Homeಮುಖಪುಟಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರವಹಿಸಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ಧರ್ಮೇಂದ್ರ ಪ್ರಧಾನ್ ಅಲ್ಲ.

- Advertisement -
- Advertisement -

ಈ ವರ್ಷದ ಮಾರ್ಚ್‌ನಲ್ಲಿ ದೇಶ ಕೋವಿಡ್ ಭಯದಲ್ಲಿದ್ದಾಗ ಮಧ್ಯಪ್ರದೇಶದಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿ 22 ಕಾಂಗ್ರೆಸ್ ಶಾಸಕರನ್ನು ರಾಜೀನಾಮೆ ಕೊಡಿಸಿ ಕಾಂಗ್ರೆಸ್ ಸರ್ಕಾರ ಬೀಳಿಸಿ, ತಾನು ಅಧಿಕಾರದ ಗದ್ದುಗೆಯೇರಿತ್ತು. ಈ ರೀತಿಯಾಗಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಿ ಸಿಎಂ ಕಮಲ್ ನಾಥ್ ಅವರನ್ನು ಪದಚ್ಯುತಗೊಳಿಸುವಲ್ಲಿ ಪ್ರಧಾನಿ ಮೋದಿಯವರು ಪ್ರಮುಖ ಪಾತ್ರ ವಹಿಸಿದ್ದರು’ ಎಂದು ಇಂದೋರ್‌ನಲ್ಲಿ ಬುಧವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕೈಲಾಸ್ ವಿಜಯವರ್ಗಿಯಾ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಷ್ಟು ದಿನ ಕಾಂಗ್ರೆಸ್ ಪಕ್ಷದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದೊಂದಿಗೆ ಮುನಿಸಿಕೊಂಡು ತನ್ನ ಬೆಂಬಲಿಗ 22 ಶಾಸಕರ ಜೊತೆಗೆ ರಾಜೀನಾಮೆ ನೀಡಿದ್ದರು. ಆ ನಂತರವಷ್ಟೇ ಅವರು ಬಿಜೆಪಿ ಸೇರಿದ್ದರು ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಕಮಲ್‌ ನಾಥ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿನ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಪ್ರಧಾನಿ ಮೋದಿಯನ್ನು ದೂರಿದ್ದರು.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹಾಜರಿದ್ದ ಸಂದರ್ಭದಲ್ಲಿಯೇ ಮಾತನಾಡಿರುವ ವಿಜಯ ವರ್ಗಿಯಾ “ಈ ವಿಚಾರವನ್ನು ನಾನು ಮೊದಲ ಬಾರಿಗೆ ಸಾರ್ವಜನಿಕಗೊಳಿಸುತ್ತಿದ್ದೇನೆ. ಹೀಗಾಗಿ ನೀವೂ ಸಹ ಯಾರಿಗೂ ಹೇಳಬೇಡಿ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರವಹಿಸಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ಧರ್ಮೇಂದ್ರ ಪ್ರಧಾನ್ ಅಲ್ಲ” ಎಂದು ಹೇಳಿದ್ದಾರೆ.

ಈ ವರ್ಷದ ಜೂನ್‌ನಲ್ಲಿಯೂ ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ “ಕಮಲ್ ನಾಥ್ ಸರ್ಕಾರವನ್ನು ಬಿಳೀಸುವಲ್ಲಿ ಬಿಜೆಪಿ ಕೇಂದ್ರ ನಾಯಕರು ಕೆಲಸ ಮಾಡಿದ್ದರು” ಎಂದು ಹೇಳಿದ್ದರು. ಆದರೆ ಅವರು ನಿರ್ಧಿಷ್ಟ ಹೆಸರುಗಳನ್ನು ಬಹಿರಂಗಪಡಿಸಿರಲಿಲ್ಲ.

“ಸಾಂವಿಧಾನಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಸಂವಿಧಾನಿಕ ರೀತಿಯಲ್ಲಿ ಕೆಳಗಿಳಿಸುವವರು ಪ್ರಧಾನಿ ನರೇಂದ್ರ ಮೋದಿ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. “ಕಾಂಗ್ರೆಸ್ ಸರ್ಕಾರ ಉರುಳಲು ಪ್ರಧಾನಿ ಮೋದಿಯೇ ಕಾರಣ ಎಂದು ಮೊದಲ ದಿನದಿಂದಲೇ ನಾವು ಹೇಳುತ್ತಿದ್ದೇವೆ. ಆದರೆ, ಕಮಲ್ ನಾಥ್ ಸರ್ಕಾರದ ಪತನಕ್ಕೆ ಕಾಂಗ್ರೆಸ್‌ನ ಆಂತರಿಕ ಜಗಳವೇ ಕಾರಣ ಎಂದು ಬಿಜೆಪಿ ಹೇಳುತ್ತಿತ್ತು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸತ್ಯವನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ” ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ನರೇಂದ್ರ ಸಲೂಜಾ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...