Homeಮುಖಪುಟಸೋದರ ಮಾವನೊಂದಿಗೆ ಮಾತನಾಡಿದ ಯುವತಿಯರ ಮೇಲೆ ಸಂಬಂಧಿಕರಿಂದಲೇ ಮಾರಣಾಂತಿಕ ಹಲ್ಲೆ

ಸೋದರ ಮಾವನೊಂದಿಗೆ ಮಾತನಾಡಿದ ಯುವತಿಯರ ಮೇಲೆ ಸಂಬಂಧಿಕರಿಂದಲೇ ಮಾರಣಾಂತಿಕ ಹಲ್ಲೆ

- Advertisement -
- Advertisement -

ಸೋದರ ಮಾವನೊಂದಿಗೆ ಪೋನಿನಲ್ಲಿ ಮಾತನಾಡಿದ ಕಾರಣಕ್ಕೆ ಇಬ್ಬರು ಬುಡಕಟ್ಟು ಯುವತಿಯರ ಮೇಲೆ ಸಂಬಂಧಿಕರು ಸಾರ್ವಜನಿಕ ಪ್ರದೇಶದಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದಲ್ಲಿ ನಡೆದಿರುವ ಈ ಕೃತ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,  ವೀಡಿಯೊಗಳಲ್ಲಿ ಇಬ್ಬರು ಸಹೋದರಿಯರ ಮೇಲೆ ಏಳು ಮಂದಿ ಸಂಬಂಧಿಕರು, ಕಪಾಳಮೋಕ್ಷ ಮಾಡುವುದು, ಒದೆಯುವುದು, ಕೂದಲು ಹಿಡಿದು ಎಳೆದೊಯ್ಯುವುದು, ಕಟ್ಟಿಗೆಗಳಿಂದ ಬಡಿಯುವ ಅಮಾನವೀಯ ದೃಶ್ಯಗಳು ಸೆರೆಯಾಗಿದೆ.

ಸಹೋದರಿಯರಾದ ಬುಡಕಟ್ಟು ಯುವತಿಯರ ಮೇಲೆ ಕುಟುಂಬ ಸದಸ್ಯರು ಸಾರ್ವಜನಿಕ ಸ್ಥಳದಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸುತ್ತಿದ್ದರೂ ಕೂಡ ಯಾರು ಸಹಾಯಕ್ಕೆ ಬಂದಿಲ್ಲ. ಅನೇಕ ಮಂದಿ ಅಲ್ಲೆ ನಿಂತು ಘಟನೆಯನ್ನು ಗಮನಿಸುತ್ತಾ, ವಿಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ, ಆದರೆ ಯುವತಿಯರ ಮೇಲೆ ನಡೆಯುತ್ತಿದ್ದ ಅಮಾನವೀಯ ಹಲ್ಲೆಯನ್ನು ತಡೆಯಲು ಪ್ರಯತ್ನಿಸಿಲ್ಲ.

ಈ ಅಮಾನವೀಯ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಪಿಪಾಲ್ವಾ ಗ್ರಾಮದಲ್ಲಿ ನಡೆದಿದೆ. ನದಿಯ ಬಳಿ ನಿಂತಿರುವ ಯುವತಿಯರ ಮೇಲೆ ತಮ್ಮ ಸೋದರಸಂಬಂಧಿಗಳ ತಂಡ ಥಳಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ ಮಹಡಿ ಮೇಲಿನಿಂದ ತಳ್ಳಿದ ಕಿಡಿಗೇಡಿಗಳು

ಜೂನ್ 22 ರಂದು ಈ ಘಟನೆ ನಡೆದಿದ್ದು, ಕೆಲವು ದಿನಗಳ ನಂತರ ಈ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ಗಮನಕ್ಕೆ ಬಂದ ನಂತರ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಹಲ್ಲೆಗೊಳಗಾದ ಯುವತಿಯರನ್ನು ವೈದ್ಯಕೀಯ ತಪಾಸಣೆಗಾಗಿ ಕಳುಹಿಸಲಾಗಿದ್ದು, ಹಲ್ಲೆಗೊಳಗಾದ ಒಬ್ಬ ಯುವತಿಯ ತಾಯಿ ಮತ್ತು ಸಹೋದರ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಚಿತ್ರಹಿಂಸೆ ಇಲ್ಲಿಯೇ ನಿಂತಿಲ್ಲ. ನದಿ ದಂಡೆಯಿಂದ ಹಳ್ಳಿಗೆ ಕರೆದೊಯ್ಯದು ಅಲ್ಲಿ ಮತ್ತೆ ಇಬ್ಬರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇ‌ತ್ತ ಅಲಿರಾಜ್‌ಪುರದಲ್ಲಿ, 19 ವರ್ಷದ ಯುವತಿಯನ್ನು ಮರಕ್ಕೆ ಕಟ್ಟಿ ಕೋಲುಗಳಿಂದ ಹೊಡೆದಿರುವ ಘಟನೆ ನಡೆದಿದೆ. ಮೂರು ತಿಂಗಳ ಹಿಂದೆ ಮದುವೆಯಾದ ಯುವತಿ ತನ್ನ ಗಂಡನನ್ನು ಬಿಟ್ಟು ತವರು ಮನೆಗೆ ಬಂದಿದ್ದಕ್ಕಾಗಿ ಕುಟುಂಬ ಸದಸ್ಯರು ಕೋಪಗೊಂಡಿದ್ದು, ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆಯಲಾಗಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿದ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...