಂಗಪಡಿಸಿರಲಿಲ್ಲ.

“ಸಾಂವಿಧಾನಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಸಂವಿಧಾನಿಕ ರೀತಿಯಲ್ಲಿ ಕೆಳಗಿಳಿಸುವವರು ಪ್ರಧಾನಿ ನರೇಂದ್ರ ಮೋದಿ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. “ಕಾಂಗ್ರೆಸ್ ಸರ್ಕಾರ ಉರುಳಲು ಪ್ರಧಾನಿ ಮೋದಿಯೇ ಕಾರಣ ಎಂದು ಮೊದಲ ದಿನದಿಂದಲೇ ನಾವು ಹೇಳುತ್ತಿದ್ದೇವೆ. ಆದರೆ, ಕಮಲ್ ನಾಥ್ ಸರ್ಕಾರದ ಪತನಕ್ಕೆ ಕಾಂಗ್ರೆಸ್‌ನ ಆಂತರಿಕ ಜಗಳವೇ ಕಾರಣ ಎಂದು ಬಿಜೆಪಿ ಹೇಳುತ್ತಿತ್ತು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸತ್ಯವನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ” ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ನರೇಂದ್ರ ಸಲೂಜಾ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...