Homeಚಳವಳಿನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

ನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

- Advertisement -
- Advertisement -

ರೈತ ಪ್ರತಿಭಟನೆ ಸ್ಥಳಕ್ಕೆ ಬಂದ ಬಿಜೆಪಿ ಸಂಸದರೊಬ್ಬರು ರೈತರ ಸಮಸ್ಯೆ ಬಗೆಹರಿಸುವುದಾಗಿ ಹೇಳಿ ನನಗೆ ಚಪ್ಪಾಳೆ ಹೊಡೆಯಿರಿ ಎಂದು ಕೇಳಿ, ರೈತರಿಂದ ಇಲ್ಲ ಎನಿಸಿಕೊಂಡಿರುವ ಮುಜುಗರದ ಘಟನೆ ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯಲ್ಲಿ ನಡೆದಿದೆ.

ಬೇತುಲ್‌ನ ಬಿಜೆಪಿ ಸಂಸದ ದುರ್ಗಾದಾಸ್ ಉಯ್ಕೆ ಹೀಗೆ ಮುಜುಗರಕ್ಕೆ ಒಳಗಾಗಿರುವ ಸಂಸದ. ರೈತರು ಪ್ರತಿಭಟನೆ ನಡೆಸುತ್ತಿದ್ದ ಬೆತುಲ್‌ನ ದಾಮ್‌ಜಿಪುರಕ್ಕೆ ಬಂದಿದ್ದ ಇವರು, ರೈತರ ಸಮಸ್ಯೆ ಬಗೆಹರಿಸುವ ಮಾತನಾಡಿ, ಬಾಲಿವುಡ್ ನಟ ನಾನಾ ಪಾಟೇಕರ್ ಅವರ ‘ಬಜಾವೋ ತಾಲಿ’ (ಚಪ್ಪಾಳೆ ಹೊಡೆಯಿರಿ) ಡೈಲಾಗ್ ಹೊಡೆದಿದ್ದಾರೆ. ಆದರೆ, ರೈತರು ಚಪ್ಪಾಳೆ ಹೊಡೆಯಲು ನಿರಾಕರಿಸಿದ್ದಾರೆ.

ಬೆತುಲ್‌ನ ದಾಮ್‌ಜಿಪುರದಲ್ಲಿ ಸುಮಾರು 40 ರಿಂದ 45 ಗ್ರಾಮಗಳ ರೈತರು ವಿದ್ಯುತ್‌ ಸಮಸ್ಯೆ ಬಗೆ ಹರಿಸುವಂತೆ ಪ್ರತಿಭಟನೆ ನಡೆಸುತ್ತಿದರು. ವಿದ್ಯುಚ್ಛಕ್ತಿ ಇಲಾಖೆಯ ಅಧಿಕಾರಿಗಳಲ್ಲದೆ, ಬಿಜೆಪಿ ಸಂಸದ ದುರ್ಗಾದಾಸ್ ಉಯ್ಕೆ , ಕಾಂಗ್ರೆಸ್ ಮುಖಂಡ ರಾಮು ಟೇಕಂ ಸಹ ರೈತರ ಬಳಿ ಚಳವಳಿಯನ್ನು ಬಿಡುವಂತೆ ಮಾತನಾಡಲು ಬಂದಿದ್ದರು.

ಇದನ್ನೂ ಓದಿ: ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

ರೈತರನ್ನುದ್ದೇಶಿಸಿ ಮಾತನಾಡಿದ ಸಂಸದ ದುರ್ಗಾದಾಸ್, “ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರ ಸಮಸ್ಯೆ ಬಗೆಹರಿಸುವ ಕುರಿತು ಮಾತನಾಡಿದರು. ಶೀಘ್ರದಲ್ಲೇ ನಿಮ್ಮ ಬೇಡಿಕೆ ಈಡೇರಿಸಲಾಗುವುದು. 12 ಗಂಟೆಗಳ ಕಾಲ ವಿದ್ಯುತ್ ವ್ಯವಸ್ಥೆ ಮಾಡಲಾಗುವುದು. 8 ದಿನಗಳಲ್ಲಿ ಈ ಸಮಸ್ಯೆ ಬಗೆಹರಿಸಲಾಗುವುದು” ಎಂದು ಹೇಳಿದ್ದಾರೆ.

ಬಳಿಕ ಈಗ ಚಪ್ಪಾಳೆ ತಟ್ಟಿ ಎಂದು ಕೇಳಿದ್ದಾರೆ. ಆದರೆ, ಬೇಡಿಕೆ ಈಡೇರುವವರೆಗೂ ನಾವು ಚಪ್ಪಾಳೆ ತಟ್ಟುವುದಿಲ್ಲ ಎಂದು ರೈತರು ಹೇಳಿದ್ದು, ರೈತರ ಮಾತಿನಿಂದ ಸಂಸದ ಮುಜಗರಕ್ಕೆ ಈಡಾಗಿದ್ದಾರೆ. ಇಷ್ಟೇ ಅಲ್ಲದೆ ರೈತರು ಕಿಸಾನ್ ಏಕ್ತಾ ಜಿಂದಾಬದ್ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆದರೆ, ಘಟನೆಯನ್ನು ಸಮರ್ಥಿಸಿಕೊಂಡಿರುವ ಸಂಸದ ’ನಾನು ಮನವೊಲಿಸಿದ ನಂತರ ರೈತರು ತಕ್ಷಣವೇ ಧರಣಿಯನ್ನು ಕೈಬಿಟ್ಟರು’ ಎಂದಿದ್ದಾರೆ.

’ದಾಮಜೀಪುರ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ವಿದ್ಯುತ್ ಇಲಾಖೆ ಉನ್ನತಾಧಿಕಾರಿಗಳನ್ನು ಕರೆಸಿ 8 ದಿನದೊಳಗೆ ರೈತರ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಆದೇಶಿಸಲಾಗಿದೆ.
ಭರವಸೆ ನೀಡಿದ ನಂತರ ರೈತರು ಧರಣಿಯನ್ನು ಅಂತ್ಯಗೊಳಿಸಿದ್ದಾರೆ’ ಎಂದು ಸಂಸದ ಟ್ವೀಟ್ ಮಾಡಿದ್ದಾರೆ.

ಡಿಸೆಂಬರ್‌ನಲ್ಲೂ ರೈತರು ವಿದ್ಯುತ್‌ ಕಂಪನಿ ನೀಡುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ 15 ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿಲಾಗಿತ್ತು. ಆದರೆ ಸಮಸ್ಯೆ ಬಗೆಹರಿಯದ ಕಾರಣ ಹೊಲಗಳಲ್ಲಿ ಬೆಳೆ ಒಣಗಲಾರಂಭಿಸಿತ್ತು. ಆದ್ದರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...